Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಜೊತೆಗೆ ವೇತನ ಕಡಿತ ಮತ್ತು ನಿರುದ್ಯೋಗದ ಶಾಕ್!

- Advertisement -
- Advertisement -

ಕೊರೊನಾ, ಲಾಕ್‌ಡೌನ್, ಬೆಲೆ ಏರಿಕೆ, ಉದ್ಯೋಗ ನಷ್ಟ, ಖಾಲಿ ಜೇಬು, ಹಸಿದ ಹೊಟ್ಟೆ- ಇಂದಿನ ದುಬಾರಿ ದುನಿಯಾದಲ್ಲಿ ಸಾಮಾನ್ಯ ಜನರನ್ನು ಕಾಡುತ್ತಿರುವ ಸಮಸ್ಯೆಗಳಿವು. ಮಾಧ್ಯಮಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸುದ್ದಿ ಕಾಣಿಸದ ದಿನವಿಲ್ಲ. ಇದೇ ಸಂದರ್ಭದಲ್ಲಿ ಹೇಗೋ ಆದಷ್ಟು ಕೊಂಡು ತಿನ್ನುವ ಎಂದುಕೊಳ್ಳಲು ಉದ್ಯೋಗವೂ ಇಲ್ಲ. ಕೆಲಸ ಇರುವವರ ಸಂಬಳಕ್ಕೂ ಉದ್ಯೋಗದಾತರು ಕತ್ತರಿ ಹಾಕುತ್ತಿದ್ದಾರೆ. ಕಳೆದ ವರ್ಷ ದೇಶಾದ್ಯಂತ ಲಾಕ್‌ಡೌನ್ ಹೇರಿದ ಬಳಿಕ ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ, ತಿಂಗಳಿಂದ ತಿಂಗಳಿಗೆ ಹೆಚ್ಚುತ್ತಲೇ ಇದೆ. ಲಾಕ್‌ಡೌನ್ ಮುಗಿದರೂ ಉದ್ಯೋಗ ಕ್ಷೇತ್ರದಲ್ಲಿ ಚೇತರಿಕೆ ಕಂಡು ಬಂದಿಲ್ಲ. ಇಂದಿಗೂ ದೇಶದ ಯುವಜನರು ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ಅಂಕಿಅಂಶಗಳ ಪ್ರಕಾರ, 2021ರ ಆಗಸ್ಟ್‌ನಲ್ಲಿ ನಿರುದ್ಯೋಗ ದರವು 8.3%ಗೆ ಏರಿಕೆಯಾಗಿದೆ. ಜುಲೈನಲ್ಲಿ 37.4% ಇದ್ದ ಉದ್ಯೋಗ ದರವು ಆಗಸ್ಟ್‌ನಲ್ಲಿ 37.2% ಕುಸಿದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ, ಜುಲೈನಲ್ಲಿ 399.7 ಮಿಲಿಯನ್ (39.9 ಕೋಟಿ) ಇದ್ದ ಉದ್ಯೋಗಗಳು ಆಗಸ್ಟ್‌ನಲ್ಲಿ 397.8 ಮಿಲಿಯನ್‌ಗೆ (39.7 ಕೋಟಿ) ಕುಗ್ಗಿದೆ. ಅಂದರೆ, ಒಂದೇ ತಿಂಗಳಲ್ಲಿ 1.9 ಮಿಲಿಯನ್ (19 ಲಕ್ಷ) ಉದ್ಯೋಗಗಳು ನಷ್ಟವಾಗಿವೆ.

ಇದನ್ನು ಕ್ಷೇತ್ರವಾರು ನೋಡುವುದಾದರೆ, ಕೃಷಿ ಕ್ಷೇತ್ರದಲ್ಲಿ ಆಗಸ್ಟ್ ಅಂತ್ಯದ ವೇಳೆಗೆ 8.7 ಮಿಲಿಯನ್ ಉದ್ಯೋಗಗಳು ಕಡಿತಗೊಂಡಿವೆ. ಅಂದರೆ, ಜುಲೈ ತಿಂಗಳಲ್ಲಿ ಖಾರಿಫ್ ಬೆಳೆ ಬಿತ್ತನೆಯ ಸಮಯದಲ್ಲಿ ಸರಾಸರಿ 124 ಮಿಲಿಯನ್ ಇದ್ದ ಕೃಷಿ ಕ್ಷೇತ್ರದ ಉದ್ಯೋಗಗಳು ಆಗಸ್ಟ್‌ನಲ್ಲಿ 116 ಮಿಲಿಯನ್‌ಗೆ ಕುಸಿದಿವೆ.

