Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...