Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

- Advertisement -
- Advertisement -

ಕೊರೊನಾ, ಲಾಕ್‌ಡೌನ್, ಬೆಲೆ ಏರಿಕೆ, ಉದ್ಯೋಗ ನಷ್ಟ, ಖಾಲಿ ಜೇಬು, ಹಸಿದ ಹೊಟ್ಟೆ- ಇಂದಿನ ದುಬಾರಿ ದುನಿಯಾದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಸಮಸ್ಯೆಗಳಿವು. ಮಾಧ್ಯಮಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸುದ್ದಿ ಕಾಣಿಸದ ದಿನವಿಲ್ಲ. ಇದೇ ಸಂದರ್ಭದಲ್ಲಿ ಹೇಗೋ ಆದಷ್ಟು ಕೊಂಡು ತಿನ್ನುವ ಎಂದುಕೊಳ್ಳಲು ಉದ್ಯೋಗವೂ ಇಲ್ಲ. ಕೆಲಸ ಇರುವವರ ಸಂಬಳಕ್ಕೂ ಉದ್ಯೋಗದಾತರು ಕತ್ತರಿ ಹಾಕುತ್ತಿದ್ದಾರೆ. ಕಳೆದ ವರ್ಷ ದೇಶಾದ್ಯಂತ ಲಾಕ್‌ಡೌನ್ ಹೇರಿದ ಬಳಿಕ ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ, ತಿಂಗಳಿಂದ ತಿಂಗಳಿಗೆ ಹೆಚ್ಚುತ್ತಲೇ ಇದೆ. ಲಾಕ್‌ಡೌನ್ ಮುಗಿದರೂ ಉದ್ಯೋಗ ಕ್ಷೇತ್ರದಲ್ಲಿ ಚೇತರಿಕೆ ಕಂಡು ಬಂದಿಲ್ಲ. ಇಂದಿಗೂ ದೇಶದ ಯುವಜನರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ಅಂಕಿಅಂಶಗಳ ಪ್ರಕಾರ, 2021ರ ಆಗಸ್ಟ್‌ನಲ್ಲಿ ನಿರುದ್ಯೋಗ ದರವು 8.3%ಗೆ ಏರಿಕೆಯಾಗಿದೆ. ಜುಲೈನಲ್ಲಿ 37.4% ಇದ್ದ ಉದ್ಯೋಗ ದರವು ಆಗಸ್ಟ್‌ನಲ್ಲಿ 37.2% ಕುಸಿದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ, ಜುಲೈನಲ್ಲಿ 399.7 ಮಿಲಿಯನ್ (39.9 ಕೋಟಿ) ಇದ್ದ ಉದ್ಯೋಗಗಳು ಆಗಸ್ಟ್‌ನಲ್ಲಿ 397.8 ಮಿಲಿಯನ್‌ಗೆ (39.7 ಕೋಟಿ) ಕುಗ್ಗಿದೆ. ಅಂದರೆ, ಒಂದೇ ತಿಂಗಳಲ್ಲಿ 1.9 ಮಿಲಿಯನ್ (19 ಲಕ್ಷ) ಉದ್ಯೋಗಗಳು ನಷ್ಟವಾಗಿವೆ.

ಇದನ್ನು ಕ್ಷೇತ್ರವಾರು ನೋಡುವುದಾದರೆ, ಕೃಷಿ ಕ್ಷೇತ್ರದಲ್ಲಿ ಆಗಸ್ಟ್ ಅಂತ್ಯದ ವೇಳೆಗೆ 8.7 ಮಿಲಿಯನ್ ಉದ್ಯೋಗಗಳು ಕಡಿತಗೊಂಡಿವೆ. ಅಂದರೆ, ಜುಲೈ ತಿಂಗಳಲ್ಲಿ ಖಾರಿಫ್ ಬೆಳೆ ಬಿತ್ತನೆಯ ಸಮಯದಲ್ಲಿ ಸರಾಸರಿ 124 ಮಿಲಿಯನ್ ಇದ್ದ ಕೃಷಿ ಕ್ಷೇತ್ರದ ಉದ್ಯೋಗಗಳು ಆಗಸ್ಟ್‌ನಲ್ಲಿ 116 ಮಿಲಿಯನ್‌ಗೆ ಕುಸಿದಿವೆ.

