Homeಎಲೆಮರೆಸ್ಲಂನಿಂದ ರಾಷ್ಟ್ರೀಯ ನಾಟಕ ಶಾಲೆ ತನಕ ಪಯಣಿಸಿದ ಗಟ್ಟಿ ಪ್ರತಿಭೆ ಸಹನಾ ಪಿಂಜಾರ..

ಸ್ಲಂನಿಂದ ರಾಷ್ಟ್ರೀಯ ನಾಟಕ ಶಾಲೆ ತನಕ ಪಯಣಿಸಿದ ಗಟ್ಟಿ ಪ್ರತಿಭೆ ಸಹನಾ ಪಿಂಜಾರ..

ಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್‌ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ಸಹನಾ ರೂಪುಗೊಂಡಿದ್ದಾರೆ.

- Advertisement -
- Advertisement -

ಕಳೆದ ಜನವರಿಯಲ್ಲಿ ಮೈಸೂರಿನ ಕುವೆಂಪು ನಗರದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯ ಮಕ್ಕಳು ಅಭಿನಯಿಸಿದ `ಪ್ಲೇಬ್ಯಾಕ್ ಥಿಯೇಟರ್’ ರಂಗಪ್ರಯೋಗ ರಂಗಾಸಕ್ತರ ಗಮನ ಸೆಳೆಯಿತು. ಇಂಡಿಯಾ ಫೌಂಡೇಷನ್ ಫಾರ್ ದ ಆರ್ಟ್ಸ್ ಸಂಸ್ಥೆಯ ಕಲಿಕಲಿಸು ಯೋಜನೆಯಡಿ ರಂಗಕರ್ಮಿ ರಿಯಾಜ್ ಸಿಹಿಮೊಗೆ ಮಕ್ಕಳಿಗೆ ತರಬೇತಿಗೊಳಿಸಿದ್ದರು.

ನಾಟಕ ಮಾಡಲು ಸಿದ್ಧವಿದ್ದ ಕಲಾವಿದರು ರಂಗಕ್ಕೆ ಬರುತ್ತಾರೆ, ನಾಟಕ ನೋಡಲು ಬಂದ ಪ್ರೇಕ್ಷಕರು ಅವರದ್ದೇ ಕಥೆ ಅಥವಾ ಘಟನೆಗಳನ್ನು ಹೇಳುತ್ತಾರೆ. ಪ್ರೇಕ್ಷಕರದೇ ಕಥೆ, ಘಟನೆಗಳನ್ನಿಟ್ಟುಕೊಂಡು ಸ್ಟೇಜಲ್ಲಿಯೇ ಕಲಾವಿದರು ಅಭಿನಯ ಮಾಡುತ್ತಾರೆ, ಇದು ನ್ಯೂಯಾರ್ಕ್ ಮೂಲದ `ಪ್ಲೇಬ್ಯಾಕ್ ಥಿಯೇಟರ್’ ಕಲ್ಪನೆಯ ಕನ್ನಡದ ಪ್ರಯೋಗ. ಈ ಪ್ರಯೋಗದ ಯಶಸ್ಸಿನ ಹಿಂದೆ ರಿಯಾಜ್ ಸಿಹಿಮೊಗೆಯ ಸಂಗಾತಿ ಸಹನಾ ಪಿಂಜಾರ ಇವರ ಕಲ್ಪನೆ ಮತ್ತು ನವೀನ ವಸ್ತ್ರವಿನ್ಯಾಸದ ಹೊಸತನವಿತ್ತು. ಇದೀಗ ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ `ಸಮಕಾಲೀನ ಕನ್ನಡ ರಂಗಭೂಮಿಯಲ್ಲಿ ರಂಗವಿನ್ಯಾಸ’ದ ಕುರಿತು ಪಿಹೆಚ್ ಡಿ ಪದವಿಗಾಗಿ ಸಂಶೋಧನ ಪ್ರಬಂಧವನ್ನು ಸಲ್ಲಿಸಿದ ಸಹನಾ ರಂಗಭೂಮಿಯ ಬಗೆಗೆ ತಾಜಾ ಅನ್ನಿಸುವ ಹೊಸ ಕಲ್ಪನೆಗಳನ್ನಿಟ್ಟುಕೊಂಡ ಕನಸುಗಾರ್ತಿ.

