Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...