Homeಮುಖಪುಟಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರವಾಗಿ ಗಾಯಗೊಂಡ ನಟ

ಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರವಾಗಿ ಗಾಯಗೊಂಡ ನಟ

- Advertisement -
- Advertisement -

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ಗುರುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನ ಯತ್ನ ನಡೆಸಿದ್ದು, ಈ ವೇಳೆ ಕನಿಷ್ಠ ಆರು ಬಾರಿ ನಟನಿಗೆ ಚಾಕುವಿನಿಂದ ಇರಿದಿದ್ದಾನೆ.

ದಾಳಿಯಿಂದ ಸೈಫ್ ಆಲಿ ಖಾನ್‌ ಅವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಬೆಳಗಿನ ಜಾವ 3.30 ಕ್ಕೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ವೈದ್ಯರ ಪ್ರಕಾರ, ಚಾಕುವಿನಿಂದ ಆದ ಒಂದು ಗಾಯವು ನಟನ ಬೆನ್ನುಹುರಿಯ ಹತ್ತಿರದಲ್ಲಿದೆ.

ಪೊಲೀಸರ ಪ್ರಕಾರ, ಶಂಕಿತ ಸೈಫ್ ಅಲಿ ಖಾನ್ ಅವರ ಮನೆಗೆ ಪ್ರವೇಶಿಸಿದಾಗ ಅವರಿಬ್ಬರ ನಡುವೆ ಜಗಳವಾಗಿದ್ದು, ಈ ಸಮಯದಲ್ಲಿ ನಟನಿಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯ ಸಮಯದಲ್ಲಿ ನಟನ ಕೆಲವು ಕುಟುಂಬ ಸದಸ್ಯರು ಮನೆಯಲ್ಲಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆಹಚ್ಚಲು ಮತ್ತು ಆತನ ಬಂಧನವನ್ನು ಖಚಿತಪಡಿಸಿಕೊಳ್ಳಲು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ನುಗ್ಗಿದ್ದಾನೆ. ನಟ ಮತ್ತು ವ್ಯಕ್ತಿಯಿಬ್ಬರೂ ಜಗಳವಾಡಿದ್ದಾರೆ. ನಟ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದು, ತನಿಖೆ ನಡೆಯುತ್ತಿದೆ” ಎಂದು ಸ್ಥಳೀಯ ಪ್ರದೇಶದ ಉಪ ಪೊಲೀಸ್ ಆಯುಕ್ತ ದೀಕ್ಷಿತ್ ಗೆಡಮ್ ಅವರು ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

ಸೈಫ್ ಅಲಿ ಖಾನ್ ಅವರ ತಂಡವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರು ‘ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ’ ಎಂದು ವಿನಂತಿಸಿದ್ದಾರೆ.

“ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ ಎಂದು ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯ; ಪರಿಸ್ಥಿತಿಯ ಕುರಿತು ನಾವು ನಿಮಗೆ ಮಾಹಿತಿ ನೀಡುತ್ತೇವೆ” ಎಂದು ಸೈಫ್ ಅಲಿ ಖಾನ್ ಅವರ ತಂಡವು ಹೇಳಿಕೆಯಲ್ಲಿ ತಿಳಿಸಿದೆ.

ದಾಳಿಯ ನಂತರ, ಲೀಲಾವತಿ ಆಸ್ಪತ್ರೆ ಹೇಳಿಕೆಯಲ್ಲಿ, ಸೈಫ್ ಅಲಿ ಖಾನ್ ಅವರಿಗೆ ಕನಿಷ್ಠ ಆರು ಬಾರಿ ಇರಿತಕ್ಕೊಳಗಾಗಿದ್ದು, ಎರಡು ಆಳವಾದ ಗಾಯಗಳಾಗಿವೆ ಎಂದು ತಿಳಿಸಿದೆ. ಇದಲ್ಲದೆ, ಚಾಕುವಿನಿಂದ ಆದ ಗಾಯಗಳಲ್ಲಿ ಒಂದು ಅವರ ಬೆನ್ನುಹುರಿಗೆ ತುಂಬಾ ಹತ್ತಿರದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಸೈಫ್ ಅಲಿ ಖಾನ್ ಅವರನ್ನು ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಇರಿದಿದ್ದು, ಬೆಳಗಿನ ಜಾವ 3.30 ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಿಗೆ ಆರು ಇರಿತಗಳಾಗಿದ್ದು, ಎರಡು ಆಳವಾಗಿದ್ದವು. ಇದರಲ್ಲಿ ಒಂದು ಬೆನ್ನುಮೂಳೆಯ ಹತ್ತಿರದಲ್ಲಿದೆ. ನರಶಸ್ತ್ರಚಿಕಿತ್ಸಕ ಡಾ. ನಿತಿನ್ ಡಾಂಗೆ, ಕಾಸ್ಮೆಟಿಕ್ ಸರ್ಜನ್ ಡಾ. ಲೀನಾ ಜೈನ್ ಮತ್ತು ಅರಿವಳಿಕೆ ತಜ್ಞೆ ಡಾ. ನಿಶಾ ಗಾಂಧಿ ನೇತೃತ್ವದ ವೈದ್ಯರ ತಂಡವು ಅವರಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದೆ” ಎಂದು ಲೀಲಾವತಿ ಆಸ್ಪತ್ರೆಯ ಡಾ. ಉತ್ತಮಮಣಿ ತಿಳಿಸಿದ್ದಾರೆ.

ಇದನ್ನೂ ಓದಿ; ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...