Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...