Homeಕರ್ನಾಟಕಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ದಾಳಿ ಮಾಡಿದವನು ನೋಡಲು ಟೆರರಿಸ್ಟ್‌ ಥರ ಇದ್ದ ಎಂದು ಹಲ್ಲೆಗೊಳಗಾದ ದಲಿತ ಮುಖಂಡ ಮಂಜುನಾಥ್‌ ವಿವರಿಸಿದ್ದಾರೆ

- Advertisement -
- Advertisement -

ತನ್ನ ಮನೆಗೆ ವಾಹನದಲ್ಲಿ ಕರುವನ್ನು ತೆಗೆದುಕೊಂಡು ಹೋಗುತ್ತಿದ್ದ ದಲಿತ ಯುವ ಮುಖಂಡನ ಮೇಲೆ ಬಜರಂಗದಳ ಕಾರ್ಯಕರ್ತರು ಸಕಲೇಶಪುರ ಪಟ್ಟಣದ ಹೊಸ ಬಸ್‌ ನಿಲ್ದಾಣ ಬಳಿ ಹಲ್ಲೆ ನಡೆಸಿದ್ದಾರೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ಕಾರ್ಯಕರ್ತ ದೀಪು ಹಾಗೂ ಇತರರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಲ್ಲೆಗೆ ಒಳಗಾದ ಮಂಜುನಾಥ್‌ ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಜರಂಗದಳದ ದುಷ್ಕರ್ಮಿಗಳು ಈತನ ಅಣ್ಣನ ಮಗ ಕಾವೇಶ್ ಮೇಲೆಯೂ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಂಜುನಾಥ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಹೊಸ ಬಸ್ ನಿಲ್ದಾಣದ ಬಳಿ ಒಬ್ಬ ಹುಡುಗ ಬಂದನು. ನಾನು ಬಜರಂಗದಳದವನು. ಲೆಟರ್‌ ಕೊಡು ಎಂದು ಕೇಳಿದನು. ಅದಕ್ಕೆ ನಾನು,- ಲೆಟರ್‌ ಕೇಳಲು ನೀನ್ಯಾರಪ್ಪ? ಪೊಲೀಸರು ಬಂದರೆ ಕೊಡುತ್ತೇನೆ. ನಿನಗೇನಾದರೂ ಸರ್ಕಾರ ಪರವಾನಗಿ ನೀಡಿದೆಯಾ? ಬೇರೆ ಏನಾದರೂ ಕೊಟ್ಟಿದೆಯಾ? ನೀನು ಎ.ಸಿ.ಯ, ಡಿ.ಸಿ.ಯ, ತಹಸೀಲ್ದಾರಾ? ಲೆಟರ್‌ ಕೇಳಲು ನೀನ್ಯಾರು? ಪೊಲೀಸರನ್ನು ಕರೆದುಕೊಂಡು ಬಾ- ಎಂದೆ. ನಾನು ನಿಮ್ಮ ಅಪ್ಪ ಎಂದು ಬೈದನು. ಬಾಯಿ ಬಂದಂತೆ ಹೀಯಾಳಿಸಿ, ನನಗೆ ಹೊಡೆದ” ಎಂದು ವಿವರಿಸಿದ್ದಾರೆ.

“ಆಟೋ ಹುಡುಗರೆಲ್ಲ ಬಂದರು. ಆ ಮೇಲೆ ನನ್ನನ್ನು ಬಿಟ್ಟು ಹೋಗಲಾಯಿತು. ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ. ನಾನು ಮಾಜಿ ಗ್ರಾಪಂ ಅಧ್ಯಕ್ಷ. ನಾಲ್ಕೂರು ಜನರಿಗೆ ಅನುಕೂಲವಾಗುವಂತೆ ಕಾನೂನುಬದ್ಧವಾಗಿ ಕೆಲಸ ಮಾಡುತ್ತೇನೆ.  ಯಾರಿಗೂ ತೊಂದರೆ ಮಾಡಿಲ್ಲ. ನನಗೆ ತೊಂದರೆ ನೀಡಿದ ಈತನಿಗೆ ತಕ್ಕ ಶಿಕ್ಷೆಯಾಗಬೇಕು. ಈ ರೀತಿಯ ಕಿಡಿಗೇಡಿಗಳನ್ನು ಬಜರಂಗದಳದಲ್ಲಿ ಇಟ್ಟುಕೊಳ್ಳಬೇಡಿ” ಎಂದಿದ್ದಾರೆ.

