Homeಕರ್ನಾಟಕಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ-...

ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ದಲಿತ ಬಾಲಕಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಶಾಲೆಯ ಮುಖ್ಯಸ್ಥನ ವಿರುದ್ಧ ಗುರುತರವಾದ ಆರೋಪ ಬಂದಿದೆ.

“ಬಲವಂತವಾಗಿ ಎರಡು ಬಕೆಟ್ ನೀರು ಕುಡಿಸಿದ್ದರಿಂದ ಬಾಲಕಿ ಸಾವನ್ನಪ್ಪಿದ್ದಾಳೆ” ಎಂಬ ದೂರುಗಳು ವ್ಯಕ್ತವಾಗಿವೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ ತೇಜಸ್ವಿನಿಯವರನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಮಂಜಪ್ಪ ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. “ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ‘ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ’ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ ಎಂಬುದು ತಿಳಿಯಿತು” ಎಂದು ನೋವು ತೋಡಿಕೊಂಡಿದ್ದಾರೆ.

“ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

13 ವರ್ಷದ ತೇಜಸ್ವಿನಿ 8ನೇ ಕ್ಲಾಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ತಿಳಿಸಿದ್ದಾರೆ.

ಖಾಸಗಿ ವಸತಿ ಶಾಲೆಯ ಸಿಬ್ಬಂದಿ ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ.

“ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿರಿ: ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, “ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....