Homeಮುಖಪುಟಬ್ರಿಜ್ ಭೂಷಣ್ ಬೆಂಬಲಿಗರಿಂದ ನನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ: ಸಾಕ್ಷಿ ಮಲಿಕ್

ಬ್ರಿಜ್ ಭೂಷಣ್ ಬೆಂಬಲಿಗರಿಂದ ನನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ: ಸಾಕ್ಷಿ ಮಲಿಕ್

- Advertisement -
- Advertisement -

ತನ್ನ ತಾಯಿಗೆ ಬ್ರಿಜ್ ಭೂಷಣ್ ಸಿಂಗ್ ಬೆಂಬಲಿಗರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬ್ರಿಜ್ ಭೂಷಣ್ ಸಿಂಗ್ ಅವರ ಗೂಂಡಾಗಳು ಸಕ್ರಿಯರಾಗಿದ್ದಾರೆ. ನನ್ನ ತಾಯಿಗೆ ಫೋನ್ ಮುಖಾಂತರ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ರಕ್ಷಣೆ ಸರ್ಕಾರದ ಹೊಣೆ” ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಪ್ರಭಾವಿ ಎಂದು ನಮಗೆ ಗೊತ್ತಿತ್ತು. ಆದರೆ, ಅವರು ಯಾರೊಂದಿಗೂ ಚರ್ಚಿಸದೆ ತಮ್ಮ ಊರಿನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಘೋಷಣೆ ಮಾಡುವಷ್ಟು ಶಕ್ತಿಶಾಲಿ ಎಂದು ತಿಳಿದಿರಲಿಲ್ಲ. ಈಗ ನಾವು ಕಿರಿಯ ಕುಸ್ತಿಪಟುಗಳ ಭವಿಷ್ಯ ಹಾಳು ಮಾಡಿದ ಆರೋಪ ಎದುರಿಸುತ್ತಿದ್ದೇವೆ. ನಾನು ಕುಸ್ತಿಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ನನ್ನಿಂದ ಸಾಧ್ಯವಾಗದಿದ್ದನ್ನು ನನ್ನ ಜೂನಿಯರ್ ಹುಡುಗಿಯರು ಮಾಡಬೇಕೆಂದು ನಾನು ಬಯಸುತ್ತೇನೆ. ಅವರು ದೇಶಕ್ಕಾಗಿ ಬೆಳ್ಳಿ, ಚಿನ್ನ ಗೆಲ್ಲಬೇಕೆಂದು ಆಶಿಸುತ್ತೇನೆ. ಯಾವುದೇ ಜೂನಿಯರ್ ನಮಗಾಗಿ ನೋವು ಅನುಭವಿಸುವುದು ಬೇಡ ಎಂದಿದ್ದಾರೆ.

ಕುಸ್ತಿ ಫೆಡರೇಶನ್‌ನ ಹೊಸ ಆಡಳಿತ ಸಮಿತಿ ಅಥವಾ ತಾತ್ಕಾಲಿಕ ನಿರ್ವಹಣಾ ಸಮಿತಿ ಜೊತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಜೊತೆ ಮಾತ್ರ ನಮ್ಮ ವಿರೋಧ ಇತ್ತು ಎಂದು ಸಾಕ್ಷಿ ತಿಳಿಸಿದ್ದಾರೆ.

ಕಳೆದ ವರ್ಷದಿಂದ ನಾನು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದೇನೆ. ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎಂಬ ಕಲ್ಪನೆ ನನಗಿರಲಿಲ್ಲ. ಅವರು ಆಯ್ಕೆಗೊಂಡಾಗ ಬೇಸರಗೊಂಡು ಕುಸ್ತಿಗೆ ವಿದಾಯ ಹೇಳಿದ್ದೇನೆ. ಮುಂದೆ ಏನು ಮಾಡಬೇಕು ಎಂದು ನನಗೆ ಗೊತ್ತಿಲ್ಲ ಎಂದು ಸಾಕ್ಷಿ ಮಲಿಕ್ ಬೇಸರ ಹೊರ ಹಾಕಿದ್ದಾರೆ.

ಬಿಜೆಪಿ, ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಬೇಸರಗೊಂಡು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಡಿಸೆಂಬರ್ 21ರಂದು ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್ ತಮ್ಮ ಬೂಟು ಕಳಚಿಟ್ಟು ಕುಸ್ತಿಗೆ ವಿದಾಯ ಹೇಳಿದ್ದರು.

ಸಾಕ್ಷಿ ಮಲಿಕ್‌ ಬೆಂಬಲಿಸಿದ್ದ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ಪ್ರಧಾನಿಗೆ ತಲುಪಿಸುವಂತೆ ಹೇಳಿ ಹೊರಟು ಹೋಗಿದ್ದರು. ಇದರ ಬೆನ್ನಲ್ಲೇ ಕುಸ್ತಿಪಟು ವಿರೇಂದರ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿ ಮರಳಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿದ್ದರು. ಬಳಿಕ ಕುಸ್ತಿಪಟು ವಿನೇಶ್ ಫೋಗಟ್ ಕೂಡ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ದೆಹಲಿಯ ಕರ್ತವ್ಯ ಪಥದ ಪಾದಾಚಾರಿ ಮಾರ್ಗದಲ್ಲಿಟ್ಟು ತೆರಳಿದ್ದರು.

ಜೂನಿಯರ್ ಕುಸ್ತಿಪಟುಗಳಿಂದ ಪ್ರತಿಭಟನೆ

ಕುಸ್ತಿ ಫೆಡರೇಶ್‌ನ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ವಿರುದ್ದ ಹೋರಾಟ ನಡೆಸಿದ್ದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ವಿರುದ್ದವೇ ಇಂದು ಜೂನಿಯರ್ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ ಜೂನಿಯರ್ ಕುಸ್ತಿಪಟುಗಳು ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಒಂದು ವರ್ಷದಿಂದ ನಮ್ಮ ಕುಸ್ತಿ ತರಬೇತಿಯನ್ನು ಹಾಳುಗೆಡವಿದ್ದಾರೆ. ಅವರಿಂದಾಗಿ ನಾವು ಅತಂತ್ರರಾಗಿದ್ದೇವೆ. ಈ ಮೂವರಿಂದ ಕುಸ್ತಿ ಫೆಡರೇಶನ್‌ ರಕ್ಷಿಸಿ ಎಂದು ಬ್ಯಾನರ್ ಹಿಡಿದು ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ : ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...