Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...