Homeಎಲೆಮರೆಸ್ಲಂನಿಂದ ರಾಷ್ಟ್ರೀಯ ನಾಟಕ ಶಾಲೆ ತನಕ ಪಯಣಿಸಿದ ಗಟ್ಟಿ ಪ್ರತಿಭೆ ಸಹನಾ ಪಿಂಜಾರ..

ಸ್ಲಂನಿಂದ ರಾಷ್ಟ್ರೀಯ ನಾಟಕ ಶಾಲೆ ತನಕ ಪಯಣಿಸಿದ ಗಟ್ಟಿ ಪ್ರತಿಭೆ ಸಹನಾ ಪಿಂಜಾರ..

ಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್‌ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ಸಹನಾ ರೂಪುಗೊಂಡಿದ್ದಾರೆ.

- Advertisement -
- Advertisement -

ಕಳೆದ ಜನವರಿಯಲ್ಲಿ ಮೈಸೂರಿನ ಕುವೆಂಪು ನಗರದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯ ಮಕ್ಕಳು ಅಭಿನಯಿಸಿದ `ಪ್ಲೇಬ್ಯಾಕ್ ಥಿಯೇಟರ್’ ರಂಗಪ್ರಯೋಗ ರಂಗಾಸಕ್ತರ ಗಮನ ಸೆಳೆಯಿತು. ಇಂಡಿಯಾ ಫೌಂಡೇಷನ್ ಫಾರ್ ದ ಆರ್ಟ್ಸ್ ಸಂಸ್ಥೆಯ ಕಲಿಕಲಿಸು ಯೋಜನೆಯಡಿ ರಂಗಕರ್ಮಿ ರಿಯಾಜ್ ಸಿಹಿಮೊಗೆ ಮಕ್ಕಳಿಗೆ ತರಬೇತಿಗೊಳಿಸಿದ್ದರು.

ನಾಟಕ ಮಾಡಲು ಸಿದ್ಧವಿದ್ದ ಕಲಾವಿದರು ರಂಗಕ್ಕೆ ಬರುತ್ತಾರೆ, ನಾಟಕ ನೋಡಲು ಬಂದ ಪ್ರೇಕ್ಷಕರು ಅವರದ್ದೇ ಕಥೆ ಅಥವಾ ಘಟನೆಗಳನ್ನು ಹೇಳುತ್ತಾರೆ. ಪ್ರೇಕ್ಷಕರದೇ ಕಥೆ, ಘಟನೆಗಳನ್ನಿಟ್ಟುಕೊಂಡು ಸ್ಟೇಜಲ್ಲಿಯೇ ಕಲಾವಿದರು ಅಭಿನಯ ಮಾಡುತ್ತಾರೆ, ಇದು ನ್ಯೂಯಾರ್ಕ್ ಮೂಲದ `ಪ್ಲೇಬ್ಯಾಕ್ ಥಿಯೇಟರ್’ ಕಲ್ಪನೆಯ ಕನ್ನಡದ ಪ್ರಯೋಗ. ಈ ಪ್ರಯೋಗದ ಯಶಸ್ಸಿನ ಹಿಂದೆ ರಿಯಾಜ್ ಸಿಹಿಮೊಗೆಯ ಸಂಗಾತಿ ಸಹನಾ ಪಿಂಜಾರ ಇವರ ಕಲ್ಪನೆ ಮತ್ತು ನವೀನ ವಸ್ತ್ರವಿನ್ಯಾಸದ ಹೊಸತನವಿತ್ತು. ಇದೀಗ ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ `ಸಮಕಾಲೀನ ಕನ್ನಡ ರಂಗಭೂಮಿಯಲ್ಲಿ ರಂಗವಿನ್ಯಾಸ’ದ ಕುರಿತು ಪಿಹೆಚ್ ಡಿ ಪದವಿಗಾಗಿ ಸಂಶೋಧನ ಪ್ರಬಂಧವನ್ನು ಸಲ್ಲಿಸಿದ ಸಹನಾ ರಂಗಭೂಮಿಯ ಬಗೆಗೆ ತಾಜಾ ಅನ್ನಿಸುವ ಹೊಸ ಕಲ್ಪನೆಗಳನ್ನಿಟ್ಟುಕೊಂಡ ಕನಸುಗಾರ್ತಿ.