ಬಿರುಬಿಸಿಲ ಬಳ್ಳಾರಿಯ ಪರಿಸರದಲ್ಲಿ ರೂಪುಗೊಂಡ ಸಹನಾರ ರಂಗಭೂಮಿಯ ಪಯಣ ಕುತೂಹಲಕಾರಿಯಾಗಿದೆ. ಕಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್‌ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ಸಹನಾ ರೂಪುಗೊಳ್ಳುತ್ತಾರೆ.

ಬಾಲ್ಯದಲ್ಲಿಯೇ ಬೀದಿನಾಟಕಗಳ ಮೂಲಕ ರಂಗಪ್ರವೇಶ ಮಾಡಿದ ಸಹನಾ, `ನೀರು ಕೊಡಿ’ ಎಂಬ ಘೋಷಣೆ ಕೂಗಿದಾಗ, ಕೊಳಗೇರಿಗಳ ಹೆಣ್ಣು ಓದಲೇಬೇಕು ಎಂದು ಪ್ರಭುತ್ವದ ಎದುರು ನಿಂತು ಕೇಳಿದಾಗ ಅವರ ವಯಸ್ಸು ಕೇವಲ ಐದು. ಸಹನಾ ಬಳ್ಳಾರಿ ಜಿಲ್ಲೆ, ಕುರುಗೋಡು ತಾಲ್ಲೂಕಿನ ಎಚ್. ವೀರಾಪುರದ ಪಿ.ಬಾಲೇಸಾಬ್ ಮತ್ತು ಗೌರಿಬೀಯರ ಮಗಳು. ಬಾಲ್ಯದಲ್ಲಿಯೇ ಇವರ ಚುರುಕುತನ ಮತ್ತು ಮಾತುಗಾರಿಕೆ ಕಂಡ ಮಾಮ ಪಿ.ಅಬ್ದುಲ್ ಸಹನಾರಿಗೆ ರಂಗಭೂಮಿಯ ದೀಕ್ಷೆ ಕೊಟ್ಟರು. ಇಡೀ ಜಿಲ್ಲೆಯಾದ್ಯಂತ ಬೀದಿನಾಟಕ ಆಡಿಸಿದರು. ಅವರ ಎಲ್ಲ ನಾಟಕಗಳಲ್ಲಿ ಬಾಲಕಿ ಸಹನಾರದ್ದೇ ಮುಖ್ಯಪಾತ್ರ.

ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಇದ್ದಾಗೊಮ್ಮೆ ನೀನಾಸಂನ ಕೆ.ವಿ.ಸುಬ್ಬಣ್ಣ ಹಂಪಿಗೆ ಬಂದಿದ್ದರು. ಭಾವೈಕ್ಯತಾ ವೇದಿಕೆಯ ರಂಗಚಟುವಟಿಕೆಯನ್ನು ಮೆಚ್ಚಿದ ಸುಬ್ಬಣ್ಣ ಸಹನಾರಿಗೆ ನೀಸಾಸಂಗೆ ಬರುವಂತೆ ಸೂಚಿಸಿದರು. ಯಾವುದೇ ಸಂದರ್ಶನವಿಲ್ಲದೆ ನೀನಾಸಂ ಪ್ರವೇಶ ಪಡೆದರು. ಬಿ.ವಿ.ಕಾರಂತರು ನೀನಾಸಂಗೆ ಕೊನೆಯದಾಗಿ ನಿರ್ದೇಶಿಸಿದ ಅಂದೇರ್ ನಗರಿ ಚೌಪಟ್ ರಾಜ ನಾಟಕದಲ್ಲಿ ಅಭಿನಯಿಸಿದರು. ಕಾರಂತರ ಕಠಿಣ ರಂಗ ಶಿಬಿರದಲ್ಲಿ ಪಳಗಿದ ಅವರಿಗೆ ರಂಗಕಲೆ ಉಸಿರಾಯಿತು. ನೀನಾಸಂ ತಿರುಗಾಟದಲ್ಲಿ ಪಾಲ್ಗೊಂಡರು. ಚೆಕಾಫ್‌ನ ಥ್ರಿ ಸಿಸ್ಟರ್ಸ್, ಕೆ.ವಿ.ಸುಬ್ಬಣ್ಣ ಅವರ ಭಗವದಜ್ಜುಕೀಯಂ, ಕುವೆಂಪು ಅವರ ಸ್ಮಶಾನ ಕುರುಕ್ಷೇತ್ರ, ನಟರಾಜ ಹೊನ್ನವಳ್ಳಿ ನಿರ್ದೇಶನದ ಬಿರುಕು, ವೆಂಕಟರಮಣ ಐತಾಳ್ ನಿರ್ದೇಶನದ ಹಂಸ ದಮಯಂತಿ ಮುಂತಾದ ನಾಟಕಗಳಲ್ಲಿ ಅಭಿನಯಿಸಿದರು.

ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದ ಸಹನಾ ಬಣ್ಣದ ಲೋಕಕ್ಕೆ ಕಾಲಿಟ್ಟು ದುಡ್ಡು ಹೆಸರು ಗಳಿಸುವ ಅವಕಾಶವಿದ್ದರೂ, ಭಾವೈಕ್ಯತಾ ವೇದಿಕೆಯನ್ನು ಕ್ರಿಯಾಶೀಲಗೊಳಿಸುವಲ್ಲಿ ಆಸಕ್ತಳಾಗಿದ್ದಾರೆ. ರಂಗಕರ್ಮಿ ಸಿ.ಬಸವಲಿಂಗಯ್ಯ ನಡೆಸಿದ ರಂಗ ಶಿಬಿರದಲ್ಲಿ ಸಹನಾ ಅಭಿನಯದ ಹಲವು ಮುಖಗಳನ್ನು ಅರಿತರು. ಮೈಮ್ ರಮೇಶ್ ಗರಡಿಯಲ್ಲಿ ದೈಹಿಕ ರಂಗಭೂಮಿಯ ಮಹತ್ವ ತಿಳಿದರು. ನಿರ್ದೇಶಕರಾದ ಸುರೇಶ್ ಆನಗಳ್ಳಿ, ಸಿ.ಜಿ.ಕೆ., ನಟರಾಜ ಹೊನ್ನವಳ್ಳಿ, ಯೋಗಾನಂದ ಮುಂತಾದ ರಂಗ ದಿಗ್ಗಜರ ಒಡನಾಟದಿಂದ ಮತ್ತಷ್ಟು ಪಕ್ವವಾದರು. ಅಕ್ಕ, ಮಗಳು ಮಾತಾಡಿದಳು, ನಾವು ಮನುಜರು, ಚೋರ್ ಚೋರ್ ಪಕ್ಡೋ ಪಕ್ಡೋ, ಕೆಂಪು ಹೂ, ರಸ್ತೆಗೆ ಡಾಂಬರು ಬಂದಿದೆ, ಅರಿವು ಮುಂತಾದ ನಾಟಕಗಳಲ್ಲಿ ಅಭಿನಯಿಸಿದರು.

ಅಮೆರಿಕ ಪಪೆಟ್ ರಂಗಭೂಮಿಯ ಪೀಟರ್ ಶುಮನ್ ನಡೆಸಿದ ತರಬೇತಿಯಲ್ಲಿ ಪಾಲ್ಗೊಂಡು ಅವರು ಬೊಂಬೆ ಮತ್ತು ಮುಖವಾಡ ತಯಾರಿಸುವ ಕಲೆ ಕಲಿತರು. ಸ್ವೀಡನ್‌ನಿಂದ ಬಂದಿದ್ದ ಟಾಮ್ ಐರಿಕ್ ಅವರ ಬಳಿ ಮಕ್ಕಳ ರಂಗಭೂಮಿ ತರಬೇತಿ ಪಡೆದುಕೊಂಡರು. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಸ್ಕಾಲರ್‌ಶಿಪ್ ಪಡೆದು ದೆಹಲಿಯ ಎನ್‌ಎಸ್‌ಡಿಯಲ್ಲಿ ರಂಗತರಬೇತಿ ಪಡೆದರು.

