Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...