Homeಕರ್ನಾಟಕಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ...

ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ…

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ.

- Advertisement -
- Advertisement -

‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಟ್ಯಾಗ್‌ಲೈನ್ ಜೊತೆಗೆ, ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಕರ್ನಾಟಕದಲ್ಲಿ ವಿಶಿಷ್ಠ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಜೊತೆಗೂಡಿ “ಸಹಸ್ರ ಸಹಭೋಜನ” ಕರ್ನಾಟಕದ ಸಾವಿರ ಕಡೆಗಳಲ್ಲಿ ಸಂವಿಧಾನದ ಮುನ್ನುಡಿಯ ಓದು ಮತ್ತು ಜೊತೆಗೆ ಸಹಭೋಜನ ಮಾಡುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಊರಿನಲ್ಲಿಯೂ ಕೂಡ ನಡೆಸಬಹುದು ಎಂಬುದಾಗಿ ಕರೆ ನೀಡಲಾಗಿದೆ.

ನಮ್ಮ ಪ್ರೀತಿಯ ಭಾರತವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಘೋಷಿಸಿರುವ ಈ ಕಾರ್ಯಕ್ರಮವು ಯಾವ ಸಂಘಟನೆ, ಒಕ್ಕೂಟಗಳ ಬ್ಯಾನರ್ ಅಡಿಯಲ್ಲೂ ನಡೆಯುವುದಿಲ್ಲ. ಜನ ಸ್ವಪ್ರೇರಣೆಯಿಂದ ದೇಶದ ಸಹಬಾಳ್ವೆ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ಈ ಕಾರ್ಯಕ್ರಮ ನಡೆಯುತ್ತಿದ್ದು ವಿಶ್ವಮಾನವ ಸಂದೇಶ ಸಾರಿದ ಕುವೆಂಪುರವರ ಜನ್ಮದಿನದಂದೇ ಕರ್ನಾಟಕದಾದ್ಯಂತ ನಡೆಯುತ್ತಿದೆ. ಕನಿಷ್ಠ ಒಂದು ಸಾವಿರ ಕಡೆ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ.

ಆಯೋಜಕರ ಮತ್ತು ಆ ಊರಿನ ಸಾಧ್ಯತೆಗೆ ತಕ್ಕಂತೆ ಕಾರ್ಯಕ್ರಮದ ಗಾತ್ರ ಹಾಗೂ ಜೊತೆಗೂಡಿ ಏನು ತಿನ್ನಬಹುದು ಎಂಬುದನ್ನು ನಿಗದಿ ಮಾಡಿಕೊಳ್ಳಬಹುದು. ಆದರೆ ಸಂವಿಧಾನ ಓದು, ವಿವಿಧ ಧರ್ಮ ಹಾಗೂ ಜಾತಿಗಳ ಜನರು ಇರುವಂತೆ ನೋಡಿಕೊಳ್ಳಬೇಕು. ದೊಡ್ಡ ಊರುಗಳಲ್ಲಿ ಒಂದೇ ಕಡೆ ನಡೆಯಬೇಕೆಂದೇನಿಲ್ಲ. ಎಷ್ಟು ಬೇಕಾದರೂ ನಡೆಯಬಹುದು. ಕೆಲವರ ಮನೆಗಳಲ್ಲಿ, ಸಭಾಂಗಣಗಳಲ್ಲಿ, ಮೈದಾನಗಳಲ್ಲಿ ಎಲ್ಲಿ ಬೇಕಾದರೂ ಮಾಡಬಹುದು. ಕನಿಷ್ಠ 10 ಜನದಿಂದ 10,000 ಜನರವರೆಗೆ ಎಷ್ಟು ಜನರಾದರೂ ಸೇರಬಹುದು ಎಂದು ಕರೆ ನೀಡಲಾಗಿದೆ.

ಇದರ ಪರಿಣಾಮ (ಅಂದರೆ ಸಂವಿಧಾನದ ಮುನ್ನುಡಿಯನ್ನು ಗಟ್ಟಿಯಾಗಿ ಸಾಮೂಹಿಕವಾಗಿ ಓದುವುದು ಮತ್ತು ಹಿಂದೂ, ಮುಸ್ಲಿಂ, ಕ್ರೈಸ್ತ ದಲಿತ, ಮಹಿಳೆಯರು, ವಿದ್ಯಾರ್ಥಿಗಳು ಒಂದೆಡೆ ಸೇರಿ ಸಹಭೋಜನ ಮಾಡುವುದು – ಒಂದೇ ದಿನ ಸಾವಿರ ಕಡೆ) ಹಲವು ರೀತಿಯದ್ದಾಗಿರುತ್ತದೆ ಎಂಬುದನ್ನು ನೀವು ಊಹಿಸಬಲ್ಲಿರಿ. ಸ್ವಾಮೀಜಿಗಳು, ಮುಲ್ಲಾಗಳು, ಎಲ್ಲಾ ಜಾತಿಯ ಜನರನ್ನೂ ಒಳಗೊಳ್ಳಬಹುದು. ಈಗಾಗಲೇ 75 ಊರುಗಳಲ್ಲಿ ನಿಗದಿಯಾಗಿದ್ದು, ಪ್ರತಿ ಗಂಟೆಗೂ ಸಂಖ್ಯೆ ಏರುತ್ತಿದೆ “ಸಹಸ್ರ ಸಹಭೋಜನ” ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಲಾಗಿದೆ.

ನೀವು ಎಲ್ಲಿಯಾದರೂ ಇದನ್ನು ಸಂಘಟಿಸಬಹುದೇ? ಹಾಗೆಯೇ ನಿಮ್ಮ ಗೆಳೆಯರು (ಯಾವ ಊರಾದರೂ ಸರಿ) ಎಲ್ಲೆಲ್ಲಿ ಸಂಘಟಿಸಬಹುದು? ಕೂಡಲೇ ತಿಳಿಸಿ. ಮಾಡುವವರ ಸಹಾಯ ಸಂಪರ್ಕಕ್ಕಾಗಿ 9353666821 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಸ್ರ ಸಹಭೋಜನ ಫೇಸ್ಬುಕ್ ಪುಟ ಸಹಾ ನೋಡಬಹುದು.

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ. ಇದುವೇ ದೇಶವನ್ನು ಉಳಿಸುವ ಮಾರ್ಗ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...