ಎನ್‌ಎಸ್‌ಡಿ ವಿದ್ಯಾರ್ಥಿಯಾಗಿದ್ದಾಗಲೆ ಸಹನಾ, ಕಥೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಜುಲೇಕಾ ಕಥೆಯ ರಂಗರೂಪ `ಜನ್ನತ್ ಮಹಲ್’ ಗಾಗಿ ರಂಗಮಂಚದ ಚಿತ್ರಣವನ್ನೇ ಬದಲಿಸಿದ್ದರು. ಮುಸ್ಲಿಂ ಹೆಣ್ಣುಮಗಳೊಬ್ಬಳ ಮನದ ತೊಳಲಾಟವನ್ನು ರಂಗವಿನ್ಯಾಸದಲ್ಲಿಯೂ ಧ್ವನಿಸಲು ಪ್ರಯತ್ನಿಸಿದ್ದರು. ಬುರ್ಖಾದ ಪ್ರತೀಕವೆಂಬಂತೆ ಇಡೀ ರಂಗಮಂಚಕ್ಕೆ ಬುರ್ಖಾ ಹೊದಿಸಿದ್ದರು. ಪ್ರೇಕ್ಷಕರು ಮತ್ತು ರಂಗಂಚದ ನಡುವೆ ತೆಳುವಾದ ಪರದೆ ಅಳವಡಿಸಿ ಅದರೊಳಗಿನಿಂದಲೇ ಜನ ನಾಟಕ ನೋಡುವಂತೆ ಮಾಡಿದ್ದರು. ಕೀರ್ತಿ ಜೈನ್ ನಿರ್ದೇಶನದ ಏಕ್ ರುಖಾ ಹುವಾಫೈಸ್ಲಾ ನಾಟಕದಲ್ಲಿ ರಂಗವಿನ್ಯಾಸ ಮಾಡಿದ್ದ ಸಹನಾ ಈ ನಾಟಕದೊಂದಿಗೆ ಚೀನಾಕ್ಕೆ ಭೇಟಿ ನೀಡಿದ್ದರು. ಚೀನಾ ರಂಗಭೂಮಿ ಕುರಿತು ಉಪನ್ಯಾಸ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಎನ್‌ಎಸ್‌ಡಿಯಲ್ಲಿ ವಸ್ತ್ರವಿನ್ಯಾಸಕಿಯಾಗಿಯೂ ಗಮನ ಸೆಳೆದ ಅವರು ಡಾಲ್ಸ್ ಹೌಸ್ ನಾಟಕದ ನೋರಾ ಪಾತ್ರಕ್ಕೆ ಸೈಕಲ್ ಟೈರ್, ಟ್ಯೂಬ್, ಚೈನ್‌ಗಳನ್ನು ಬಳಸಿ ವಸ್ತ್ರವಿನ್ಯಾಸ ಮಾಡಿದ್ದರು. ಗ್ರೀಕ್ ಶೈಲಿಯಲ್ಲಿದ್ದ ದೊರೆ ಈಡಿಪಸ್ ನಾಟಕವನ್ನು ಲಂಕೇಶರು ಕನ್ನಡೀಕರಿಸಿದ ಕೃತಿಯನ್ನಿಟ್ಟುಕೊಂಡು ದೃಶ್ಯ ನಿರ್ದೇಶನ ಮಾಡಿ ಗಮನ ಸೆಳೆದರು. ಇದು ಅವರ ಇನ್ನೊಂದು ಪ್ರಯೋಗವಾಗಿತ್ತು. ಜೊತೆಗೆ ತಮಿಳು ಚಿತ್ರನಟ ಷಣ್ಮಖರಾಜ ಅವರ ನಿಗಲ್ ಥಿಯೇಟರ್(ಮಧುರೈ) ರಂಗ ತಂಡಕ್ಕೆ  ವಸ್ತ್ರ, ಪರಿಕರ, ಬೆಳಕು ವಿನ್ಯಾಸ ಮಾಡಿದ್ದಾರೆ. ಬೆಂಗಳೂರಿನ ಎನ್‌ಎಸ್‌ಡಿ ಶಾಖೆಯಲ್ಲಿ ತರಗತಿ ಸಂಚಾಲಕಿಯಾಗಿ ಕೆಲಸ ಮಾಡಿದ್ದಾರೆ. ಈಚೆಗೆ ದೇವರಾಜ ಅರಸು ಬಗೆಗೆ ನಾಟಕ ನಿರ್ದೇಶಿಸಿ ಕರ್ನಾಟಕದಾದ್ಯಂತ ಸುತ್ತಾಡಿ ಗಮನ ಸೆಳೆದಿದ್ದಾರೆ.