ಬಿರುಬಿಸಿಲ ಬಳ್ಳಾರಿಯ ಪರಿಸರದಲ್ಲಿ ರೂಪುಗೊಂಡ ಸಹನಾರ ರಂಗಭೂಮಿಯ ಪಯಣ ಕುತೂಹಲಕಾರಿಯಾಗಿದೆ. ಕಳೆದ ಮೂರು ದಶಕದಿಂದ ಹೊಸಪೇಟೆಯ ಅಜಾದ್‌ ನಗರದ ಸ್ಲಂನಲ್ಲಿ ಹಿರಿಯ ರಂಗಕರ್ಮಿ ಅಬ್ದುಲ್ ಅವರು ರೂಪಿಸಿದ `ಭಾವೈಕ್ಯತಾ ವೇದಿಕೆ’ಯಲ್ಲಿ ಸಹನಾ ರೂಪುಗೊಳ್ಳುತ್ತಾರೆ.

ಬಾಲ್ಯದಲ್ಲಿಯೇ ಬೀದಿನಾಟಕಗಳ ಮೂಲಕ ರಂಗಪ್ರವೇಶ ಮಾಡಿದ ಸಹನಾ, `ನೀರು ಕೊಡಿ’ ಎಂಬ ಘೋಷಣೆ ಕೂಗಿದಾಗ, ಕೊಳಗೇರಿಗಳ ಹೆಣ್ಣು ಓದಲೇಬೇಕು ಎಂದು ಪ್ರಭುತ್ವದ ಎದುರು ನಿಂತು ಕೇಳಿದಾಗ ಅವರ ವಯಸ್ಸು ಕೇವಲ ಐದು. ಸಹನಾ ಬಳ್ಳಾರಿ ಜಿಲ್ಲೆ, ಕುರುಗೋಡು ತಾಲ್ಲೂಕಿನ ಎಚ್. ವೀರಾಪುರದ ಪಿ.ಬಾಲೇಸಾಬ್ ಮತ್ತು ಗೌರಿಬೀಯರ ಮಗಳು. ಬಾಲ್ಯದಲ್ಲಿಯೇ ಇವರ ಚುರುಕುತನ ಮತ್ತು ಮಾತುಗಾರಿಕೆ ಕಂಡ ಮಾಮ ಪಿ.ಅಬ್ದುಲ್ ಸಹನಾರಿಗೆ ರಂಗಭೂಮಿಯ ದೀಕ್ಷೆ ಕೊಟ್ಟರು. ಇಡೀ ಜಿಲ್ಲೆಯಾದ್ಯಂತ ಬೀದಿನಾಟಕ ಆಡಿಸಿದರು. ಅವರ ಎಲ್ಲ ನಾಟಕಗಳಲ್ಲಿ ಬಾಲಕಿ ಸಹನಾರದ್ದೇ ಮುಖ್ಯಪಾತ್ರ.

ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಇದ್ದಾಗೊಮ್ಮೆ ನೀನಾಸಂನ ಕೆ.ವಿ.ಸುಬ್ಬಣ್ಣ ಹಂಪಿಗೆ ಬಂದಿದ್ದರು. ಭಾವೈಕ್ಯತಾ ವೇದಿಕೆಯ ರಂಗಚಟುವಟಿಕೆಯನ್ನು ಮೆಚ್ಚಿದ ಸುಬ್ಬಣ್ಣ ಸಹನಾರಿಗೆ ನೀಸಾಸಂಗೆ ಬರುವಂತೆ ಸೂಚಿಸಿದರು. ಯಾವುದೇ ಸಂದರ್ಶನವಿಲ್ಲದೆ ನೀನಾಸಂ ಪ್ರವೇಶ ಪಡೆದರು. ಬಿ.ವಿ.ಕಾರಂತರು ನೀನಾಸಂಗೆ ಕೊನೆಯದಾಗಿ ನಿರ್ದೇಶಿಸಿದ ಅಂದೇರ್ ನಗರಿ ಚೌಪಟ್ ರಾಜ ನಾಟಕದಲ್ಲಿ ಅಭಿನಯಿಸಿದರು. ಕಾರಂತರ ಕಠಿಣ ರಂಗ ಶಿಬಿರದಲ್ಲಿ ಪಳಗಿದ ಅವರಿಗೆ ರಂಗಕಲೆ ಉಸಿರಾಯಿತು. ನೀನಾಸಂ ತಿರುಗಾಟದಲ್ಲಿ ಪಾಲ್ಗೊಂಡರು. ಚೆಕಾಫ್‌ನ ಥ್ರಿ ಸಿಸ್ಟರ್ಸ್, ಕೆ.ವಿ.ಸುಬ್ಬಣ್ಣ ಅವರ ಭಗವದಜ್ಜುಕೀಯಂ, ಕುವೆಂಪು ಅವರ ಸ್ಮಶಾನ ಕುರುಕ್ಷೇತ್ರ, ನಟರಾಜ ಹೊನ್ನವಳ್ಳಿ ನಿರ್ದೇಶನದ ಬಿರುಕು, ವೆಂಕಟರಮಣ ಐತಾಳ್ ನಿರ್ದೇಶನದ ಹಂಸ ದಮಯಂತಿ ಮುಂತಾದ ನಾಟಕಗಳಲ್ಲಿ ಅಭಿನಯಿಸಿದರು.

ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದ ಸಹನಾ ಬಣ್ಣದ ಲೋಕಕ್ಕೆ ಕಾಲಿಟ್ಟು ದುಡ್ಡು ಹೆಸರು ಗಳಿಸುವ ಅವಕಾಶವಿದ್ದರೂ, ಭಾವೈಕ್ಯತಾ ವೇದಿಕೆಯನ್ನು ಕ್ರಿಯಾಶೀಲಗೊಳಿಸುವಲ್ಲಿ ಆಸಕ್ತಳಾಗಿದ್ದಾರೆ. ರಂಗಕರ್ಮಿ ಸಿ.ಬಸವಲಿಂಗಯ್ಯ ನಡೆಸಿದ ರಂಗ ಶಿಬಿರದಲ್ಲಿ ಸಹನಾ ಅಭಿನಯದ ಹಲವು ಮುಖಗಳನ್ನು ಅರಿತರು. ಮೈಮ್ ರಮೇಶ್ ಗರಡಿಯಲ್ಲಿ ದೈಹಿಕ ರಂಗಭೂಮಿಯ ಮಹತ್ವ ತಿಳಿದರು. ನಿರ್ದೇಶಕರಾದ ಸುರೇಶ್ ಆನಗಳ್ಳಿ, ಸಿ.ಜಿ.ಕೆ., ನಟರಾಜ ಹೊನ್ನವಳ್ಳಿ, ಯೋಗಾನಂದ ಮುಂತಾದ ರಂಗ ದಿಗ್ಗಜರ ಒಡನಾಟದಿಂದ ಮತ್ತಷ್ಟು ಪಕ್ವವಾದರು. ಅಕ್ಕ, ಮಗಳು ಮಾತಾಡಿದಳು, ನಾವು ಮನುಜರು, ಚೋರ್ ಚೋರ್ ಪಕ್ಡೋ ಪಕ್ಡೋ, ಕೆಂಪು ಹೂ, ರಸ್ತೆಗೆ ಡಾಂಬರು ಬಂದಿದೆ, ಅರಿವು ಮುಂತಾದ ನಾಟಕಗಳಲ್ಲಿ ಅಭಿನಯಿಸಿದರು.

ಅಮೆರಿಕ ಪಪೆಟ್ ರಂಗಭೂಮಿಯ ಪೀಟರ್ ಶುಮನ್ ನಡೆಸಿದ ತರಬೇತಿಯಲ್ಲಿ ಪಾಲ್ಗೊಂಡು ಅವರು ಬೊಂಬೆ ಮತ್ತು ಮುಖವಾಡ ತಯಾರಿಸುವ ಕಲೆ ಕಲಿತರು. ಸ್ವೀಡನ್‌ನಿಂದ ಬಂದಿದ್ದ ಟಾಮ್ ಐರಿಕ್ ಅವರ ಬಳಿ ಮಕ್ಕಳ ರಂಗಭೂಮಿ ತರಬೇತಿ ಪಡೆದುಕೊಂಡರು. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಸ್ಕಾಲರ್‌ಶಿಪ್ ಪಡೆದು ದೆಹಲಿಯ ಎನ್‌ಎಸ್‌ಡಿಯಲ್ಲಿ ರಂಗತರಬೇತಿ ಪಡೆದರು.

