Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....