Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...