ಎನ್‌ಎಸ್‌ಡಿ ವಿದ್ಯಾರ್ಥಿಯಾಗಿದ್ದಾಗಲೆ ಸಹನಾ, ಕಥೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಜುಲೇಕಾ ಕಥೆಯ ರಂಗರೂಪ `ಜನ್ನತ್ ಮಹಲ್’ ಗಾಗಿ ರಂಗಮಂಚದ ಚಿತ್ರಣವನ್ನೇ ಬದಲಿಸಿದ್ದರು. ಮುಸ್ಲಿಂ ಹೆಣ್ಣುಮಗಳೊಬ್ಬಳ ಮನದ ತೊಳಲಾಟವನ್ನು ರಂಗವಿನ್ಯಾಸದಲ್ಲಿಯೂ ಧ್ವನಿಸಲು ಪ್ರಯತ್ನಿಸಿದ್ದರು. ಬುರ್ಖಾದ ಪ್ರತೀಕವೆಂಬಂತೆ ಇಡೀ ರಂಗಮಂಚಕ್ಕೆ ಬುರ್ಖಾ ಹೊದಿಸಿದ್ದರು. ಪ್ರೇಕ್ಷಕರು ಮತ್ತು ರಂಗಂಚದ ನಡುವೆ ತೆಳುವಾದ ಪರದೆ ಅಳವಡಿಸಿ ಅದರೊಳಗಿನಿಂದಲೇ ಜನ ನಾಟಕ ನೋಡುವಂತೆ ಮಾಡಿದ್ದರು. ಕೀರ್ತಿ ಜೈನ್ ನಿರ್ದೇಶನದ ಏಕ್ ರುಖಾ ಹುವಾಫೈಸ್ಲಾ ನಾಟಕದಲ್ಲಿ ರಂಗವಿನ್ಯಾಸ ಮಾಡಿದ್ದ ಸಹನಾ ಈ ನಾಟಕದೊಂದಿಗೆ ಚೀನಾಕ್ಕೆ ಭೇಟಿ ನೀಡಿದ್ದರು. ಚೀನಾ ರಂಗಭೂಮಿ ಕುರಿತು ಉಪನ್ಯಾಸ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಎನ್‌ಎಸ್‌ಡಿಯಲ್ಲಿ ವಸ್ತ್ರವಿನ್ಯಾಸಕಿಯಾಗಿಯೂ ಗಮನ ಸೆಳೆದ ಅವರು ಡಾಲ್ಸ್ ಹೌಸ್ ನಾಟಕದ ನೋರಾ ಪಾತ್ರಕ್ಕೆ ಸೈಕಲ್ ಟೈರ್, ಟ್ಯೂಬ್, ಚೈನ್‌ಗಳನ್ನು ಬಳಸಿ ವಸ್ತ್ರವಿನ್ಯಾಸ ಮಾಡಿದ್ದರು. ಗ್ರೀಕ್ ಶೈಲಿಯಲ್ಲಿದ್ದ ದೊರೆ ಈಡಿಪಸ್ ನಾಟಕವನ್ನು ಲಂಕೇಶರು ಕನ್ನಡೀಕರಿಸಿದ ಕೃತಿಯನ್ನಿಟ್ಟುಕೊಂಡು ದೃಶ್ಯ ನಿರ್ದೇಶನ ಮಾಡಿ ಗಮನ ಸೆಳೆದರು. ಇದು ಅವರ ಇನ್ನೊಂದು ಪ್ರಯೋಗವಾಗಿತ್ತು. ಜೊತೆಗೆ ತಮಿಳು ಚಿತ್ರನಟ ಷಣ್ಮಖರಾಜ ಅವರ ನಿಗಲ್ ಥಿಯೇಟರ್(ಮಧುರೈ) ರಂಗ ತಂಡಕ್ಕೆ  ವಸ್ತ್ರ, ಪರಿಕರ, ಬೆಳಕು ವಿನ್ಯಾಸ ಮಾಡಿದ್ದಾರೆ. ಬೆಂಗಳೂರಿನ ಎನ್‌ಎಸ್‌ಡಿ ಶಾಖೆಯಲ್ಲಿ ತರಗತಿ ಸಂಚಾಲಕಿಯಾಗಿ ಕೆಲಸ ಮಾಡಿದ್ದಾರೆ. ಈಚೆಗೆ ದೇವರಾಜ ಅರಸು ಬಗೆಗೆ ನಾಟಕ ನಿರ್ದೇಶಿಸಿ ಕರ್ನಾಟಕದಾದ್ಯಂತ ಸುತ್ತಾಡಿ ಗಮನ ಸೆಳೆದಿದ್ದಾರೆ.