ಇದೀಗ ಸಹನಾ ತನ್ನ ಮೂಲ ಗೂಡಾದ ಭಾವೈಕ್ಯತಾ ವೇದಿಕೆಗೆ ಹೊಸ ಆಯಾಮ ನೀಡುವ ಕನಸು ಕಾಣುತ್ತಿದ್ದಾರೆ. ಅಂತೆಯೇ ಈ ಭಾಗದ ಬಯಲಾಟವನ್ನು ಮತ್ತೆ ಹೊಸ ನೆಲೆಯಲ್ಲಿ ಶೋಧಿಸಬೇಕೆಂದು ಮಕ್ಕಳಿಗಾಗಿ `ವೀರ ಅಭಿಮನ್ಯು ಬಯಲಾಟ ಕಾಳಗ’ ವನ್ನು ಹೊಸತನದಿಂದ ರಂಗಕ್ಕೆ ತಂದಿದ್ದರು. ಭಾವೈಕ್ಯತಾ ವೇದಿಕೆ ರೂಪಿಸಿದ ಪ್ರತಿಭಾವಂತ ರಂಗತಜ್ಞರಲ್ಲಿ ಸಹನಾ ಕೂಡಾ ಒಬ್ಬರು. ಬಹುಶಃ ಈ ವೇದಿಕೆಯನ್ನು ಮತ್ತಷ್ಟು ಎತ್ತರಕ್ಕೆ ಕಟ್ಟಿ ಬೆಳೆಸಬಹುದಾದ ಚೈತನ್ಯವಿರುವ ಪ್ರತಿಭಾವಂತೆ. ಪಾದರಸದಂತೆ ಲವಲವಿಕೆಯಿಂದಿರುವ ಸಹನಾ ರಂಗಭೂಮಿಯ ಸೂಕ್ಷ್ಮತೆಯನ್ನು ಚುರುಕಾಗಿ ಅರಿಯುವಂತವರು. ಅಂತೆಯೇ ಭವಿಷ್ಯದ ಕನ್ನಡ ರಂಗಭೂಮಿಯ ಬಹುಮುಖ್ಯ ರಂಗತಜ್ಞರಲ್ಲಿ ಒಬ್ಬರಾಗಿ ರೂಪುಗೊಳ್ಳುವ ಶಕ್ತಿ ಇರುವವರು. ಸಂಗಾತಿ ರಿಯಾಜ್ ಸಿಹಿಮೊಗೆ ಅವರ ಜೊತೆಗೂಡಿ ವೃತ್ತಿ ರಂಗಭೂಮಿಯ ರೆಪರ್ಟರಿ ತೆರೆಯುವ ಮತ್ತು ರಂಗ ತತ್ವದ ಮೇಲೆ ಪ್ರಾಥಮಿಕ ಶಾಲೆಯೊಂದನ್ನು ಆರಂಭಿಸುವ ಕನಸು ಸಹನಾ ಅವರದು.. ಅವರಿಗೆ ನಮ್ಮೆಲ್ಲರ ಹಾರೈಕೆಯಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...