Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

- Advertisement -
- Advertisement -

ಕೊರೊನಾ, ಲಾಕ್‌ಡೌನ್, ಬೆಲೆ ಏರಿಕೆ, ಉದ್ಯೋಗ ನಷ್ಟ, ಖಾಲಿ ಜೇಬು, ಹಸಿದ ಹೊಟ್ಟೆ- ಇಂದಿನ ದುಬಾರಿ ದುನಿಯಾದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಸಮಸ್ಯೆಗಳಿವು. ಮಾಧ್ಯಮಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸುದ್ದಿ ಕಾಣಿಸದ ದಿನವಿಲ್ಲ. ಇದೇ ಸಂದರ್ಭದಲ್ಲಿ ಹೇಗೋ ಆದಷ್ಟು ಕೊಂಡು ತಿನ್ನುವ ಎಂದುಕೊಳ್ಳಲು ಉದ್ಯೋಗವೂ ಇಲ್ಲ. ಕೆಲಸ ಇರುವವರ ಸಂಬಳಕ್ಕೂ ಉದ್ಯೋಗದಾತರು ಕತ್ತರಿ ಹಾಕುತ್ತಿದ್ದಾರೆ. ಕಳೆದ ವರ್ಷ ದೇಶಾದ್ಯಂತ ಲಾಕ್‌ಡೌನ್ ಹೇರಿದ ಬಳಿಕ ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ, ತಿಂಗಳಿಂದ ತಿಂಗಳಿಗೆ ಹೆಚ್ಚುತ್ತಲೇ ಇದೆ. ಲಾಕ್‌ಡೌನ್ ಮುಗಿದರೂ ಉದ್ಯೋಗ ಕ್ಷೇತ್ರದಲ್ಲಿ ಚೇತರಿಕೆ ಕಂಡು ಬಂದಿಲ್ಲ. ಇಂದಿಗೂ ದೇಶದ ಯುವಜನರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ಅಂಕಿಅಂಶಗಳ ಪ್ರಕಾರ, 2021ರ ಆಗಸ್ಟ್‌ನಲ್ಲಿ ನಿರುದ್ಯೋಗ ದರವು 8.3%ಗೆ ಏರಿಕೆಯಾಗಿದೆ. ಜುಲೈನಲ್ಲಿ 37.4% ಇದ್ದ ಉದ್ಯೋಗ ದರವು ಆಗಸ್ಟ್‌ನಲ್ಲಿ 37.2% ಕುಸಿದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ, ಜುಲೈನಲ್ಲಿ 399.7 ಮಿಲಿಯನ್ (39.9 ಕೋಟಿ) ಇದ್ದ ಉದ್ಯೋಗಗಳು ಆಗಸ್ಟ್‌ನಲ್ಲಿ 397.8 ಮಿಲಿಯನ್‌ಗೆ (39.7 ಕೋಟಿ) ಕುಗ್ಗಿದೆ. ಅಂದರೆ, ಒಂದೇ ತಿಂಗಳಲ್ಲಿ 1.9 ಮಿಲಿಯನ್ (19 ಲಕ್ಷ) ಉದ್ಯೋಗಗಳು ನಷ್ಟವಾಗಿವೆ.

ಇದನ್ನು ಕ್ಷೇತ್ರವಾರು ನೋಡುವುದಾದರೆ, ಕೃಷಿ ಕ್ಷೇತ್ರದಲ್ಲಿ ಆಗಸ್ಟ್ ಅಂತ್ಯದ ವೇಳೆಗೆ 8.7 ಮಿಲಿಯನ್ ಉದ್ಯೋಗಗಳು ಕಡಿತಗೊಂಡಿವೆ. ಅಂದರೆ, ಜುಲೈ ತಿಂಗಳಲ್ಲಿ ಖಾರಿಫ್ ಬೆಳೆ ಬಿತ್ತನೆಯ ಸಮಯದಲ್ಲಿ ಸರಾಸರಿ 124 ಮಿಲಿಯನ್ ಇದ್ದ ಕೃಷಿ ಕ್ಷೇತ್ರದ ಉದ್ಯೋಗಗಳು ಆಗಸ್ಟ್‌ನಲ್ಲಿ 116 ಮಿಲಿಯನ್‌ಗೆ ಕುಸಿದಿವೆ.

