Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...