Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...