ಕೈಗಾರಿಕಾ ವಲಯದಲ್ಲಿ ಜುಲೈನಲ್ಲಿ 2.5 ಮಿಲಿಯನ್ ಉದ್ಯೋಗ ನಷ್ಟವಾದರೆ, ಆಗಸ್ಟ್‌ನಲ್ಲಿ 0.94 ಮಿಲಿಯನ್ ಉದ್ಯೋಗಗಳು ಕಡಿತವಾಗಿವೆ. ಇನ್ನು, ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳಲ್ಲಿ ಸುಮಾರು 10 ಮಿಲಿಯನ್ ಕಾರ್ಮಿಕರು ಶಾಶ್ವತವಾಗಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನ (ಮಾರ್ಚ್ 2020) ಮೊದಲು, ಉತ್ಪಾದನಾ ವಲಯವು ಸುಮಾರು 40 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಇದು ಏಪ್ರಿಲ್ 2020ರಲ್ಲಿ 21 ಮಿಲಿಯನ್‌ಗೆ ಕುಸಿಯಿತು. ಜುಲೈ 2020ರ ವೇಳೆಗೆ 30 ಮಿಲಿಯನ್ ಸಮೀಪಕ್ಕೆ ಉದ್ಯೋಗ ಕ್ಷೇತ್ರ ಸುಧಾರಿಸಿತು. ನಂತರ, ಫೆಬ್ರವರಿ 2021ರವರೆಗೆ 30 ಮಿಲಿಯನ್ ಗಡಿಯಲ್ಲಿತ್ತು. ಆದರೆ, ಕೊರೊನಾ 2ನೇ ಅಲೆಯ ವೇಳೆ ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಪ್ರಮಾಣವು 26 ಮಿಲಿಯನ್‌ಗೆ ಕುಸಿಯಿತು. ಜುಲೈ ವೇಳೆಗೆ ಇದು ಸುಮಾರು 29 ಮಿಲಿಯನ್‌ಗೆ ಏರಿಕೆಯಾಗಿ ಚೇತರಿಸಿಕೊಂಡಿತು. ಆದರೆ, ಆಗಸ್ಟ್‌ನಲ್ಲಿ ಮತ್ತೆ 28 ಮಿಲಿಯನ್‌ಗೆ ಕುಸಿದುಹೋಗಿದೆ. 2ನೇ ಅಲೆಯ ಲಾಕ್‌ಡೌನ್ ನಂತರವೂ ಆಗಸ್ಟ್‌ನಲ್ಲಿ ಸರಾಸರಿ ಒಂದು ಮಿಲಿಯನ್ ಉದ್ಯೋಗ ನಷ್ಟವು ನಿರಾಶಾದಾಯಕ ಪರಿಸ್ಥಿತಿಯನ್ನು ಚಿತ್ರಿಸುತ್ತಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ, ಕೊರೊನಾ ಪೂರ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿದ್ದ 40 ಮಿಲಿಯನ್ ಉದ್ಯೊಗ ಎಂಬುದು ಈಗ ತುಂಬಾ ದೂರದ ಮಾತಿನಂತೆ ಕಾಣುತ್ತದೆ.

ಇದೇ ವೇಳೆ ಉತ್ಪಾದನಾ ಕ್ಷೇತ್ರದಿಂದ ಹೊರನೂಕಲ್ಪಟ್ಟವರನ್ನು ಸೇವಾ ಕ್ಷೇತ್ರ ಸೆಳೆದಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನವು ಆರ್ಥಿಕ ಭದ್ರತೆಯನ್ನು ಒದಗಿಸದಿದ್ದರೂ ತಾತ್ಕಾಲಿಕ ನಿಟ್ಟುಸಿರು ಬಿಡಲು ನೆರವಾಗಿವೆ. ಆಗಸ್ಟ್‌ನಲ್ಲಿ ಸೇವಾ ವಲಯವು 8.5 ಮಿಲಿಯನ್ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸಿದೆ. ವೈಯಕ್ತಿಕ ವೃತ್ತಿಪರೇತರ ಸೇವೆಗಳು ಮತ್ತು ಚಿಲ್ಲರೆ ವ್ಯಾಪಾರ, ಮನೆಕೆಲಸದವರು, ಮನೆ ಅಡುಗೆಯವರು, ಬ್ಯೂಟಿಷಿಯನ್‌ಗಳು, ಮಸಾಜ್ ಮಾಡುವವರು, ಜಿಮ್ನಾಷಿಯಂ ತರಬೇತುದಾರರು, ಕ್ಷೌರಿಕರು, ಕೊಳಾಯಿಗಾರರು, ತೋಟಗಾರರು, ಭದ್ರತಾ ಸಿಬ್ಬಂದಿ, ಕ್ಯಾಬ್ ಚಾಲಕರು ಮುಂತಾದವರು ಈ ವಲಯದಲ್ಲಿ ಸೇರಿದ್ದಾರೆ. ಆಗಸ್ಟ್‌ನಲ್ಲಿ ಅಂತಹ ಉದ್ಯೋಗಗಳು 4.7 ಮಿಲಿಯನ್ ಹೆಚ್ಚಳವಾಗಿದೆ. ಈ ವರ್ಗದಲ್ಲಿನ ಒಟ್ಟು ಉದ್ಯೋಗ ಸುಮಾರು 30 ಮಿಲಿಯನ್‌ನಷ್ಟಿದೆ. ಜೂನ್ ಮತ್ತು ಜುಲೈನಲ್ಲಿ 23.9 ಮಿಲಿಯನ್‌ಗೆ ಕುಸಿದಿದ್ದ ಈ ರೀತಿಯ ಉದ್ಯೋಗಗಳು 28.6 ಮಿಲಿಯನ್‌ಗೆ ಏರಿದ ಕಾರಣ ಆಗಸ್ಟ್ ಭಾಗಶಃ ಚೇತರಿಕೆ ಕಂಡಿದೆ.