ಕೈಗಾರಿಕಾ ವಲಯದಲ್ಲಿ ಜುಲೈನಲ್ಲಿ 2.5 ಮಿಲಿಯನ್ ಉದ್ಯೋಗ ನಷ್ಟವಾದರೆ, ಆಗಸ್ಟ್‌ನಲ್ಲಿ 0.94 ಮಿಲಿಯನ್ ಉದ್ಯೋಗಗಳು ಕಡಿತವಾಗಿವೆ. ಇನ್ನು, ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳಲ್ಲಿ ಸುಮಾರು 10 ಮಿಲಿಯನ್ ಕಾರ್ಮಿಕರು ಶಾಶ್ವತವಾಗಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನ (ಮಾರ್ಚ್ 2020) ಮೊದಲು, ಉತ್ಪಾದನಾ ವಲಯವು ಸುಮಾರು 40 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಇದು ಏಪ್ರಿಲ್ 2020ರಲ್ಲಿ 21 ಮಿಲಿಯನ್‌ಗೆ ಕುಸಿಯಿತು. ಜುಲೈ 2020ರ ವೇಳೆಗೆ 30 ಮಿಲಿಯನ್ ಸಮೀಪಕ್ಕೆ ಉದ್ಯೋಗ ಕ್ಷೇತ್ರ ಸುಧಾರಿಸಿತು. ನಂತರ, ಫೆಬ್ರವರಿ 2021ರವರೆಗೆ 30 ಮಿಲಿಯನ್ ಗಡಿಯಲ್ಲಿತ್ತು. ಆದರೆ, ಕೊರೊನಾ 2ನೇ ಅಲೆಯ ವೇಳೆ ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಪ್ರಮಾಣವು 26 ಮಿಲಿಯನ್‌ಗೆ ಕುಸಿಯಿತು. ಜುಲೈ ವೇಳೆಗೆ ಇದು ಸುಮಾರು 29 ಮಿಲಿಯನ್‌ಗೆ ಏರಿಕೆಯಾಗಿ ಚೇತರಿಸಿಕೊಂಡಿತು. ಆದರೆ, ಆಗಸ್ಟ್‌ನಲ್ಲಿ ಮತ್ತೆ 28 ಮಿಲಿಯನ್‌ಗೆ ಕುಸಿದುಹೋಗಿದೆ. 2ನೇ ಅಲೆಯ ಲಾಕ್‌ಡೌನ್ ನಂತರವೂ ಆಗಸ್ಟ್‌ನಲ್ಲಿ ಸರಾಸರಿ ಒಂದು ಮಿಲಿಯನ್ ಉದ್ಯೋಗ ನಷ್ಟವು ನಿರಾಶಾದಾಯಕ ಪರಿಸ್ಥಿತಿಯನ್ನು ಚಿತ್ರಿಸುತ್ತಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ, ಕೊರೊನಾ ಪೂರ್ವದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿದ್ದ 40 ಮಿಲಿಯನ್ ಉದ್ಯೊಗ ಎಂಬುದು ಈಗ ತುಂಬಾ ದೂರದ ಮಾತಿನಂತೆ ಕಾಣುತ್ತದೆ.

ಇದೇ ವೇಳೆ ಉತ್ಪಾದನಾ ಕ್ಷೇತ್ರದಿಂದ ಹೊರನೂಕಲ್ಪಟ್ಟವರನ್ನು ಸೇವಾ ಕ್ಷೇತ್ರ ಸೆಳೆದಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನವು ಆರ್ಥಿಕ ಭದ್ರತೆಯನ್ನು ಒದಗಿಸದಿದ್ದರೂ ತಾತ್ಕಾಲಿಕ ನಿಟ್ಟುಸಿರು ಬಿಡಲು ನೆರವಾಗಿವೆ. ಆಗಸ್ಟ್‌ನಲ್ಲಿ ಸೇವಾ ವಲಯವು 8.5 ಮಿಲಿಯನ್ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸಿದೆ. ವೈಯಕ್ತಿಕ ವೃತ್ತಿಪರೇತರ ಸೇವೆಗಳು ಮತ್ತು ಚಿಲ್ಲರೆ ವ್ಯಾಪಾರ, ಮನೆಕೆಲಸದವರು, ಮನೆ ಅಡುಗೆಯವರು, ಬ್ಯೂಟಿಷಿಯನ್‌ಗಳು, ಮಸಾಜ್ ಮಾಡುವವರು, ಜಿಮ್ನಾಷಿಯಂ ತರಬೇತುದಾರರು, ಕ್ಷೌರಿಕರು, ಕೊಳಾಯಿಗಾರರು, ತೋಟಗಾರರು, ಭದ್ರತಾ ಸಿಬ್ಬಂದಿ, ಕ್ಯಾಬ್ ಚಾಲಕರು ಮುಂತಾದವರು ಈ ವಲಯದಲ್ಲಿ ಸೇರಿದ್ದಾರೆ. ಆಗಸ್ಟ್‌ನಲ್ಲಿ ಅಂತಹ ಉದ್ಯೋಗಗಳು 4.7 ಮಿಲಿಯನ್ ಹೆಚ್ಚಳವಾಗಿದೆ. ಈ ವರ್ಗದಲ್ಲಿನ ಒಟ್ಟು ಉದ್ಯೋಗ ಸುಮಾರು 30 ಮಿಲಿಯನ್‌ನಷ್ಟಿದೆ. ಜೂನ್ ಮತ್ತು ಜುಲೈನಲ್ಲಿ 23.9 ಮಿಲಿಯನ್‌ಗೆ ಕುಸಿದಿದ್ದ ಈ ರೀತಿಯ ಉದ್ಯೋಗಗಳು 28.6 ಮಿಲಿಯನ್‌ಗೆ ಏರಿದ ಕಾರಣ ಆಗಸ್ಟ್ ಭಾಗಶಃ ಚೇತರಿಕೆ ಕಂಡಿದೆ.

