Homeಕರ್ನಾಟಕಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ...

ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ…

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ.

- Advertisement -
- Advertisement -

‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಟ್ಯಾಗ್‌ಲೈನ್ ಜೊತೆಗೆ, ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಕರ್ನಾಟಕದಲ್ಲಿ ವಿಶಿಷ್ಠ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಜೊತೆಗೂಡಿ “ಸಹಸ್ರ ಸಹಭೋಜನ” ಕರ್ನಾಟಕದ ಸಾವಿರ ಕಡೆಗಳಲ್ಲಿ ಸಂವಿಧಾನದ ಮುನ್ನುಡಿಯ ಓದು ಮತ್ತು ಜೊತೆಗೆ ಸಹಭೋಜನ ಮಾಡುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಊರಿನಲ್ಲಿಯೂ ಕೂಡ ನಡೆಸಬಹುದು ಎಂಬುದಾಗಿ ಕರೆ ನೀಡಲಾಗಿದೆ.

ನಮ್ಮ ಪ್ರೀತಿಯ ಭಾರತವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಘೋಷಿಸಿರುವ ಈ ಕಾರ್ಯಕ್ರಮವು ಯಾವ ಸಂಘಟನೆ, ಒಕ್ಕೂಟಗಳ ಬ್ಯಾನರ್ ಅಡಿಯಲ್ಲೂ ನಡೆಯುವುದಿಲ್ಲ. ಜನ ಸ್ವಪ್ರೇರಣೆಯಿಂದ ದೇಶದ ಸಹಬಾಳ್ವೆ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ಈ ಕಾರ್ಯಕ್ರಮ ನಡೆಯುತ್ತಿದ್ದು ವಿಶ್ವಮಾನವ ಸಂದೇಶ ಸಾರಿದ ಕುವೆಂಪುರವರ ಜನ್ಮದಿನದಂದೇ ಕರ್ನಾಟಕದಾದ್ಯಂತ ನಡೆಯುತ್ತಿದೆ. ಕನಿಷ್ಠ ಒಂದು ಸಾವಿರ ಕಡೆ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ.

ಆಯೋಜಕರ ಮತ್ತು ಆ ಊರಿನ ಸಾಧ್ಯತೆಗೆ ತಕ್ಕಂತೆ ಕಾರ್ಯಕ್ರಮದ ಗಾತ್ರ ಹಾಗೂ ಜೊತೆಗೂಡಿ ಏನು ತಿನ್ನಬಹುದು ಎಂಬುದನ್ನು ನಿಗದಿ ಮಾಡಿಕೊಳ್ಳಬಹುದು. ಆದರೆ ಸಂವಿಧಾನ ಓದು, ವಿವಿಧ ಧರ್ಮ ಹಾಗೂ ಜಾತಿಗಳ ಜನರು ಇರುವಂತೆ ನೋಡಿಕೊಳ್ಳಬೇಕು. ದೊಡ್ಡ ಊರುಗಳಲ್ಲಿ ಒಂದೇ ಕಡೆ ನಡೆಯಬೇಕೆಂದೇನಿಲ್ಲ. ಎಷ್ಟು ಬೇಕಾದರೂ ನಡೆಯಬಹುದು. ಕೆಲವರ ಮನೆಗಳಲ್ಲಿ, ಸಭಾಂಗಣಗಳಲ್ಲಿ, ಮೈದಾನಗಳಲ್ಲಿ ಎಲ್ಲಿ ಬೇಕಾದರೂ ಮಾಡಬಹುದು. ಕನಿಷ್ಠ 10 ಜನದಿಂದ 10,000 ಜನರವರೆಗೆ ಎಷ್ಟು ಜನರಾದರೂ ಸೇರಬಹುದು ಎಂದು ಕರೆ ನೀಡಲಾಗಿದೆ.

ಇದರ ಪರಿಣಾಮ (ಅಂದರೆ ಸಂವಿಧಾನದ ಮುನ್ನುಡಿಯನ್ನು ಗಟ್ಟಿಯಾಗಿ ಸಾಮೂಹಿಕವಾಗಿ ಓದುವುದು ಮತ್ತು ಹಿಂದೂ, ಮುಸ್ಲಿಂ, ಕ್ರೈಸ್ತ ದಲಿತ, ಮಹಿಳೆಯರು, ವಿದ್ಯಾರ್ಥಿಗಳು ಒಂದೆಡೆ ಸೇರಿ ಸಹಭೋಜನ ಮಾಡುವುದು – ಒಂದೇ ದಿನ ಸಾವಿರ ಕಡೆ) ಹಲವು ರೀತಿಯದ್ದಾಗಿರುತ್ತದೆ ಎಂಬುದನ್ನು ನೀವು ಊಹಿಸಬಲ್ಲಿರಿ. ಸ್ವಾಮೀಜಿಗಳು, ಮುಲ್ಲಾಗಳು, ಎಲ್ಲಾ ಜಾತಿಯ ಜನರನ್ನೂ ಒಳಗೊಳ್ಳಬಹುದು. ಈಗಾಗಲೇ 75 ಊರುಗಳಲ್ಲಿ ನಿಗದಿಯಾಗಿದ್ದು, ಪ್ರತಿ ಗಂಟೆಗೂ ಸಂಖ್ಯೆ ಏರುತ್ತಿದೆ “ಸಹಸ್ರ ಸಹಭೋಜನ” ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಲಾಗಿದೆ.

ನೀವು ಎಲ್ಲಿಯಾದರೂ ಇದನ್ನು ಸಂಘಟಿಸಬಹುದೇ? ಹಾಗೆಯೇ ನಿಮ್ಮ ಗೆಳೆಯರು (ಯಾವ ಊರಾದರೂ ಸರಿ) ಎಲ್ಲೆಲ್ಲಿ ಸಂಘಟಿಸಬಹುದು? ಕೂಡಲೇ ತಿಳಿಸಿ. ಮಾಡುವವರ ಸಹಾಯ ಸಂಪರ್ಕಕ್ಕಾಗಿ 9353666821 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಸ್ರ ಸಹಭೋಜನ ಫೇಸ್ಬುಕ್ ಪುಟ ಸಹಾ ನೋಡಬಹುದು.

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ. ಇದುವೇ ದೇಶವನ್ನು ಉಳಿಸುವ ಮಾರ್ಗ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...