Homeಕರ್ನಾಟಕಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ದಾಳಿ ಮಾಡಿದವನು ನೋಡಲು ಟೆರರಿಸ್ಟ್‌ ಥರ ಇದ್ದ ಎಂದು ಹಲ್ಲೆಗೊಳಗಾದ ದಲಿತ ಮುಖಂಡ ಮಂಜುನಾಥ್‌ ವಿವರಿಸಿದ್ದಾರೆ

- Advertisement -
- Advertisement -

ತನ್ನ ಮನೆಗೆ ವಾಹನದಲ್ಲಿ ಕರುವನ್ನು ತೆಗೆದುಕೊಂಡು ಹೋಗುತ್ತಿದ್ದ ದಲಿತ ಯುವ ಮುಖಂಡನ ಮೇಲೆ ಬಜರಂಗದಳ ಕಾರ್ಯಕರ್ತರು ಸಕಲೇಶಪುರ ಪಟ್ಟಣದ ಹೊಸ ಬಸ್‌ ನಿಲ್ದಾಣ ಬಳಿ ಹಲ್ಲೆ ನಡೆಸಿದ್ದಾರೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ಕಾರ್ಯಕರ್ತ ದೀಪು ಹಾಗೂ ಇತರರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಲ್ಲೆಗೆ ಒಳಗಾದ ಮಂಜುನಾಥ್‌ ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಜರಂಗದಳದ ದುಷ್ಕರ್ಮಿಗಳು ಈತನ ಅಣ್ಣನ ಮಗ ಕಾವೇಶ್ ಮೇಲೆಯೂ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಂಜುನಾಥ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಹೊಸ ಬಸ್ ನಿಲ್ದಾಣದ ಬಳಿ ಒಬ್ಬ ಹುಡುಗ ಬಂದನು. ನಾನು ಬಜರಂಗದಳದವನು. ಲೆಟರ್‌ ಕೊಡು ಎಂದು ಕೇಳಿದನು. ಅದಕ್ಕೆ ನಾನು,- ಲೆಟರ್‌ ಕೇಳಲು ನೀನ್ಯಾರಪ್ಪ? ಪೊಲೀಸರು ಬಂದರೆ ಕೊಡುತ್ತೇನೆ. ನಿನಗೇನಾದರೂ ಸರ್ಕಾರ ಪರವಾನಗಿ ನೀಡಿದೆಯಾ? ಬೇರೆ ಏನಾದರೂ ಕೊಟ್ಟಿದೆಯಾ? ನೀನು ಎ.ಸಿ.ಯ, ಡಿ.ಸಿ.ಯ, ತಹಸೀಲ್ದಾರಾ? ಲೆಟರ್‌ ಕೇಳಲು ನೀನ್ಯಾರು? ಪೊಲೀಸರನ್ನು ಕರೆದುಕೊಂಡು ಬಾ- ಎಂದೆ. ನಾನು ನಿಮ್ಮ ಅಪ್ಪ ಎಂದು ಬೈದನು. ಬಾಯಿ ಬಂದಂತೆ ಹೀಯಾಳಿಸಿ, ನನಗೆ ಹೊಡೆದ” ಎಂದು ವಿವರಿಸಿದ್ದಾರೆ.

“ಆಟೋ ಹುಡುಗರೆಲ್ಲ ಬಂದರು. ಆ ಮೇಲೆ ನನ್ನನ್ನು ಬಿಟ್ಟು ಹೋಗಲಾಯಿತು. ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ. ನಾನು ಮಾಜಿ ಗ್ರಾಪಂ ಅಧ್ಯಕ್ಷ. ನಾಲ್ಕೂರು ಜನರಿಗೆ ಅನುಕೂಲವಾಗುವಂತೆ ಕಾನೂನುಬದ್ಧವಾಗಿ ಕೆಲಸ ಮಾಡುತ್ತೇನೆ.  ಯಾರಿಗೂ ತೊಂದರೆ ಮಾಡಿಲ್ಲ. ನನಗೆ ತೊಂದರೆ ನೀಡಿದ ಈತನಿಗೆ ತಕ್ಕ ಶಿಕ್ಷೆಯಾಗಬೇಕು. ಈ ರೀತಿಯ ಕಿಡಿಗೇಡಿಗಳನ್ನು ಬಜರಂಗದಳದಲ್ಲಿ ಇಟ್ಟುಕೊಳ್ಳಬೇಡಿ” ಎಂದಿದ್ದಾರೆ.

