Homeಮುಖಪುಟಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರವಾಗಿ ಗಾಯಗೊಂಡ ನಟ

ಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರವಾಗಿ ಗಾಯಗೊಂಡ ನಟ

- Advertisement -
- Advertisement -

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ಗುರುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನ ಯತ್ನ ನಡೆಸಿದ್ದು, ಈ ವೇಳೆ ಕನಿಷ್ಠ ಆರು ಬಾರಿ ನಟನಿಗೆ ಚಾಕುವಿನಿಂದ ಇರಿದಿದ್ದಾನೆ.

ದಾಳಿಯಿಂದ ಸೈಫ್ ಆಲಿ ಖಾನ್‌ ಅವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಬೆಳಗಿನ ಜಾವ 3.30 ಕ್ಕೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ವೈದ್ಯರ ಪ್ರಕಾರ, ಚಾಕುವಿನಿಂದ ಆದ ಒಂದು ಗಾಯವು ನಟನ ಬೆನ್ನುಹುರಿಯ ಹತ್ತಿರದಲ್ಲಿದೆ.

ಪೊಲೀಸರ ಪ್ರಕಾರ, ಶಂಕಿತ ಸೈಫ್ ಅಲಿ ಖಾನ್ ಅವರ ಮನೆಗೆ ಪ್ರವೇಶಿಸಿದಾಗ ಅವರಿಬ್ಬರ ನಡುವೆ ಜಗಳವಾಗಿದ್ದು, ಈ ಸಮಯದಲ್ಲಿ ನಟನಿಗೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯ ಸಮಯದಲ್ಲಿ ನಟನ ಕೆಲವು ಕುಟುಂಬ ಸದಸ್ಯರು ಮನೆಯಲ್ಲಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆಹಚ್ಚಲು ಮತ್ತು ಆತನ ಬಂಧನವನ್ನು ಖಚಿತಪಡಿಸಿಕೊಳ್ಳಲು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

“ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ನುಗ್ಗಿದ್ದಾನೆ. ನಟ ಮತ್ತು ವ್ಯಕ್ತಿಯಿಬ್ಬರೂ ಜಗಳವಾಡಿದ್ದಾರೆ. ನಟ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದು, ತನಿಖೆ ನಡೆಯುತ್ತಿದೆ” ಎಂದು ಸ್ಥಳೀಯ ಪ್ರದೇಶದ ಉಪ ಪೊಲೀಸ್ ಆಯುಕ್ತ ದೀಕ್ಷಿತ್ ಗೆಡಮ್ ಅವರು ಈ ವಿಷಯದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

ಸೈಫ್ ಅಲಿ ಖಾನ್ ಅವರ ತಂಡವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರು ‘ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ’ ಎಂದು ವಿನಂತಿಸಿದ್ದಾರೆ.

“ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಿ ಎಂದು ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯ; ಪರಿಸ್ಥಿತಿಯ ಕುರಿತು ನಾವು ನಿಮಗೆ ಮಾಹಿತಿ ನೀಡುತ್ತೇವೆ” ಎಂದು ಸೈಫ್ ಅಲಿ ಖಾನ್ ಅವರ ತಂಡವು ಹೇಳಿಕೆಯಲ್ಲಿ ತಿಳಿಸಿದೆ.

ದಾಳಿಯ ನಂತರ, ಲೀಲಾವತಿ ಆಸ್ಪತ್ರೆ ಹೇಳಿಕೆಯಲ್ಲಿ, ಸೈಫ್ ಅಲಿ ಖಾನ್ ಅವರಿಗೆ ಕನಿಷ್ಠ ಆರು ಬಾರಿ ಇರಿತಕ್ಕೊಳಗಾಗಿದ್ದು, ಎರಡು ಆಳವಾದ ಗಾಯಗಳಾಗಿವೆ ಎಂದು ತಿಳಿಸಿದೆ. ಇದಲ್ಲದೆ, ಚಾಕುವಿನಿಂದ ಆದ ಗಾಯಗಳಲ್ಲಿ ಒಂದು ಅವರ ಬೆನ್ನುಹುರಿಗೆ ತುಂಬಾ ಹತ್ತಿರದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಸೈಫ್ ಅಲಿ ಖಾನ್ ಅವರನ್ನು ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಇರಿದಿದ್ದು, ಬೆಳಗಿನ ಜಾವ 3.30 ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಿಗೆ ಆರು ಇರಿತಗಳಾಗಿದ್ದು, ಎರಡು ಆಳವಾಗಿದ್ದವು. ಇದರಲ್ಲಿ ಒಂದು ಬೆನ್ನುಮೂಳೆಯ ಹತ್ತಿರದಲ್ಲಿದೆ. ನರಶಸ್ತ್ರಚಿಕಿತ್ಸಕ ಡಾ. ನಿತಿನ್ ಡಾಂಗೆ, ಕಾಸ್ಮೆಟಿಕ್ ಸರ್ಜನ್ ಡಾ. ಲೀನಾ ಜೈನ್ ಮತ್ತು ಅರಿವಳಿಕೆ ತಜ್ಞೆ ಡಾ. ನಿಶಾ ಗಾಂಧಿ ನೇತೃತ್ವದ ವೈದ್ಯರ ತಂಡವು ಅವರಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದೆ” ಎಂದು ಲೀಲಾವತಿ ಆಸ್ಪತ್ರೆಯ ಡಾ. ಉತ್ತಮಮಣಿ ತಿಳಿಸಿದ್ದಾರೆ.

ಇದನ್ನೂ ಓದಿ; ಜನವರಿ 19 ರಿಂದ ಇಸ್ರೇಲ್-ಹಮಾಸ್ ಕದನ ವಿರಾಮ ಒಪ್ಪಂದ ಜಾರಿ ಸಾಧ್ಯತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...