Homeಮುಖಪುಟಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

ಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

- Advertisement -
- Advertisement -

ಗುಜರಾತ್ ಪೊಲೀಸರು ಗುರುವಾರ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಮೂರನೇ ಬಾರಿಗೆ ಬಂಧಿಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದೇ ತಿಂಗಳಲ್ಲಿ ಸಾಕೇತ್‌ ಮೂರನೇ ಸಲ ಬಂಧನಕ್ಕೆ ಒಳಗಾಗಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗೋಖಲೆ ಅವರನ್ನು ಗುರುವಾರ ತಡರಾತ್ರಿ ದೆಹಲಿಯಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಖಲೆ ಮತ್ತು ಅಪರಾಧ ವಿಭಾಗದ ಅಧಿಕಾರಿಗಳು ಶುಕ್ರವಾರ ಸಂಜೆ ಅಹಮದಾಬಾದ್ ತಲುಪುವ ನಿರೀಕ್ಷೆಯಿದೆ.

“ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮ್ಮ ತಂಡವು ನವದೆಹಲಿ ಜಿಲ್ಲೆಗೆ ಬರುತ್ತಿದೆ ಮತ್ತು ದಾಳಿ ನಡೆಸಲಿದೆ ಎಂದು ಗುಜರಾತ್ ಪೊಲೀಸರು ನಮಗೆ ತಿಳಿಸಿದ್ದಾರೆ” ಎಂದು ಅಪರಿಚಿತ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ನಂತರ ಅವರು ಗೋಖಲೆ ಅವರನ್ನು ಬಂಧಿಸಿದ್ದಾರೆ. ಗೋಖಲೆ ಬಂಧನದ ಬಗ್ಗೆ ನಮಗೆ ತಿಳಿದಿರಲಿಲ್ಲ. ದಾಳಿಯ ಸ್ಥಳ ಮತ್ತು ಬಂದ ತಂಡದ ಬಗ್ಗೆ ಮಾತ್ರ ನಮಗೆ ತಿಳಿಸಲಾಗಿದೆ” ಎಂದಿದ್ದಾರೆ ಅಧಿಕಾರಿ.

ತೃಣಮೂಲ ಕಾಂಗ್ರೆಸ್ ಮೂಲಗಳು ‘ಸ್ಕ್ರಾಲ್‌.ಇನ್‌’ಗೆ ಪ್ರತಿಕ್ರಿಯಿಸಿದ್ದು, “ಗೋಖಲೆ ಅವರನ್ನು ದೆಹಲಿಯ ಬಂಗಾ ಭವನದಲ್ಲಿ ಅರೆಸ್ಟ್ ಮಾಡಲಾಗಿದೆ. ಸೈಬರ್‌ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ” ಎಂದಿವೆ. ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರಿಂದ ಗೋಖಲೆಯವರ ಬಂಧನವಾಗಿದೆ ಎಂದು ಟಿಎಂಸಿ ಆರೋಪಿಸಿದೆ.

“ಮೋರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು. ಆ ವೇಳೆ 30 ಕೋಟಿ ರೂಪಾಯಿ ಖರ್ಚಾಗಿದೆ” ಎಂದು ಪ್ರತಿಪಾದಿಸಿದ ಸುದ್ದಿ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಗೋಖಲೆ ಹಂಚಿಕೊಂಡ ಬಳಿಕ ಪ್ರಕರಣ ದಾಖಲಾಗಿತ್ತು. ಗೋಖಲೆ ಅವರು ನಾಲ್ಕು ದಿನಗಳಲ್ಲಿ ಎರಡು ಬಾರಿ ಬಂಧಿಸಲ್ಪಟ್ಟಿದ್ದರು. ಆದರೆ, ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ ಈ ಮಾಹಿತಿಯು ಸುಳ್ಳು ಎಂದು ಪ್ರತಿಕ್ರಿಯಿಸಿತ್ತು.

ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಗೋಖಲೆಯವರನ್ನು ಮೊದಲು ಡಿಸೆಂಬರ್ 5 ರಂದು ಜೈಪುರದಲ್ಲಿ ಗುಜರಾತ್ ಪೊಲೀಸರು, ರಾಜಸ್ಥಾನ ಪೊಲೀಸರಿಗೆ ತಿಳಿಯದಂತೆ ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಲಾಯಿತು. ಡಿಸೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯಲು ಮೋದಿಯವರ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಡಿಸೆಂಬರ್ 8ರಂದು ಅಹಮದಾಬಾದ್ ನ್ಯಾಯಾಲಯವು ಸಾಕೇತ್‌ ಅವರಿಗೆ ಜಾಮೀನು ನೀಡಿತು, ಆದರೆ ಮೊರ್ಬಿ ಜಿಲ್ಲೆಯಲ್ಲಿ ದಾಖಲಾದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಶೀಘ್ರದಲ್ಲೇ ಮರು ಬಂಧಿಸಲಾಯಿತು. ಗೋಖಲೆಯವರು ಮೋದಿಯವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವುದನ್ನು ಹೊರತುಪಡಿಸಿ “ಚುನಾವಣೆಗಳ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಮೋರ್ಬಿ ಪೊಲೀಸರು ದೂರಿದ್ದರು.

ಡಿಸೆಂಬರ್ 9 ರಂದು ಗೋಖಲೆ ಎರಡನೇ ಪ್ರಕರಣದಲ್ಲೂ ಜಾಮೀನು ಪಡೆಯುವಲ್ಲಿ ಯಶಸ್ವಿಯಾದರು. ಗುರುವಾರ ಅವರನ್ನು ಮೂರನೇ ಬಾರಿಗೆ ಬಂಧಿಸಲ್ಪಡುವ ಕೆಲವು ಗಂಟೆಗಳ ಮೊದಲು, ಗೋಖಲೆಯವರು ಗುಜರಾತ್ ಪೊಲೀಸರ ಕುರಿತು ಟ್ವೀಟ್ ಮಾಡಿದ್ದರು. “ಮೊದಲ ಪ್ರಕರಣದಲ್ಲಿ ನನ್ನನ್ನು ಗುಜರಾತ್ ಪೊಲೀಸರು ಬಂಧಿಸಿದ್ದರ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕಾನೂನುಬಾಹಿರ ಬಂಧನದ ಪ್ರಕರಣವನ್ನು ದಾಖಲಿಸಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದರು.

“3 ವಾರಗಳ ಹಿಂದೆ ನನ್ನ ಬಂಧನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗುಜರಾತ್ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಘೋಷಿಸಲು ಸಂತೋಷವಾಗಿದೆ. ಜೈಪುರದಿಂದ ಅಹಮದಾಬಾದ್‌ಗೆ ಟ್ರಾನ್ಸಿಟ್ ರಿಮಾಂಡ್ ಇಲ್ಲದೆ (ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ) ನನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ” ಎಂದು ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...