Homeಮುಖಪುಟಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

ಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

- Advertisement -
- Advertisement -

ಗುಜರಾತ್ ಪೊಲೀಸರು ಗುರುವಾರ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಮೂರನೇ ಬಾರಿಗೆ ಬಂಧಿಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದೇ ತಿಂಗಳಲ್ಲಿ ಸಾಕೇತ್‌ ಮೂರನೇ ಸಲ ಬಂಧನಕ್ಕೆ ಒಳಗಾಗಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗೋಖಲೆ ಅವರನ್ನು ಗುರುವಾರ ತಡರಾತ್ರಿ ದೆಹಲಿಯಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಖಲೆ ಮತ್ತು ಅಪರಾಧ ವಿಭಾಗದ ಅಧಿಕಾರಿಗಳು ಶುಕ್ರವಾರ ಸಂಜೆ ಅಹಮದಾಬಾದ್ ತಲುಪುವ ನಿರೀಕ್ಷೆಯಿದೆ.

“ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮ್ಮ ತಂಡವು ನವದೆಹಲಿ ಜಿಲ್ಲೆಗೆ ಬರುತ್ತಿದೆ ಮತ್ತು ದಾಳಿ ನಡೆಸಲಿದೆ ಎಂದು ಗುಜರಾತ್ ಪೊಲೀಸರು ನಮಗೆ ತಿಳಿಸಿದ್ದಾರೆ” ಎಂದು ಅಪರಿಚಿತ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ನಂತರ ಅವರು ಗೋಖಲೆ ಅವರನ್ನು ಬಂಧಿಸಿದ್ದಾರೆ. ಗೋಖಲೆ ಬಂಧನದ ಬಗ್ಗೆ ನಮಗೆ ತಿಳಿದಿರಲಿಲ್ಲ. ದಾಳಿಯ ಸ್ಥಳ ಮತ್ತು ಬಂದ ತಂಡದ ಬಗ್ಗೆ ಮಾತ್ರ ನಮಗೆ ತಿಳಿಸಲಾಗಿದೆ” ಎಂದಿದ್ದಾರೆ ಅಧಿಕಾರಿ.

ತೃಣಮೂಲ ಕಾಂಗ್ರೆಸ್ ಮೂಲಗಳು ‘ಸ್ಕ್ರಾಲ್‌.ಇನ್‌’ಗೆ ಪ್ರತಿಕ್ರಿಯಿಸಿದ್ದು, “ಗೋಖಲೆ ಅವರನ್ನು ದೆಹಲಿಯ ಬಂಗಾ ಭವನದಲ್ಲಿ ಅರೆಸ್ಟ್ ಮಾಡಲಾಗಿದೆ. ಸೈಬರ್‌ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ” ಎಂದಿವೆ. ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರಿಂದ ಗೋಖಲೆಯವರ ಬಂಧನವಾಗಿದೆ ಎಂದು ಟಿಎಂಸಿ ಆರೋಪಿಸಿದೆ.

“ಮೋರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು. ಆ ವೇಳೆ 30 ಕೋಟಿ ರೂಪಾಯಿ ಖರ್ಚಾಗಿದೆ” ಎಂದು ಪ್ರತಿಪಾದಿಸಿದ ಸುದ್ದಿ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಗೋಖಲೆ ಹಂಚಿಕೊಂಡ ಬಳಿಕ ಪ್ರಕರಣ ದಾಖಲಾಗಿತ್ತು. ಗೋಖಲೆ ಅವರು ನಾಲ್ಕು ದಿನಗಳಲ್ಲಿ ಎರಡು ಬಾರಿ ಬಂಧಿಸಲ್ಪಟ್ಟಿದ್ದರು. ಆದರೆ, ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ ಈ ಮಾಹಿತಿಯು ಸುಳ್ಳು ಎಂದು ಪ್ರತಿಕ್ರಿಯಿಸಿತ್ತು.

ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಗೋಖಲೆಯವರನ್ನು ಮೊದಲು ಡಿಸೆಂಬರ್ 5 ರಂದು ಜೈಪುರದಲ್ಲಿ ಗುಜರಾತ್ ಪೊಲೀಸರು, ರಾಜಸ್ಥಾನ ಪೊಲೀಸರಿಗೆ ತಿಳಿಯದಂತೆ ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಲಾಯಿತು. ಡಿಸೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯಲು ಮೋದಿಯವರ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಡಿಸೆಂಬರ್ 8ರಂದು ಅಹಮದಾಬಾದ್ ನ್ಯಾಯಾಲಯವು ಸಾಕೇತ್‌ ಅವರಿಗೆ ಜಾಮೀನು ನೀಡಿತು, ಆದರೆ ಮೊರ್ಬಿ ಜಿಲ್ಲೆಯಲ್ಲಿ ದಾಖಲಾದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಶೀಘ್ರದಲ್ಲೇ ಮರು ಬಂಧಿಸಲಾಯಿತು. ಗೋಖಲೆಯವರು ಮೋದಿಯವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವುದನ್ನು ಹೊರತುಪಡಿಸಿ “ಚುನಾವಣೆಗಳ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಮೋರ್ಬಿ ಪೊಲೀಸರು ದೂರಿದ್ದರು.

ಡಿಸೆಂಬರ್ 9 ರಂದು ಗೋಖಲೆ ಎರಡನೇ ಪ್ರಕರಣದಲ್ಲೂ ಜಾಮೀನು ಪಡೆಯುವಲ್ಲಿ ಯಶಸ್ವಿಯಾದರು. ಗುರುವಾರ ಅವರನ್ನು ಮೂರನೇ ಬಾರಿಗೆ ಬಂಧಿಸಲ್ಪಡುವ ಕೆಲವು ಗಂಟೆಗಳ ಮೊದಲು, ಗೋಖಲೆಯವರು ಗುಜರಾತ್ ಪೊಲೀಸರ ಕುರಿತು ಟ್ವೀಟ್ ಮಾಡಿದ್ದರು. “ಮೊದಲ ಪ್ರಕರಣದಲ್ಲಿ ನನ್ನನ್ನು ಗುಜರಾತ್ ಪೊಲೀಸರು ಬಂಧಿಸಿದ್ದರ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕಾನೂನುಬಾಹಿರ ಬಂಧನದ ಪ್ರಕರಣವನ್ನು ದಾಖಲಿಸಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದರು.

“3 ವಾರಗಳ ಹಿಂದೆ ನನ್ನ ಬಂಧನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗುಜರಾತ್ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಘೋಷಿಸಲು ಸಂತೋಷವಾಗಿದೆ. ಜೈಪುರದಿಂದ ಅಹಮದಾಬಾದ್‌ಗೆ ಟ್ರಾನ್ಸಿಟ್ ರಿಮಾಂಡ್ ಇಲ್ಲದೆ (ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ) ನನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ” ಎಂದು ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...