Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...