ಇನ್ನು, ಆಗಸ್ಟ್‌ನಲ್ಲಿ ಉದ್ಯೋಗದಲ್ಲಿ ಹೆಚ್ಚಳವನ್ನು ಕಂಡ ಸೇವಾ ವಲಯ ಎಂದರೆ ಚಿಲ್ಲರೆ ವ್ಯಾಪಾರವಾಗಿದೆ. ಈ ಉದ್ಯಮದಲ್ಲಿ ಉದ್ಯೋಗವು ದಾಖಲೆಯ 64.4 ಮಿಲಿಯನ್ ತಲುಪಿದೆ. ಜುಲೈನಲ್ಲಿ ಇದು 59.9 ಮಿಲಿಯನ್ ಆಗಿತ್ತು. ಆದರೆ, ಈ ಕ್ಷೇತ್ರದಲ್ಲಿ ನಿಯತವಾಗಿ ವೇತನ ನೀಡುವ ಉದ್ಯೋಗಗಳು ಕೇವಲ 0.94 ಮಿಲಿಯನ್‌ಗಳಷ್ಟು ಮಾತ್ರ ಹೆಚ್ಚಾಗಿವೆ.

2020ರ ಸೆಪ್ಟೆಂಬರ್‌ನಲ್ಲಿ 6.68% ಇದ್ದ ನಿರುದ್ಯೋಗ ದರವು, 2021ರ ಆಗಸ್ಟ್‌ನಲ್ಲಿ 8.23%ಗೆ ಏರಿಕೆಯಾಗಿದೆ. ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು ಶೇ.42ರಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನ ಈ ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಈ ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

“ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಲಾಕ್‌ಡೌನ್‌ನಿಂದ ಕೆಲಸ ಹೋಯ್ತು. ಕೃಷಿ ಮಾಡೋಣ ಎಂದರೆ ಸರಿಯಾದ ಮಳೆಯಿಲ್ಲ. ಹಲವೆಡೆ ಪ್ರವಾಹ ಎಬ್ಬಿಸಿರುವ ಮಳೆ ನಮ್ಮ ಮೇಲೆ ಮುನಿಸಿಕೊಂಡಿದೆ. ಹೀಗಾಗಿ ಹೊಟ್ಟೆಪಾಡಿಗಾಗಿ ಪರಿತಪಿಸುವ ಸ್ಥಿತಿ ಕುಟುಂಬದಲ್ಲಿದೆ. ಹೀಗಾಗಿ ಊರಲ್ಲಿದ್ದ ಬೈಕ್ ತಂದು ಬೆಂಗಳೂರಿನಲ್ಲಿ ರ್‍ಯಾಪಿಡೋ ಓಡಿಸುತ್ತಿದ್ದೇನೆ. ಪೆಟ್ರೋಲ್ ಬೆಲೆ ಏರಿಕೆ ಅದಕ್ಕೂ ಹೊಡೆತ ಕೊಟ್ಟಿದೆ. ಬೇರೆ ದಾರಿಯಿಲ್ಲದ ಕಾರಣ ಇದನ್ನೇ ನಂಬಿ ನಾನು-ನನ್ನ ಕುಟುಂಬ ಬದುಕುತ್ತಿದ್ದೇವೆ.” – ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗಿಯಾಗಿದ್ದು ಉದ್ಯೋಗ ಕಳೆದುಕೊಂಡ ನವೀನ್ (ರ್‍ಯಾಪಿಡೋ ಚಾಲಕ).

ಇದನ್ನೂ ಓದಿ:ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!


ಇದನ್ನೂ ಓದಿ: ಆಗಸ್ಟ್‌ನಲ್ಲಿ 15 ಲಕ್ಷ ಭಾರತೀಯರ ಉದ್ಯೋಗ ನಷ್ಟ; ಶೇ. 8.32ಕ್ಕೇರಿದ ನಿರುದ್ಯೋಗ ಪ್ರಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...