Homeಚಳವಳಿಜ.29 ರಂದು ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ: ತೀಸ್ತಾ ಸೆಟಲ್ವಾಡ್ ಭಾಗಿ

ಜ.29 ರಂದು ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ: ತೀಸ್ತಾ ಸೆಟಲ್ವಾಡ್ ಭಾಗಿ

ಸಹಬಾಳ್ವೆ ಕರ್ನಾಟಕ ಸಂಘಟನೆಯ ವತಿಯಿಂದ ರಾಜ್ಯದ ಹಲವೆಡೆ ಮನೆ-ಮನಕ್ಕೂ ಸಹಬಾಳ್ವೆ ಸಂದೇಶ ಮತ್ತು ಸ್ನೇಹ ಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಮತ್ತು ಗಾಂಧಿ ನೆನಪಿನಲ್ಲಿ ಜ.29ರಂದು ಶ್ರೀರಂಗಪಟ್ಟದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ ನಡೆಯಲಿದ್ದು, ಖ್ಯಾತ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಭಾಗವಹಿಸಲಿದ್ದಾರೆ. ಅಲ್ಲದೆ ಸಹಬಾಳ್ವೆ ಕರ್ನಾಟಕ ಸಂಘಟನೆಯ ವತಿಯಿಂದ ರಾಜ್ಯದ ಹಲವೆಡೆ ಮನೆ-ಮನಕ್ಕೂ ಸಹಬಾಳ್ವೆ ಸಂದೇಶ ಮತ್ತು ಸ್ನೇಹ ಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದಲ್ಲಿ ಮತ್ತು ದೇಶದಲ್ಲಿ ದ್ವೇಷ ಬಿತ್ತಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಮಹನೀಯರ ಚಾರಿತ್ರ್ಯವಧೆ ಮಾಡಲಾಗುತ್ತಿದೆ. ಸುಳ್ಳುಗಳನ್ನು ಬಿತ್ತಿ ಸಮುದಾಯಗಳನ್ನು ಎತ್ತಿ ಕಟ್ಟಲಾಗುತ್ತಿದೆ. ಇಂತಹ ದುಷ್ಕೃತ್ಯಗಳಿಗೆ ಜಿಲ್ಲೆಯನ್ನು ಬಲಿಕೊಡುತ್ತಿರುವುದು ದುರಂತ. ಇಂತಹ ವಿಷಮ ಸ್ಥಿತಿಯಲ್ಲಿ ಜಿಲ್ಲೆಯ ನೈಜ ಇತಿಹಾಸವನ್ನು, ಕೋಮು ಸೌಹಾರ್ದತೆಯನ್ನು ಜನರಿಗೆ ತಿಳಿಸಲು ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮತಾಂಧರು ಇತ್ತೀಚಿಗೆ ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂಬ ಸುಳ್ಳನ್ನು ಪಸರಿಸಲಾಗುತ್ತಿದೆ. ಅಸಲಿಗೆ ಅಂತಹ ವ್ಯಕ್ತಿಗಳು ಬದುಕಿದ್ದ ಯಾವುದೇ ದಾಖಲೆಗಳಿಲ್ಲ. (ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಫೋಟೊಗಳನ್ನು ಬಳಿಸಿ ಅವರಿಗೆ ಉರಿಗೌಡ, ನಂಜೇಗೌಡ ಎಂಬ ಹೆಸರು ಕೊಟ್ಟು ಸುಳ್ಳು ಸೃಷ್ಟಿಸಲಾಗುತ್ತಿದೆ.) ಈ ಕುರಿತು ಜನರಿಗೆ ಸತ್ಯದರ್ಶನ ಮಾಡುವುದಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀರಂಗಪಟ್ಟದ ಶ್ರೀರಂಗನಾಥ ದೇವಸ್ಥಾನದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾಮಾಜಿಕ ಕಾರ್ಯಕರ್ತ ಶಶಿಕಾಂತ್ ಸೆಂಥಿಲ್, ಗಾಂಧಿವಾದಿ ಡಾ.ಸುಜಯ್ ಕುಮಾರ್, ವಿಶ್ರಾಂತ ಕುಲಪತಿ ಸಬಿಹಾ ಭೂಮಿಗೌಡ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಬಡಗಲಪುರ ನಾಗೇಂದ್ರ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್.ಅಶೋಕ್, ಶಾಂತಿ ಪ್ರಕಾಶನದ ಮುಖ್ಯಸ್ಥರಾದ ಮಹಮದ್‌ ಕುಂಞ, ಸಮಾನ ಮನಸ್ಕರ ವೇದಿಕೆಯ ಪ್ರೊ.ಹುಲ್ಕೆರೆ ಮಹದೇವು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದುರವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಗೌರಿ ದಿನ: ‘ಹೊಸ ಭಾರತ’ದಲ್ಲಿ ಪತ್ರಿಕೋದ್ಯಮಕ್ಕಿರುವ ಬೆದರಿಕೆಗಳು ಕುರಿತು ಉಪನ್ಯಾಸ, ‘ಗೌರಿ’ ಸಿನಿಮಾ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...