Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...