Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...