Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....