Homeಮುಖಪುಟಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

ಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

- Advertisement -
- Advertisement -

ಗುಜರಾತ್ ಪೊಲೀಸರು ಗುರುವಾರ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಮೂರನೇ ಬಾರಿಗೆ ಬಂಧಿಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದೇ ತಿಂಗಳಲ್ಲಿ ಸಾಕೇತ್‌ ಮೂರನೇ ಸಲ ಬಂಧನಕ್ಕೆ ಒಳಗಾಗಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗೋಖಲೆ ಅವರನ್ನು ಗುರುವಾರ ತಡರಾತ್ರಿ ದೆಹಲಿಯಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಖಲೆ ಮತ್ತು ಅಪರಾಧ ವಿಭಾಗದ ಅಧಿಕಾರಿಗಳು ಶುಕ್ರವಾರ ಸಂಜೆ ಅಹಮದಾಬಾದ್ ತಲುಪುವ ನಿರೀಕ್ಷೆಯಿದೆ.

“ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮ್ಮ ತಂಡವು ನವದೆಹಲಿ ಜಿಲ್ಲೆಗೆ ಬರುತ್ತಿದೆ ಮತ್ತು ದಾಳಿ ನಡೆಸಲಿದೆ ಎಂದು ಗುಜರಾತ್ ಪೊಲೀಸರು ನಮಗೆ ತಿಳಿಸಿದ್ದಾರೆ” ಎಂದು ಅಪರಿಚಿತ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ನಂತರ ಅವರು ಗೋಖಲೆ ಅವರನ್ನು ಬಂಧಿಸಿದ್ದಾರೆ. ಗೋಖಲೆ ಬಂಧನದ ಬಗ್ಗೆ ನಮಗೆ ತಿಳಿದಿರಲಿಲ್ಲ. ದಾಳಿಯ ಸ್ಥಳ ಮತ್ತು ಬಂದ ತಂಡದ ಬಗ್ಗೆ ಮಾತ್ರ ನಮಗೆ ತಿಳಿಸಲಾಗಿದೆ” ಎಂದಿದ್ದಾರೆ ಅಧಿಕಾರಿ.

ತೃಣಮೂಲ ಕಾಂಗ್ರೆಸ್ ಮೂಲಗಳು ‘ಸ್ಕ್ರಾಲ್‌.ಇನ್‌’ಗೆ ಪ್ರತಿಕ್ರಿಯಿಸಿದ್ದು, “ಗೋಖಲೆ ಅವರನ್ನು ದೆಹಲಿಯ ಬಂಗಾ ಭವನದಲ್ಲಿ ಅರೆಸ್ಟ್ ಮಾಡಲಾಗಿದೆ. ಸೈಬರ್‌ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ” ಎಂದಿವೆ. ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರಿಂದ ಗೋಖಲೆಯವರ ಬಂಧನವಾಗಿದೆ ಎಂದು ಟಿಎಂಸಿ ಆರೋಪಿಸಿದೆ.

“ಮೋರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು. ಆ ವೇಳೆ 30 ಕೋಟಿ ರೂಪಾಯಿ ಖರ್ಚಾಗಿದೆ” ಎಂದು ಪ್ರತಿಪಾದಿಸಿದ ಸುದ್ದಿ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಗೋಖಲೆ ಹಂಚಿಕೊಂಡ ಬಳಿಕ ಪ್ರಕರಣ ದಾಖಲಾಗಿತ್ತು. ಗೋಖಲೆ ಅವರು ನಾಲ್ಕು ದಿನಗಳಲ್ಲಿ ಎರಡು ಬಾರಿ ಬಂಧಿಸಲ್ಪಟ್ಟಿದ್ದರು. ಆದರೆ, ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ ಈ ಮಾಹಿತಿಯು ಸುಳ್ಳು ಎಂದು ಪ್ರತಿಕ್ರಿಯಿಸಿತ್ತು.

ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಗೋಖಲೆಯವರನ್ನು ಮೊದಲು ಡಿಸೆಂಬರ್ 5 ರಂದು ಜೈಪುರದಲ್ಲಿ ಗುಜರಾತ್ ಪೊಲೀಸರು, ರಾಜಸ್ಥಾನ ಪೊಲೀಸರಿಗೆ ತಿಳಿಯದಂತೆ ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಲಾಯಿತು. ಡಿಸೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯಲು ಮೋದಿಯವರ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಡಿಸೆಂಬರ್ 8ರಂದು ಅಹಮದಾಬಾದ್ ನ್ಯಾಯಾಲಯವು ಸಾಕೇತ್‌ ಅವರಿಗೆ ಜಾಮೀನು ನೀಡಿತು, ಆದರೆ ಮೊರ್ಬಿ ಜಿಲ್ಲೆಯಲ್ಲಿ ದಾಖಲಾದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಶೀಘ್ರದಲ್ಲೇ ಮರು ಬಂಧಿಸಲಾಯಿತು. ಗೋಖಲೆಯವರು ಮೋದಿಯವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವುದನ್ನು ಹೊರತುಪಡಿಸಿ “ಚುನಾವಣೆಗಳ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಮೋರ್ಬಿ ಪೊಲೀಸರು ದೂರಿದ್ದರು.

ಡಿಸೆಂಬರ್ 9 ರಂದು ಗೋಖಲೆ ಎರಡನೇ ಪ್ರಕರಣದಲ್ಲೂ ಜಾಮೀನು ಪಡೆಯುವಲ್ಲಿ ಯಶಸ್ವಿಯಾದರು. ಗುರುವಾರ ಅವರನ್ನು ಮೂರನೇ ಬಾರಿಗೆ ಬಂಧಿಸಲ್ಪಡುವ ಕೆಲವು ಗಂಟೆಗಳ ಮೊದಲು, ಗೋಖಲೆಯವರು ಗುಜರಾತ್ ಪೊಲೀಸರ ಕುರಿತು ಟ್ವೀಟ್ ಮಾಡಿದ್ದರು. “ಮೊದಲ ಪ್ರಕರಣದಲ್ಲಿ ನನ್ನನ್ನು ಗುಜರಾತ್ ಪೊಲೀಸರು ಬಂಧಿಸಿದ್ದರ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕಾನೂನುಬಾಹಿರ ಬಂಧನದ ಪ್ರಕರಣವನ್ನು ದಾಖಲಿಸಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದರು.

“3 ವಾರಗಳ ಹಿಂದೆ ನನ್ನ ಬಂಧನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗುಜರಾತ್ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಘೋಷಿಸಲು ಸಂತೋಷವಾಗಿದೆ. ಜೈಪುರದಿಂದ ಅಹಮದಾಬಾದ್‌ಗೆ ಟ್ರಾನ್ಸಿಟ್ ರಿಮಾಂಡ್ ಇಲ್ಲದೆ (ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ) ನನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ” ಎಂದು ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...