ಕೈಗಾರಿಕಾ ವಲಯದಲ್ಲಿ ಜುಲೈನಲ್ಲಿ 2.5 ಮಿಲಿಯನ್ ಉದ್ಯೋಗ ನಷ್ಟವಾದರೆ, ಆಗಸ್ಟ್‌ನಲ್ಲಿ 0.94 ಮಿಲಿಯನ್ ಉದ್ಯೋಗಗಳು ಕಡಿತವಾಗಿವೆ. ಇನ್ನು, ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳಲ್ಲಿ ಸುಮಾರು 10 ಮಿಲಿಯನ್ ಕಾರ್ಮಿಕರು ಶಾಶ್ವತವಾಗಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನ (ಮಾರ್ಚ್ 2020) ಮೊದಲು, ಉತ್ಪಾದನಾ ವಲಯವು ಸುಮಾರು 40 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಇದು ಏಪ್ರಿಲ್ 2020ರಲ್ಲಿ 21 ಮಿಲಿಯನ್‌ಗೆ ಕುಸಿಯಿತು. ಜುಲೈ 2020ರ ವೇಳೆಗೆ 30 ಮಿಲಿಯನ್ ಸಮೀಪಕ್ಕೆ ಉದ್ಯೋಗ ಕ್ಷೇತ್ರ ಸುಧಾರಿಸಿತು. ನಂತರ, ಫೆಬ್ರವರಿ 2021ರವರೆಗೆ 30 ಮಿಲಿಯನ್ ಗಡಿಯಲ್ಲಿತ್ತು. ಆದರೆ, ಕೊರೊನಾ 2ನೇ ಅಲೆಯ ವೇಳೆ ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಪ್ರಮಾಣವು 26 ಮಿಲಿಯನ್‌ಗೆ ಕುಸಿಯಿತು. ಜುಲೈ ವೇಳೆಗೆ ಇದು ಸುಮಾರು 29 ಮಿಲಿಯನ್‌ಗೆ ಏರಿಕೆಯಾಗಿ ಚೇತರಿಸಿಕೊಂಡಿತು. ಆದರೆ, ಆಗಸ್ಟ್‌ನಲ್ಲಿ ಮತ್ತೆ 28 ಮಿಲಿಯನ್‌ಗೆ ಕುಸಿದುಹೋಗಿದೆ. 2ನೇ ಅಲೆಯ ಲಾಕ್‌ಡೌನ್ ನಂತರವೂ ಆಗಸ್ಟ್‌ನಲ್ಲಿ ಸರಾಸರಿ ಒಂದು ಮಿಲಿಯನ್ ಉದ್ಯೋಗ ನಷ್ಟವು ನಿರಾಶಾದಾಯಕ ಪರಿಸ್ಥಿತಿಯನ್ನು ಚಿತ್ರಿಸುತ್ತಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ, ಕೊರೊನಾ ಪೂರ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿದ್ದ 40 ಮಿಲಿಯನ್ ಉದ್ಯೊಗ ಎಂಬುದು ಈಗ ತುಂಬಾ ದೂರದ ಮಾತಿನಂತೆ ಕಾಣುತ್ತದೆ.

ಇದೇ ವೇಳೆ ಉತ್ಪಾದನಾ ಕ್ಷೇತ್ರದಿಂದ ಹೊರನೂಕಲ್ಪಟ್ಟವರನ್ನು ಸೇವಾ ಕ್ಷೇತ್ರ ಸೆಳೆದಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನವು ಆರ್ಥಿಕ ಭದ್ರತೆಯನ್ನು ಒದಗಿಸದಿದ್ದರೂ ತಾತ್ಕಾಲಿಕ ನಿಟ್ಟುಸಿರು ಬಿಡಲು ನೆರವಾಗಿವೆ. ಆಗಸ್ಟ್‌ನಲ್ಲಿ ಸೇವಾ ವಲಯವು 8.5 ಮಿಲಿಯನ್ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸಿದೆ. ವೈಯಕ್ತಿಕ ವೃತ್ತಿಪರೇತರ ಸೇವೆಗಳು ಮತ್ತು ಚಿಲ್ಲರೆ ವ್ಯಾಪಾರ, ಮನೆಕೆಲಸದವರು, ಮನೆ ಅಡುಗೆಯವರು, ಬ್ಯೂಟಿಷಿಯನ್‌ಗಳು, ಮಸಾಜ್ ಮಾಡುವವರು, ಜಿಮ್ನಾಷಿಯಂ ತರಬೇತುದಾರರು, ಕ್ಷೌರಿಕರು, ಕೊಳಾಯಿಗಾರರು, ತೋಟಗಾರರು, ಭದ್ರತಾ ಸಿಬ್ಬಂದಿ, ಕ್ಯಾಬ್ ಚಾಲಕರು ಮುಂತಾದವರು ಈ ವಲಯದಲ್ಲಿ ಸೇರಿದ್ದಾರೆ. ಆಗಸ್ಟ್‌ನಲ್ಲಿ ಅಂತಹ ಉದ್ಯೋಗಗಳು 4.7 ಮಿಲಿಯನ್ ಹೆಚ್ಚಳವಾಗಿದೆ. ಈ ವರ್ಗದಲ್ಲಿನ ಒಟ್ಟು ಉದ್ಯೋಗ ಸುಮಾರು 30 ಮಿಲಿಯನ್‌ನಷ್ಟಿದೆ. ಜೂನ್ ಮತ್ತು ಜುಲೈನಲ್ಲಿ 23.9 ಮಿಲಿಯನ್‌ಗೆ ಕುಸಿದಿದ್ದ ಈ ರೀತಿಯ ಉದ್ಯೋಗಗಳು 28.6 ಮಿಲಿಯನ್‌ಗೆ ಏರಿದ ಕಾರಣ ಆಗಸ್ಟ್ ಭಾಗಶಃ ಚೇತರಿಕೆ ಕಂಡಿದೆ.