“ಅವನು ನೋಡಲು ಟೆರರಿಸ್ಟ್‌ ಥರ ಇದ್ದಾನೆ. ಅವನ ಮೂಲ ಯಾವುದೆಂದು ಕಂಡುಹಿಡಿಯಬೇಕು. ಅವನನ್ನು ಗಡಿಪಾರು ಮಾಡಬೇಕು. ನಾವು ನಮ್ಮ ತಾತ, ಮುತ್ತಾತನನ ಕಾಲದಿಂದಲೂ ಇಲ್ಲಿ ವಾಸವಿದ್ದೇವೆ. ನಮಗೆ ಬೆಲೆ ಇಲ್ಲ ಎಂದ ಮೇಲೆ ಈ ರೀತಿಯ ಟೆರರಿಸ್ಟ್‌ಗಳಿಗೆ ಬೆಲೆ ಕೊಡುವುದೇ? ಆತನನ್ನು ಗಡಿಪಾರು ಮಾಡಿ ನನಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ವಾಹನದಲ್ಲಿ ಕಾನೂನಾತ್ಮಕವಾಗಿ ಕರು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಕಲೇಶಪುರ ತಾಲೂಕಿನ ವಿವಿಧ ದಲಿತ ಸಂಘಟನೆ ಮುಖಂಡರು ಠಾಣೆ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್‌ ಹಾಗೂ ದಲಿತ ಮುಖಂಡ ಬೈಕೆರೆ ದೇವರಾಜ್‌, “ಬಜರಂಗದಳದ ಕಾರ್ಯಕರ್ತರ ಅಟ್ಟಹಾಸ ತಾಲ್ಲೂಕಿನಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ನಾವ್ಯಾರೂ ಹಿಂದೂಗಳಲ್ಲವಾ? ಅವರು ಮಾತ್ರ ಹಿಂದೂಗಳಾ” ಎಂದು ಪ್ರಶ್ನಿಸಿದ್ದಾರೆ.

“ದಲಿತರು ಮೌನವಾಗಿದ್ದಾರೆ ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಎಂದು ತಿಳಿದಿದ್ದರೆ ಅದು ತಪ್ಪು. ದಲಿತರು ಬೀದಿಗಿಳಿದರೆ ಇದರ ಪರಿಣಾಮ ಏನಾಗುತ್ತದೆ ಎಂಬುದನ್ನು ಈ ಬಜರಂಗದಳದ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪುಂಡಾಟಿಕೆಯನ್ನು ದಲಿತರು ಇನ್ನು ಸಹಿಸಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ವಕೀಲರಾದ ವೇಣುಕುಮಾರ್ ಮಾತನಾಡಿ, “ತಾಲೂಕಿನ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದ್ದು ಬಜರಂಗದಳದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಮತೀಯ ಗೂಂಡಾಗಿರಿ ನಡೆಸಲು ಸರಕಾರ ಇವರಿಗೆ ಯಾವ ಹಕ್ಕು ನೀಡಿದೆ?” ಎಂದು ಪ್ರಶ್ನಿಸಿರುವ ಅವರು, “ಪೊಲೀಸರು ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾವು ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು. ಶಾಂತಿಗೆ ಭಂಗ ತರುವುದಕ್ಕೆ ನಾವು ಇಷ್ಟಪಡುವುದಿಲ್ಲ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸುಮ್ಮನಿರುವುದಿಲ್ಲ” ಎಂಬ ಸ್ಪಷ್ಟ ಸಂದೇಶವನ್ನು ಅವರು ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಹಲವು ದಲಿತ ಮುಖಂಡರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಲ್ಲೆ ನಡೆಸಿದ ಬಜರಂಗಿ ದಳದ ಬೇವರ್ಸಿಗಳಿಗೆ ಅವರದೇ ಭಾಷೆಯಲ್ಲಿ ದಲಿತರು ಸಹ ತಿರುಗೇಟು ಮುಟ್ಟಿನೋಡಿಕೊಳ್ಳುವ ಹಾಗೆ ನೀಡಬೇಕು ,ಆಗ ಉಷಾರಾಗುತ್ತಾರೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...