Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...