Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...