ಇದೀಗ ಸಹನಾ ತನ್ನ ಮೂಲ ಗೂಡಾದ ಭಾವೈಕ್ಯತಾ ವೇದಿಕೆಗೆ ಹೊಸ ಆಯಾಮ ನೀಡುವ ಕನಸು ಕಾಣುತ್ತಿದ್ದಾರೆ. ಅಂತೆಯೇ ಈ ಭಾಗದ ಬಯಲಾಟವನ್ನು ಮತ್ತೆ ಹೊಸ ನೆಲೆಯಲ್ಲಿ ಶೋಧಿಸಬೇಕೆಂದು ಮಕ್ಕಳಿಗಾಗಿ `ವೀರ ಅಭಿಮನ್ಯು ಬಯಲಾಟ ಕಾಳಗ’ ವನ್ನು ಹೊಸತನದಿಂದ ರಂಗಕ್ಕೆ ತಂದಿದ್ದರು. ಭಾವೈಕ್ಯತಾ ವೇದಿಕೆ ರೂಪಿಸಿದ ಪ್ರತಿಭಾವಂತ ರಂಗತಜ್ಞರಲ್ಲಿ ಸಹನಾ ಕೂಡಾ ಒಬ್ಬರು. ಬಹುಶಃ ಈ ವೇದಿಕೆಯನ್ನು ಮತ್ತಷ್ಟು ಎತ್ತರಕ್ಕೆ ಕಟ್ಟಿ ಬೆಳೆಸಬಹುದಾದ ಚೈತನ್ಯವಿರುವ ಪ್ರತಿಭಾವಂತೆ. ಪಾದರಸದಂತೆ ಲವಲವಿಕೆಯಿಂದಿರುವ ಸಹನಾ ರಂಗಭೂಮಿಯ ಸೂಕ್ಷ್ಮತೆಯನ್ನು ಚುರುಕಾಗಿ ಅರಿಯುವಂತವರು. ಅಂತೆಯೇ ಭವಿಷ್ಯದ ಕನ್ನಡ ರಂಗಭೂಮಿಯ ಬಹುಮುಖ್ಯ ರಂಗತಜ್ಞರಲ್ಲಿ ಒಬ್ಬರಾಗಿ ರೂಪುಗೊಳ್ಳುವ ಶಕ್ತಿ ಇರುವವರು. ಸಂಗಾತಿ ರಿಯಾಜ್ ಸಿಹಿಮೊಗೆ ಅವರ ಜೊತೆಗೂಡಿ ವೃತ್ತಿ ರಂಗಭೂಮಿಯ ರೆಪರ್ಟರಿ ತೆರೆಯುವ ಮತ್ತು ರಂಗ ತತ್ವದ ಮೇಲೆ ಪ್ರಾಥಮಿಕ ಶಾಲೆಯೊಂದನ್ನು ಆರಂಭಿಸುವ ಕನಸು ಸಹನಾ ಅವರದು.. ಅವರಿಗೆ ನಮ್ಮೆಲ್ಲರ ಹಾರೈಕೆಯಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...