Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...