Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

- Advertisement -
- Advertisement -

ಕೊರೊನಾ, ಲಾಕ್‌ಡೌನ್, ಬೆಲೆ ಏರಿಕೆ, ಉದ್ಯೋಗ ನಷ್ಟ, ಖಾಲಿ ಜೇಬು, ಹಸಿದ ಹೊಟ್ಟೆ- ಇಂದಿನ ದುಬಾರಿ ದುನಿಯಾದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಸಮಸ್ಯೆಗಳಿವು. ಮಾಧ್ಯಮಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸುದ್ದಿ ಕಾಣಿಸದ ದಿನವಿಲ್ಲ. ಇದೇ ಸಂದರ್ಭದಲ್ಲಿ ಹೇಗೋ ಆದಷ್ಟು ಕೊಂಡು ತಿನ್ನುವ ಎಂದುಕೊಳ್ಳಲು ಉದ್ಯೋಗವೂ ಇಲ್ಲ. ಕೆಲಸ ಇರುವವರ ಸಂಬಳಕ್ಕೂ ಉದ್ಯೋಗದಾತರು ಕತ್ತರಿ ಹಾಕುತ್ತಿದ್ದಾರೆ. ಕಳೆದ ವರ್ಷ ದೇಶಾದ್ಯಂತ ಲಾಕ್‌ಡೌನ್ ಹೇರಿದ ಬಳಿಕ ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ, ತಿಂಗಳಿಂದ ತಿಂಗಳಿಗೆ ಹೆಚ್ಚುತ್ತಲೇ ಇದೆ. ಲಾಕ್‌ಡೌನ್ ಮುಗಿದರೂ ಉದ್ಯೋಗ ಕ್ಷೇತ್ರದಲ್ಲಿ ಚೇತರಿಕೆ ಕಂಡು ಬಂದಿಲ್ಲ. ಇಂದಿಗೂ ದೇಶದ ಯುವಜನರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ಅಂಕಿಅಂಶಗಳ ಪ್ರಕಾರ, 2021ರ ಆಗಸ್ಟ್‌ನಲ್ಲಿ ನಿರುದ್ಯೋಗ ದರವು 8.3%ಗೆ ಏರಿಕೆಯಾಗಿದೆ. ಜುಲೈನಲ್ಲಿ 37.4% ಇದ್ದ ಉದ್ಯೋಗ ದರವು ಆಗಸ್ಟ್‌ನಲ್ಲಿ 37.2% ಕುಸಿದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ, ಜುಲೈನಲ್ಲಿ 399.7 ಮಿಲಿಯನ್ (39.9 ಕೋಟಿ) ಇದ್ದ ಉದ್ಯೋಗಗಳು ಆಗಸ್ಟ್‌ನಲ್ಲಿ 397.8 ಮಿಲಿಯನ್‌ಗೆ (39.7 ಕೋಟಿ) ಕುಗ್ಗಿದೆ. ಅಂದರೆ, ಒಂದೇ ತಿಂಗಳಲ್ಲಿ 1.9 ಮಿಲಿಯನ್ (19 ಲಕ್ಷ) ಉದ್ಯೋಗಗಳು ನಷ್ಟವಾಗಿವೆ.

ಇದನ್ನು ಕ್ಷೇತ್ರವಾರು ನೋಡುವುದಾದರೆ, ಕೃಷಿ ಕ್ಷೇತ್ರದಲ್ಲಿ ಆಗಸ್ಟ್ ಅಂತ್ಯದ ವೇಳೆಗೆ 8.7 ಮಿಲಿಯನ್ ಉದ್ಯೋಗಗಳು ಕಡಿತಗೊಂಡಿವೆ. ಅಂದರೆ, ಜುಲೈ ತಿಂಗಳಲ್ಲಿ ಖಾರಿಫ್ ಬೆಳೆ ಬಿತ್ತನೆಯ ಸಮಯದಲ್ಲಿ ಸರಾಸರಿ 124 ಮಿಲಿಯನ್ ಇದ್ದ ಕೃಷಿ ಕ್ಷೇತ್ರದ ಉದ್ಯೋಗಗಳು ಆಗಸ್ಟ್‌ನಲ್ಲಿ 116 ಮಿಲಿಯನ್‌ಗೆ ಕುಸಿದಿವೆ.