ಇನ್ನು, ಆಗಸ್ಟ್‌ನಲ್ಲಿ ಉದ್ಯೋಗದಲ್ಲಿ ಹೆಚ್ಚಳವನ್ನು ಕಂಡ ಸೇವಾ ವಲಯ ಎಂದರೆ ಚಿಲ್ಲರೆ ವ್ಯಾಪಾರವಾಗಿದೆ. ಈ ಉದ್ಯಮದಲ್ಲಿ ಉದ್ಯೋಗವು ದಾಖಲೆಯ 64.4 ಮಿಲಿಯನ್ ತಲುಪಿದೆ. ಜುಲೈನಲ್ಲಿ ಇದು 59.9 ಮಿಲಿಯನ್ ಆಗಿತ್ತು. ಆದರೆ, ಈ ಕ್ಷೇತ್ರದಲ್ಲಿ ನಿಯತವಾಗಿ ವೇತನ ನೀಡುವ ಉದ್ಯೋಗಗಳು ಕೇವಲ 0.94 ಮಿಲಿಯನ್‌ಗಳಷ್ಟು ಮಾತ್ರ ಹೆಚ್ಚಾಗಿವೆ.

2020ರ ಸೆಪ್ಟೆಂಬರ್‌ನಲ್ಲಿ 6.68% ಇದ್ದ ನಿರುದ್ಯೋಗ ದರವು, 2021ರ ಆಗಸ್ಟ್‌ನಲ್ಲಿ 8.23%ಗೆ ಏರಿಕೆಯಾಗಿದೆ. ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು ಶೇ.42ರಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನ ಈ ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಈ ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

“ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಲಾಕ್‌ಡೌನ್‌ನಿಂದ ಕೆಲಸ ಹೋಯ್ತು. ಕೃಷಿ ಮಾಡೋಣ ಎಂದರೆ ಸರಿಯಾದ ಮಳೆಯಿಲ್ಲ. ಹಲವೆಡೆ ಪ್ರವಾಹ ಎಬ್ಬಿಸಿರುವ ಮಳೆ ನಮ್ಮ ಮೇಲೆ ಮುನಿಸಿಕೊಂಡಿದೆ. ಹೀಗಾಗಿ ಹೊಟ್ಟೆಪಾಡಿಗಾಗಿ ಪರಿತಪಿಸುವ ಸ್ಥಿತಿ ಕುಟುಂಬದಲ್ಲಿದೆ. ಹೀಗಾಗಿ ಊರಲ್ಲಿದ್ದ ಬೈಕ್ ತಂದು ಬೆಂಗಳೂರಿನಲ್ಲಿ ರ್‍ಯಾಪಿಡೋ ಓಡಿಸುತ್ತಿದ್ದೇನೆ. ಪೆಟ್ರೋಲ್ ಬೆಲೆ ಏರಿಕೆ ಅದಕ್ಕೂ ಹೊಡೆತ ಕೊಟ್ಟಿದೆ. ಬೇರೆ ದಾರಿಯಿಲ್ಲದ ಕಾರಣ ಇದನ್ನೇ ನಂಬಿ ನಾನು-ನನ್ನ ಕುಟುಂಬ ಬದುಕುತ್ತಿದ್ದೇವೆ.” – ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗಿಯಾಗಿದ್ದು ಉದ್ಯೋಗ ಕಳೆದುಕೊಂಡ ನವೀನ್ (ರ್‍ಯಾಪಿಡೋ ಚಾಲಕ).

ಇದನ್ನೂ ಓದಿ:ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...