ಇನ್ನು, ಆಗಸ್ಟ್‌ನಲ್ಲಿ ಉದ್ಯೋಗದಲ್ಲಿ ಹೆಚ್ಚಳವನ್ನು ಕಂಡ ಸೇವಾ ವಲಯ ಎಂದರೆ ಚಿಲ್ಲರೆ ವ್ಯಾಪಾರವಾಗಿದೆ. ಈ ಉದ್ಯಮದಲ್ಲಿ ಉದ್ಯೋಗವು ದಾಖಲೆಯ 64.4 ಮಿಲಿಯನ್ ತಲುಪಿದೆ. ಜುಲೈನಲ್ಲಿ ಇದು 59.9 ಮಿಲಿಯನ್ ಆಗಿತ್ತು. ಆದರೆ, ಈ ಕ್ಷೇತ್ರದಲ್ಲಿ ನಿಯತವಾಗಿ ವೇತನ ನೀಡುವ ಉದ್ಯೋಗಗಳು ಕೇವಲ 0.94 ಮಿಲಿಯನ್‌ಗಳಷ್ಟು ಮಾತ್ರ ಹೆಚ್ಚಾಗಿವೆ.

2020ರ ಸೆಪ್ಟೆಂಬರ್‌ನಲ್ಲಿ 6.68% ಇದ್ದ ನಿರುದ್ಯೋಗ ದರವು, 2021ರ ಆಗಸ್ಟ್‌ನಲ್ಲಿ 8.23%ಗೆ ಏರಿಕೆಯಾಗಿದೆ. ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು ಶೇ.42ರಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನ ಈ ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಈ ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

“ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಲಾಕ್‌ಡೌನ್‌ನಿಂದ ಕೆಲಸ ಹೋಯ್ತು. ಕೃಷಿ ಮಾಡೋಣ ಎಂದರೆ ಸರಿಯಾದ ಮಳೆಯಿಲ್ಲ. ಹಲವೆಡೆ ಪ್ರವಾಹ ಎಬ್ಬಿಸಿರುವ ಮಳೆ ನಮ್ಮ ಮೇಲೆ ಮುನಿಸಿಕೊಂಡಿದೆ. ಹೀಗಾಗಿ ಹೊಟ್ಟೆಪಾಡಿಗಾಗಿ ಪರಿತಪಿಸುವ ಸ್ಥಿತಿ ಕುಟುಂಬದಲ್ಲಿದೆ. ಹೀಗಾಗಿ ಊರಲ್ಲಿದ್ದ ಬೈಕ್ ತಂದು ಬೆಂಗಳೂರಿನಲ್ಲಿ ರ್‍ಯಾಪಿಡೋ ಓಡಿಸುತ್ತಿದ್ದೇನೆ. ಪೆಟ್ರೋಲ್ ಬೆಲೆ ಏರಿಕೆ ಅದಕ್ಕೂ ಹೊಡೆತ ಕೊಟ್ಟಿದೆ. ಬೇರೆ ದಾರಿಯಿಲ್ಲದ ಕಾರಣ ಇದನ್ನೇ ನಂಬಿ ನಾನು-ನನ್ನ ಕುಟುಂಬ ಬದುಕುತ್ತಿದ್ದೇವೆ.” – ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗಿಯಾಗಿದ್ದು ಉದ್ಯೋಗ ಕಳೆದುಕೊಂಡ ನವೀನ್ (ರ್‍ಯಾಪಿಡೋ ಚಾಲಕ).

ಇದನ್ನೂ ಓದಿ:ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...