ಕೈಗಾರಿಕಾ ವಲಯದಲ್ಲಿ ಜುಲೈನಲ್ಲಿ 2.5 ಮಿಲಿಯನ್ ಉದ್ಯೋಗ ನಷ್ಟವಾದರೆ, ಆಗಸ್ಟ್‌ನಲ್ಲಿ 0.94 ಮಿಲಿಯನ್ ಉದ್ಯೋಗಗಳು ಕಡಿತವಾಗಿವೆ. ಇನ್ನು, ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳಲ್ಲಿ ಸುಮಾರು 10 ಮಿಲಿಯನ್ ಕಾರ್ಮಿಕರು ಶಾಶ್ವತವಾಗಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನ (ಮಾರ್ಚ್ 2020) ಮೊದಲು, ಉತ್ಪಾದನಾ ವಲಯವು ಸುಮಾರು 40 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಇದು ಏಪ್ರಿಲ್ 2020ರಲ್ಲಿ 21 ಮಿಲಿಯನ್‌ಗೆ ಕುಸಿಯಿತು. ಜುಲೈ 2020ರ ವೇಳೆಗೆ 30 ಮಿಲಿಯನ್ ಸಮೀಪಕ್ಕೆ ಉದ್ಯೋಗ ಕ್ಷೇತ್ರ ಸುಧಾರಿಸಿತು. ನಂತರ, ಫೆಬ್ರವರಿ 2021ರವರೆಗೆ 30 ಮಿಲಿಯನ್ ಗಡಿಯಲ್ಲಿತ್ತು. ಆದರೆ, ಕೊರೊನಾ 2ನೇ ಅಲೆಯ ವೇಳೆ ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಪ್ರಮಾಣವು 26 ಮಿಲಿಯನ್‌ಗೆ ಕುಸಿಯಿತು. ಜುಲೈ ವೇಳೆಗೆ ಇದು ಸುಮಾರು 29 ಮಿಲಿಯನ್‌ಗೆ ಏರಿಕೆಯಾಗಿ ಚೇತರಿಸಿಕೊಂಡಿತು. ಆದರೆ, ಆಗಸ್ಟ್‌ನಲ್ಲಿ ಮತ್ತೆ 28 ಮಿಲಿಯನ್‌ಗೆ ಕುಸಿದುಹೋಗಿದೆ. 2ನೇ ಅಲೆಯ ಲಾಕ್‌ಡೌನ್ ನಂತರವೂ ಆಗಸ್ಟ್‌ನಲ್ಲಿ ಸರಾಸರಿ ಒಂದು ಮಿಲಿಯನ್ ಉದ್ಯೋಗ ನಷ್ಟವು ನಿರಾಶಾದಾಯಕ ಪರಿಸ್ಥಿತಿಯನ್ನು ಚಿತ್ರಿಸುತ್ತಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ, ಕೊರೊನಾ ಪೂರ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿದ್ದ 40 ಮಿಲಿಯನ್ ಉದ್ಯೊಗ ಎಂಬುದು ಈಗ ತುಂಬಾ ದೂರದ ಮಾತಿನಂತೆ ಕಾಣುತ್ತದೆ.

ಇದೇ ವೇಳೆ ಉತ್ಪಾದನಾ ಕ್ಷೇತ್ರದಿಂದ ಹೊರನೂಕಲ್ಪಟ್ಟವರನ್ನು ಸೇವಾ ಕ್ಷೇತ್ರ ಸೆಳೆದಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನವು ಆರ್ಥಿಕ ಭದ್ರತೆಯನ್ನು ಒದಗಿಸದಿದ್ದರೂ ತಾತ್ಕಾಲಿಕ ನಿಟ್ಟುಸಿರು ಬಿಡಲು ನೆರವಾಗಿವೆ. ಆಗಸ್ಟ್‌ನಲ್ಲಿ ಸೇವಾ ವಲಯವು 8.5 ಮಿಲಿಯನ್ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸಿದೆ. ವೈಯಕ್ತಿಕ ವೃತ್ತಿಪರೇತರ ಸೇವೆಗಳು ಮತ್ತು ಚಿಲ್ಲರೆ ವ್ಯಾಪಾರ, ಮನೆಕೆಲಸದವರು, ಮನೆ ಅಡುಗೆಯವರು, ಬ್ಯೂಟಿಷಿಯನ್‌ಗಳು, ಮಸಾಜ್ ಮಾಡುವವರು, ಜಿಮ್ನಾಷಿಯಂ ತರಬೇತುದಾರರು, ಕ್ಷೌರಿಕರು, ಕೊಳಾಯಿಗಾರರು, ತೋಟಗಾರರು, ಭದ್ರತಾ ಸಿಬ್ಬಂದಿ, ಕ್ಯಾಬ್ ಚಾಲಕರು ಮುಂತಾದವರು ಈ ವಲಯದಲ್ಲಿ ಸೇರಿದ್ದಾರೆ. ಆಗಸ್ಟ್‌ನಲ್ಲಿ ಅಂತಹ ಉದ್ಯೋಗಗಳು 4.7 ಮಿಲಿಯನ್ ಹೆಚ್ಚಳವಾಗಿದೆ. ಈ ವರ್ಗದಲ್ಲಿನ ಒಟ್ಟು ಉದ್ಯೋಗ ಸುಮಾರು 30 ಮಿಲಿಯನ್‌ನಷ್ಟಿದೆ. ಜೂನ್ ಮತ್ತು ಜುಲೈನಲ್ಲಿ 23.9 ಮಿಲಿಯನ್‌ಗೆ ಕುಸಿದಿದ್ದ ಈ ರೀತಿಯ ಉದ್ಯೋಗಗಳು 28.6 ಮಿಲಿಯನ್‌ಗೆ ಏರಿದ ಕಾರಣ ಆಗಸ್ಟ್ ಭಾಗಶಃ ಚೇತರಿಕೆ ಕಂಡಿದೆ.

