Homeಕರ್ನಾಟಕಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ-...

ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ದಲಿತ ಬಾಲಕಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಶಾಲೆಯ ಮುಖ್ಯಸ್ಥನ ವಿರುದ್ಧ ಗುರುತರವಾದ ಆರೋಪ ಬಂದಿದೆ.

“ಬಲವಂತವಾಗಿ ಎರಡು ಬಕೆಟ್ ನೀರು ಕುಡಿಸಿದ್ದರಿಂದ ಬಾಲಕಿ ಸಾವನ್ನಪ್ಪಿದ್ದಾಳೆ” ಎಂಬ ದೂರುಗಳು ವ್ಯಕ್ತವಾಗಿವೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ ತೇಜಸ್ವಿನಿಯವರನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಮಂಜಪ್ಪ ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. “ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ‘ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ’ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ ಎಂಬುದು ತಿಳಿಯಿತು” ಎಂದು ನೋವು ತೋಡಿಕೊಂಡಿದ್ದಾರೆ.

“ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

13 ವರ್ಷದ ತೇಜಸ್ವಿನಿ 8ನೇ ಕ್ಲಾಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ತಿಳಿಸಿದ್ದಾರೆ.

ಖಾಸಗಿ ವಸತಿ ಶಾಲೆಯ ಸಿಬ್ಬಂದಿ ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ.

“ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿರಿ: ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, “ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...