Homeಕರ್ನಾಟಕಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ...

ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ…

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ.

- Advertisement -
- Advertisement -

‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಟ್ಯಾಗ್‌ಲೈನ್ ಜೊತೆಗೆ, ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಕರ್ನಾಟಕದಲ್ಲಿ ವಿಶಿಷ್ಠ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಜೊತೆಗೂಡಿ “ಸಹಸ್ರ ಸಹಭೋಜನ” ಕರ್ನಾಟಕದ ಸಾವಿರ ಕಡೆಗಳಲ್ಲಿ ಸಂವಿಧಾನದ ಮುನ್ನುಡಿಯ ಓದು ಮತ್ತು ಜೊತೆಗೆ ಸಹಭೋಜನ ಮಾಡುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಊರಿನಲ್ಲಿಯೂ ಕೂಡ ನಡೆಸಬಹುದು ಎಂಬುದಾಗಿ ಕರೆ ನೀಡಲಾಗಿದೆ.

ನಮ್ಮ ಪ್ರೀತಿಯ ಭಾರತವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಘೋಷಿಸಿರುವ ಈ ಕಾರ್ಯಕ್ರಮವು ಯಾವ ಸಂಘಟನೆ, ಒಕ್ಕೂಟಗಳ ಬ್ಯಾನರ್ ಅಡಿಯಲ್ಲೂ ನಡೆಯುವುದಿಲ್ಲ. ಜನ ಸ್ವಪ್ರೇರಣೆಯಿಂದ ದೇಶದ ಸಹಬಾಳ್ವೆ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ಈ ಕಾರ್ಯಕ್ರಮ ನಡೆಯುತ್ತಿದ್ದು ವಿಶ್ವಮಾನವ ಸಂದೇಶ ಸಾರಿದ ಕುವೆಂಪುರವರ ಜನ್ಮದಿನದಂದೇ ಕರ್ನಾಟಕದಾದ್ಯಂತ ನಡೆಯುತ್ತಿದೆ. ಕನಿಷ್ಠ ಒಂದು ಸಾವಿರ ಕಡೆ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ.

ಆಯೋಜಕರ ಮತ್ತು ಆ ಊರಿನ ಸಾಧ್ಯತೆಗೆ ತಕ್ಕಂತೆ ಕಾರ್ಯಕ್ರಮದ ಗಾತ್ರ ಹಾಗೂ ಜೊತೆಗೂಡಿ ಏನು ತಿನ್ನಬಹುದು ಎಂಬುದನ್ನು ನಿಗದಿ ಮಾಡಿಕೊಳ್ಳಬಹುದು. ಆದರೆ ಸಂವಿಧಾನ ಓದು, ವಿವಿಧ ಧರ್ಮ ಹಾಗೂ ಜಾತಿಗಳ ಜನರು ಇರುವಂತೆ ನೋಡಿಕೊಳ್ಳಬೇಕು. ದೊಡ್ಡ ಊರುಗಳಲ್ಲಿ ಒಂದೇ ಕಡೆ ನಡೆಯಬೇಕೆಂದೇನಿಲ್ಲ. ಎಷ್ಟು ಬೇಕಾದರೂ ನಡೆಯಬಹುದು. ಕೆಲವರ ಮನೆಗಳಲ್ಲಿ, ಸಭಾಂಗಣಗಳಲ್ಲಿ, ಮೈದಾನಗಳಲ್ಲಿ ಎಲ್ಲಿ ಬೇಕಾದರೂ ಮಾಡಬಹುದು. ಕನಿಷ್ಠ 10 ಜನದಿಂದ 10,000 ಜನರವರೆಗೆ ಎಷ್ಟು ಜನರಾದರೂ ಸೇರಬಹುದು ಎಂದು ಕರೆ ನೀಡಲಾಗಿದೆ.

ಇದರ ಪರಿಣಾಮ (ಅಂದರೆ ಸಂವಿಧಾನದ ಮುನ್ನುಡಿಯನ್ನು ಗಟ್ಟಿಯಾಗಿ ಸಾಮೂಹಿಕವಾಗಿ ಓದುವುದು ಮತ್ತು ಹಿಂದೂ, ಮುಸ್ಲಿಂ, ಕ್ರೈಸ್ತ ದಲಿತ, ಮಹಿಳೆಯರು, ವಿದ್ಯಾರ್ಥಿಗಳು ಒಂದೆಡೆ ಸೇರಿ ಸಹಭೋಜನ ಮಾಡುವುದು – ಒಂದೇ ದಿನ ಸಾವಿರ ಕಡೆ) ಹಲವು ರೀತಿಯದ್ದಾಗಿರುತ್ತದೆ ಎಂಬುದನ್ನು ನೀವು ಊಹಿಸಬಲ್ಲಿರಿ. ಸ್ವಾಮೀಜಿಗಳು, ಮುಲ್ಲಾಗಳು, ಎಲ್ಲಾ ಜಾತಿಯ ಜನರನ್ನೂ ಒಳಗೊಳ್ಳಬಹುದು. ಈಗಾಗಲೇ 75 ಊರುಗಳಲ್ಲಿ ನಿಗದಿಯಾಗಿದ್ದು, ಪ್ರತಿ ಗಂಟೆಗೂ ಸಂಖ್ಯೆ ಏರುತ್ತಿದೆ “ಸಹಸ್ರ ಸಹಭೋಜನ” ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಲಾಗಿದೆ.

ನೀವು ಎಲ್ಲಿಯಾದರೂ ಇದನ್ನು ಸಂಘಟಿಸಬಹುದೇ? ಹಾಗೆಯೇ ನಿಮ್ಮ ಗೆಳೆಯರು (ಯಾವ ಊರಾದರೂ ಸರಿ) ಎಲ್ಲೆಲ್ಲಿ ಸಂಘಟಿಸಬಹುದು? ಕೂಡಲೇ ತಿಳಿಸಿ. ಮಾಡುವವರ ಸಹಾಯ ಸಂಪರ್ಕಕ್ಕಾಗಿ 9353666821 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಸ್ರ ಸಹಭೋಜನ ಫೇಸ್ಬುಕ್ ಪುಟ ಸಹಾ ನೋಡಬಹುದು.

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ. ಇದುವೇ ದೇಶವನ್ನು ಉಳಿಸುವ ಮಾರ್ಗ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...