ಇನ್ನು, ಆಗಸ್ಟ್‌ನಲ್ಲಿ ಉದ್ಯೋಗದಲ್ಲಿ ಹೆಚ್ಚಳವನ್ನು ಕಂಡ ಸೇವಾ ವಲಯ ಎಂದರೆ ಚಿಲ್ಲರೆ ವ್ಯಾಪಾರವಾಗಿದೆ. ಈ ಉದ್ಯಮದಲ್ಲಿ ಉದ್ಯೋಗವು ದಾಖಲೆಯ 64.4 ಮಿಲಿಯನ್ ತಲುಪಿದೆ. ಜುಲೈನಲ್ಲಿ ಇದು 59.9 ಮಿಲಿಯನ್ ಆಗಿತ್ತು. ಆದರೆ, ಈ ಕ್ಷೇತ್ರದಲ್ಲಿ ನಿಯತವಾಗಿ ವೇತನ ನೀಡುವ ಉದ್ಯೋಗಗಳು ಕೇವಲ 0.94 ಮಿಲಿಯನ್‌ಗಳಷ್ಟು ಮಾತ್ರ ಹೆಚ್ಚಾಗಿವೆ.

2020ರ ಸೆಪ್ಟೆಂಬರ್‌ನಲ್ಲಿ 6.68% ಇದ್ದ ನಿರುದ್ಯೋಗ ದರವು, 2021ರ ಆಗಸ್ಟ್‌ನಲ್ಲಿ 8.23%ಗೆ ಏರಿಕೆಯಾಗಿದೆ. ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು ಶೇ.42ರಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನ ಈ ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಈ ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

“ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಲಾಕ್‌ಡೌನ್‌ನಿಂದ ಕೆಲಸ ಹೋಯ್ತು. ಕೃಷಿ ಮಾಡೋಣ ಎಂದರೆ ಸರಿಯಾದ ಮಳೆಯಿಲ್ಲ. ಹಲವೆಡೆ ಪ್ರವಾಹ ಎಬ್ಬಿಸಿರುವ ಮಳೆ ನಮ್ಮ ಮೇಲೆ ಮುನಿಸಿಕೊಂಡಿದೆ. ಹೀಗಾಗಿ ಹೊಟ್ಟೆಪಾಡಿಗಾಗಿ ಪರಿತಪಿಸುವ ಸ್ಥಿತಿ ಕುಟುಂಬದಲ್ಲಿದೆ. ಹೀಗಾಗಿ ಊರಲ್ಲಿದ್ದ ಬೈಕ್ ತಂದು ಬೆಂಗಳೂರಿನಲ್ಲಿ ರ್‍ಯಾಪಿಡೋ ಓಡಿಸುತ್ತಿದ್ದೇನೆ. ಪೆಟ್ರೋಲ್ ಬೆಲೆ ಏರಿಕೆ ಅದಕ್ಕೂ ಹೊಡೆತ ಕೊಟ್ಟಿದೆ. ಬೇರೆ ದಾರಿಯಿಲ್ಲದ ಕಾರಣ ಇದನ್ನೇ ನಂಬಿ ನಾನು-ನನ್ನ ಕುಟುಂಬ ಬದುಕುತ್ತಿದ್ದೇವೆ.” – ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗಿಯಾಗಿದ್ದು ಉದ್ಯೋಗ ಕಳೆದುಕೊಂಡ ನವೀನ್ (ರ್‍ಯಾಪಿಡೋ ಚಾಲಕ).

ಇದನ್ನೂ ಓದಿ:ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...