Homeಕರ್ನಾಟಕಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ-...

ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ದಲಿತ ಬಾಲಕಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಶಾಲೆಯ ಮುಖ್ಯಸ್ಥನ ವಿರುದ್ಧ ಗುರುತರವಾದ ಆರೋಪ ಬಂದಿದೆ.

“ಬಲವಂತವಾಗಿ ಎರಡು ಬಕೆಟ್ ನೀರು ಕುಡಿಸಿದ್ದರಿಂದ ಬಾಲಕಿ ಸಾವನ್ನಪ್ಪಿದ್ದಾಳೆ” ಎಂಬ ದೂರುಗಳು ವ್ಯಕ್ತವಾಗಿವೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ ತೇಜಸ್ವಿನಿಯವರನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಮಂಜಪ್ಪ ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. “ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ‘ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ’ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ ಎಂಬುದು ತಿಳಿಯಿತು” ಎಂದು ನೋವು ತೋಡಿಕೊಂಡಿದ್ದಾರೆ.

“ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

13 ವರ್ಷದ ತೇಜಸ್ವಿನಿ 8ನೇ ಕ್ಲಾಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ತಿಳಿಸಿದ್ದಾರೆ.

ಖಾಸಗಿ ವಸತಿ ಶಾಲೆಯ ಸಿಬ್ಬಂದಿ ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ.

“ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿರಿ: ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, “ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...