“ಅವನು ನೋಡಲು ಟೆರರಿಸ್ಟ್‌ ಥರ ಇದ್ದಾನೆ. ಅವನ ಮೂಲ ಯಾವುದೆಂದು ಕಂಡುಹಿಡಿಯಬೇಕು. ಅವನನ್ನು ಗಡಿಪಾರು ಮಾಡಬೇಕು. ನಾವು ನಮ್ಮ ತಾತ, ಮುತ್ತಾತನನ ಕಾಲದಿಂದಲೂ ಇಲ್ಲಿ ವಾಸವಿದ್ದೇವೆ. ನಮಗೆ ಬೆಲೆ ಇಲ್ಲ ಎಂದ ಮೇಲೆ ಈ ರೀತಿಯ ಟೆರರಿಸ್ಟ್‌ಗಳಿಗೆ ಬೆಲೆ ಕೊಡುವುದೇ? ಆತನನ್ನು ಗಡಿಪಾರು ಮಾಡಿ ನನಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ವಾಹನದಲ್ಲಿ ಕಾನೂನಾತ್ಮಕವಾಗಿ ಕರು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಕಲೇಶಪುರ ತಾಲೂಕಿನ ವಿವಿಧ ದಲಿತ ಸಂಘಟನೆ ಮುಖಂಡರು ಠಾಣೆ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್‌ ಹಾಗೂ ದಲಿತ ಮುಖಂಡ ಬೈಕೆರೆ ದೇವರಾಜ್‌, “ಬಜರಂಗದಳದ ಕಾರ್ಯಕರ್ತರ ಅಟ್ಟಹಾಸ ತಾಲ್ಲೂಕಿನಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ. ನಾವ್ಯಾರೂ ಹಿಂದೂಗಳಲ್ಲವಾ? ಅವರು ಮಾತ್ರ ಹಿಂದೂಗಳಾ” ಎಂದು ಪ್ರಶ್ನಿಸಿದ್ದಾರೆ.

“ದಲಿತರು ಮೌನವಾಗಿದ್ದಾರೆ ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಎಂದು ತಿಳಿದಿದ್ದರೆ ಅದು ತಪ್ಪು. ದಲಿತರು ಬೀದಿಗಿಳಿದರೆ ಇದರ ಪರಿಣಾಮ ಏನಾಗುತ್ತದೆ ಎಂಬುದನ್ನು ಈ ಬಜರಂಗದಳದ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪುಂಡಾಟಿಕೆಯನ್ನು ದಲಿತರು ಇನ್ನು ಸಹಿಸಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ವಕೀಲರಾದ ವೇಣುಕುಮಾರ್ ಮಾತನಾಡಿ, “ತಾಲೂಕಿನ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದ್ದು ಬಜರಂಗದಳದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಮತೀಯ ಗೂಂಡಾಗಿರಿ ನಡೆಸಲು ಸರಕಾರ ಇವರಿಗೆ ಯಾವ ಹಕ್ಕು ನೀಡಿದೆ?” ಎಂದು ಪ್ರಶ್ನಿಸಿರುವ ಅವರು, “ಪೊಲೀಸರು ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾವು ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು. ಶಾಂತಿಗೆ ಭಂಗ ತರುವುದಕ್ಕೆ ನಾವು ಇಷ್ಟಪಡುವುದಿಲ್ಲ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ನಾವು ಸುಮ್ಮನಿರುವುದಿಲ್ಲ” ಎಂಬ ಸ್ಪಷ್ಟ ಸಂದೇಶವನ್ನು ಅವರು ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಹಲವು ದಲಿತ ಮುಖಂಡರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಲ್ಲೆ ನಡೆಸಿದ ಬಜರಂಗಿ ದಳದ ಬೇವರ್ಸಿಗಳಿಗೆ ಅವರದೇ ಭಾಷೆಯಲ್ಲಿ ದಲಿತರು ಸಹ ತಿರುಗೇಟು ಮುಟ್ಟಿನೋಡಿಕೊಳ್ಳುವ ಹಾಗೆ ನೀಡಬೇಕು ,ಆಗ ಉಷಾರಾಗುತ್ತಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...