Homeಕರ್ನಾಟಕಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ...

ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ…

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ.

- Advertisement -
- Advertisement -

‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಟ್ಯಾಗ್‌ಲೈನ್ ಜೊತೆಗೆ, ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಕರ್ನಾಟಕದಲ್ಲಿ ವಿಶಿಷ್ಠ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಜೊತೆಗೂಡಿ “ಸಹಸ್ರ ಸಹಭೋಜನ” ಕರ್ನಾಟಕದ ಸಾವಿರ ಕಡೆಗಳಲ್ಲಿ ಸಂವಿಧಾನದ ಮುನ್ನುಡಿಯ ಓದು ಮತ್ತು ಜೊತೆಗೆ ಸಹಭೋಜನ ಮಾಡುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಊರಿನಲ್ಲಿಯೂ ಕೂಡ ನಡೆಸಬಹುದು ಎಂಬುದಾಗಿ ಕರೆ ನೀಡಲಾಗಿದೆ.

ನಮ್ಮ ಪ್ರೀತಿಯ ಭಾರತವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಘೋಷಿಸಿರುವ ಈ ಕಾರ್ಯಕ್ರಮವು ಯಾವ ಸಂಘಟನೆ, ಒಕ್ಕೂಟಗಳ ಬ್ಯಾನರ್ ಅಡಿಯಲ್ಲೂ ನಡೆಯುವುದಿಲ್ಲ. ಜನ ಸ್ವಪ್ರೇರಣೆಯಿಂದ ದೇಶದ ಸಹಬಾಳ್ವೆ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ಈ ಕಾರ್ಯಕ್ರಮ ನಡೆಯುತ್ತಿದ್ದು ವಿಶ್ವಮಾನವ ಸಂದೇಶ ಸಾರಿದ ಕುವೆಂಪುರವರ ಜನ್ಮದಿನದಂದೇ ಕರ್ನಾಟಕದಾದ್ಯಂತ ನಡೆಯುತ್ತಿದೆ. ಕನಿಷ್ಠ ಒಂದು ಸಾವಿರ ಕಡೆ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ.

ಆಯೋಜಕರ ಮತ್ತು ಆ ಊರಿನ ಸಾಧ್ಯತೆಗೆ ತಕ್ಕಂತೆ ಕಾರ್ಯಕ್ರಮದ ಗಾತ್ರ ಹಾಗೂ ಜೊತೆಗೂಡಿ ಏನು ತಿನ್ನಬಹುದು ಎಂಬುದನ್ನು ನಿಗದಿ ಮಾಡಿಕೊಳ್ಳಬಹುದು. ಆದರೆ ಸಂವಿಧಾನ ಓದು, ವಿವಿಧ ಧರ್ಮ ಹಾಗೂ ಜಾತಿಗಳ ಜನರು ಇರುವಂತೆ ನೋಡಿಕೊಳ್ಳಬೇಕು. ದೊಡ್ಡ ಊರುಗಳಲ್ಲಿ ಒಂದೇ ಕಡೆ ನಡೆಯಬೇಕೆಂದೇನಿಲ್ಲ. ಎಷ್ಟು ಬೇಕಾದರೂ ನಡೆಯಬಹುದು. ಕೆಲವರ ಮನೆಗಳಲ್ಲಿ, ಸಭಾಂಗಣಗಳಲ್ಲಿ, ಮೈದಾನಗಳಲ್ಲಿ ಎಲ್ಲಿ ಬೇಕಾದರೂ ಮಾಡಬಹುದು. ಕನಿಷ್ಠ 10 ಜನದಿಂದ 10,000 ಜನರವರೆಗೆ ಎಷ್ಟು ಜನರಾದರೂ ಸೇರಬಹುದು ಎಂದು ಕರೆ ನೀಡಲಾಗಿದೆ.

ಇದರ ಪರಿಣಾಮ (ಅಂದರೆ ಸಂವಿಧಾನದ ಮುನ್ನುಡಿಯನ್ನು ಗಟ್ಟಿಯಾಗಿ ಸಾಮೂಹಿಕವಾಗಿ ಓದುವುದು ಮತ್ತು ಹಿಂದೂ, ಮುಸ್ಲಿಂ, ಕ್ರೈಸ್ತ ದಲಿತ, ಮಹಿಳೆಯರು, ವಿದ್ಯಾರ್ಥಿಗಳು ಒಂದೆಡೆ ಸೇರಿ ಸಹಭೋಜನ ಮಾಡುವುದು – ಒಂದೇ ದಿನ ಸಾವಿರ ಕಡೆ) ಹಲವು ರೀತಿಯದ್ದಾಗಿರುತ್ತದೆ ಎಂಬುದನ್ನು ನೀವು ಊಹಿಸಬಲ್ಲಿರಿ. ಸ್ವಾಮೀಜಿಗಳು, ಮುಲ್ಲಾಗಳು, ಎಲ್ಲಾ ಜಾತಿಯ ಜನರನ್ನೂ ಒಳಗೊಳ್ಳಬಹುದು. ಈಗಾಗಲೇ 75 ಊರುಗಳಲ್ಲಿ ನಿಗದಿಯಾಗಿದ್ದು, ಪ್ರತಿ ಗಂಟೆಗೂ ಸಂಖ್ಯೆ ಏರುತ್ತಿದೆ “ಸಹಸ್ರ ಸಹಭೋಜನ” ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಲಾಗಿದೆ.

ನೀವು ಎಲ್ಲಿಯಾದರೂ ಇದನ್ನು ಸಂಘಟಿಸಬಹುದೇ? ಹಾಗೆಯೇ ನಿಮ್ಮ ಗೆಳೆಯರು (ಯಾವ ಊರಾದರೂ ಸರಿ) ಎಲ್ಲೆಲ್ಲಿ ಸಂಘಟಿಸಬಹುದು? ಕೂಡಲೇ ತಿಳಿಸಿ. ಮಾಡುವವರ ಸಹಾಯ ಸಂಪರ್ಕಕ್ಕಾಗಿ 9353666821 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಸ್ರ ಸಹಭೋಜನ ಫೇಸ್ಬುಕ್ ಪುಟ ಸಹಾ ನೋಡಬಹುದು.

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ. ಇದುವೇ ದೇಶವನ್ನು ಉಳಿಸುವ ಮಾರ್ಗ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...