Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...