Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...