Homeಮುಖಪುಟಬಹುಭಾಷಾ ನಟಿ ಸೌಂದರ್ಯ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ!?

ಬಹುಭಾಷಾ ನಟಿ ಸೌಂದರ್ಯ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ!?

ನಟಿ ಸೌಂದರ್ಯ ತಮ್ಮ 20 ನೇ ವಯಸ್ಸಿನಲ್ಲಿ ತೆಲುಗು ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.  ಒಂದು ದಶಕದ ಅವಧಿಯಲ್ಲಿ ಹಲವಾರು ತೆಲುಗು, ತಮಿಳು ಮತ್ತು ಕನ್ನಡ ಚಿತ್ರಗಳಲ್ಲಿ ನಟಿಸಿದರು.

- Advertisement -
- Advertisement -

ಬಹುಭಾಷಾ ನಟಿ ಸಾವಿತ್ರಿಯವರ ಜೀವನ ಚರಿತ್ರೆ ಆಧರಿಸಿದ ಮಹಾನಟಿ ಚಿತ್ರದ ಯಶಸ್ಸು ಸಾಲು ಸಾಲು ಬಯೋಪಿಕ್‌ಗಳ ನಿರ್ಮಾಣಕ್ಕೆ ಕಾರಣವಾಗಿದೆ. ಈಗ ಟಾಲಿವುಡ್‌ನಿಂದ ಮತ್ತೊಂದು ಬಯೋಪಿಕ್ ನಿರ್ಮಾಣದ ಸುದ್ದಿ ಹೊರಬಿದ್ದಿದೆ.

ನಟಿ ದಿವಂಗತ ಸೌಂದರ್ಯ ಅವರ ಜೀವನಚರಿತ್ರೆ ಕುರಿತು ಚಿತ್ರ ಆರಂಭವಾಗುವ ಸುದ್ದಿ ಬಹುದಿನಗಳಿಂದ ಹರಿದಾಡುತ್ತಿದೆ. ಈಗ ಅವರ ಪಾತ್ರವನ್ನು ನ್ಯಾಚೂರಲ್ ಬ್ಯೂಟಿ ಸಾಯಿಪಲ್ಲವಿ ನಿರ್ವಹಿಸುವ ಕುರಿತು ವದಂತಿಗಳು ಬಂದಿವೆ. ಈಗಾಗಲೇ ಚಿತ್ರತಂಡ ಸಾಯಿಪಲ್ಲವಿ ಅವರನ್ನು ಸಂಪರ್ಕಿಸಿದ್ದು, ಅಂದುಕೊಂಡಂತೆ ಎಲ್ಲಾ ನಡೆದರೆ ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ನಿರ್ಮಾಣ ಆರಂಭವಾಗಲಿದೆ.

ಸದ್ಯ ಸಾಯಿ ಪಲ್ಲವಿ ತಮಿಳಿನ ಸೂಪರ ಹಿಟ್ ಚಿತ್ರ ವೇದಾಲಂನ ತೆಲುಗು ರಿಮೇಕ್‌ನಲ್ಲಿ ಚಿರಂಜೀವಿ ಅವರ ಸಹೋದರಿಯ ಪಾತ್ರದಲ್ಲಿ ನಟಿಸಲಿರುವುದರಿಂದ ಡೇಟ್ಸ್ ಹೊಂದಿಕೆ ಮಾಡಿಕೊಳ್ಳಬೇಕಾಗಿದೆ. ಸಾಯಿ ಪಲ್ಲವಿ ಕೂಡ ಸೌಂದರ್ಯ ಅವರ ಬಯೋಪಿಕ್‌ನಲ್ಲಿ ನಟಿಸಲು ಆಸಕ್ತಿ ಹೊಂದಿದ್ದಾರೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ಜುಲೈ 18, 1972 ರಲ್ಲಿ ಜನಿಸಿದ ನಟಿ ಸೌಂದರ್ಯ ತಮ್ಮ 20 ನೇ ವಯಸ್ಸಿನಲ್ಲಿ ತೆಲುಗು ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.  ಒಂದು ದಶಕದ ಅವಧಿಯಲ್ಲಿ ಹಲವಾರು ತೆಲುಗು, ತಮಿಳು ಮತ್ತು ಕನ್ನಡ ಚಿತ್ರಗಳಲ್ಲಿ ನಟಿಸಿದರು. ದಕ್ಷಿಣ ಭಾರತದ ಎಲ್ಲ ಪ್ರಮುಖ ನಟರೊಂದಿಗೂ ತೆರೆ ಹಂಚಿಕೊಂಡ ಖ್ಯಾತಿ ಅವರದ್ದು. ಹಿಂದಿ ಚಿತ್ರರಂಗದ ಖ್ಯಾತ ನಟ ಅಮಿತಾಬಚ್ಚನ್‌ ಜೊತೆ ಸೂರ್ಯವಂಶಂನಲ್ಲಿ ನಟಿಸಿದ್ದರು.

ಬಹುಭಾಷಾ ನಟಿಯಾಗಿದ್ದ ಸೌಂದರ್ಯ ಅವರ ಬಯೋಪಿಕ್ ಕೂಡ ಬಹುಭಾಷೆಗಳಲ್ಲಿ ನಿರ್ಮಾಣವಾಗಲಿದೆ ಎಂದು ತಿಳಿದುಬಂದಿದೆ. ಸುಂದರ ನಟಿ, ನಿರ್ಮಾಪಕಿ, ಸೌಂದರ್ಯ ಇನ್ನೂ ಕಿರುವಯಸ್ಸಿನಲ್ಲಿ ಜನಪ್ರಿಯತೆಯ ತುತ್ತ ತುದಿಯಲ್ಲಿದ್ದಾಗಲೇ ಚುನಾವಣಾ ಪ್ರಚಾರದ ಸಮಯದಲ್ಲಿ ಅವರು ಪಯಣಿಸುತ್ತಿದ್ದ ಕಿರು ವಿಮಾನದ ಅಪಘಾತದಲ್ಲಿ ದುರ್ಮರಣಕ್ಕೀಡಾದರು.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...