Homeಕರ್ನಾಟಕಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ-...

ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ದಲಿತ ಬಾಲಕಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಶಾಲೆಯ ಮುಖ್ಯಸ್ಥನ ವಿರುದ್ಧ ಗುರುತರವಾದ ಆರೋಪ ಬಂದಿದೆ.

“ಬಲವಂತವಾಗಿ ಎರಡು ಬಕೆಟ್ ನೀರು ಕುಡಿಸಿದ್ದರಿಂದ ಬಾಲಕಿ ಸಾವನ್ನಪ್ಪಿದ್ದಾಳೆ” ಎಂಬ ದೂರುಗಳು ವ್ಯಕ್ತವಾಗಿವೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ ತೇಜಸ್ವಿನಿಯವರನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಮಂಜಪ್ಪ ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. “ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ‘ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ’ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ ಎಂಬುದು ತಿಳಿಯಿತು” ಎಂದು ನೋವು ತೋಡಿಕೊಂಡಿದ್ದಾರೆ.

“ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

13 ವರ್ಷದ ತೇಜಸ್ವಿನಿ 8ನೇ ಕ್ಲಾಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ತಿಳಿಸಿದ್ದಾರೆ.

ಖಾಸಗಿ ವಸತಿ ಶಾಲೆಯ ಸಿಬ್ಬಂದಿ ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ.

“ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿರಿ: ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, “ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...