Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...