Homeಮುಖಪುಟಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ವಿಗ್ರಹದ ಪರಿಶೀಲನೆಯ ನಂತರ ಪುರಾತತ್ವ ಇಲಾಖೆ ನೀಡಿರುವ ವರದಿಯನ್ನು ಆಧಾರಿಸಿ ಕೋರ್ಟ್ ತೀರ್ಪು ನೀಡಿದೆ.

- Advertisement -
- Advertisement -

ಸೇಲಂ ಜಿಲ್ಲೆಯ ದೇವಾಲಯದಲ್ಲಿರುವ ಮುಖ್ಯ ದೇವತೆಯ ವಿಗ್ರಹ ಬುದ್ಧನದೇ ಹೊರತು ಹಿಂದೂ ದೇವತೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಪುರಾತತ್ವ ಇಲಾಖೆ ಸಲ್ಲಿಸಿದ ವರದಿಯನ್ನು ಆಧಾರಿಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.

ಏನಿದು ವಿವಾದ?

ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ. ಇದನ್ನು ಹಲವು ವರ್ಷಗಳಿಂದ ಬೌದ್ಧ ಧರ್ಮದ ಅನುಯಾಯಿಗಳು ಪೂಜಿಸುತ್ತಿದ್ದಾರೆ ಎಂದು ಸೇಲಂನ ಬುದ್ಧ ಟ್ರಸ್ಟ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಕಾಲ ನಂತರದಲ್ಲಿ ಈ ವಿಗ್ರಹವನ್ನು ಹಿಂದೂ ದೇವತೆಯಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳು ಪೂಜಿಸುತ್ತಿದ್ದಾರೆ ಎಂದು ಟ್ರಸ್ಟ್ ಮನವಿಯಲ್ಲಿ ಉಲ್ಲೇಖಿಸಿತ್ತು.

ದೇವಾಲಯದಲ್ಲಿನ ವಿಗ್ರಹದ ಸಮೀಕ್ಷೆ ಮತ್ತು ಪರಿಶೀಲನೆ ನಡೆಸುವಂತೆ ತಮಿಳುನಾಡು ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು.

ವರದಿ ನೀಡಿರುವ ಪುರಾತತ್ವ ಇಲಾಖೆಯು, ‘ಈ ವಿಗ್ರಹ ಬುದ್ಧನದ್ದಾಗಿದೆ’ ಎಂದು ಸ್ಪಷ್ಟಪಡಿಸಿರುವುದಾಗಿ ಹೈಕೋರ್ಟ್ ಜುಲೈ 19ರಂದು ನೀಡಿರುವ ಆದೇಶದಲ್ಲಿ ಉಲ್ಲೇಖಿಸಿದೆ. ಈ ಆದೇಶವು ಆಗಸ್ಟ್ 1 ರಂದು ಲಭ್ಯವಾಗಿದೆ.

ಪುರಾತತ್ವ ಇಲಾಖೆ ನೀಡಿದ ಆಧಾರಗಳೇನು?

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಕುಂಕುಮ ಮತ್ತು ಶ್ರೀಗಂಧದ ಮೂಲಕ ಸ್ವಚ್ಛಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದವು.

“ಕಮಲದ ಪೀಠದ ಮೇಲೆ ಅರ್ಧಪದ್ಮಾಸನದಲ್ಲಿ ಕುಳಿತಿರುವಂತೆ ಈ ವಿಗ್ರಹವನ್ನು ಕೆತ್ತಲಾಗಿದೆ. ಕೈಗಳನ್ನು ‘ಧ್ಯಾನ ಮುದ್ರೆ’ಯಲ್ಲಿ ಇರಿಸಲಾಗಿದೆ. ತಲೆಯು ಬುದ್ಧ ವಿಗ್ರಹದ ಲಕ್ಷಣಗಳಾದ ಗುಂಗುರು ಕೂದಲು, ಉದ್ದನೆಯ ಕಿವಿಯೋಲೆಗಳನ್ನು ಹೊಂದಿದೆ. ಈ ವಿಗ್ರಹವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (“ಶ್ರೇಷ್ಠ ಲಕ್ಷಣಗಳು”) ಸೂಚಿಸುತ್ತದೆ” ಎಂದು ತಿಳಿಸಿದೆ.

ಮದ್ರಾಸ್ ಹೈಕೋರ್ಟ್ ಹೇಳಿದ್ದೇನು?

“ಶಿಲ್ಪವನ್ನು ಪರಿಶೀಲಿಸಿದ ನಂತರ, ತಮ್ಮ ಕಡತಗಳಲ್ಲಿ ಲಭ್ಯವಿರುವ ಪುರಾತತ್ವ ಮತ್ತು ಐತಿಹಾಸಿಕ ಪುರಾವೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ಬಳಿಕ, ಈ ಶಿಲ್ಪವು ಬುದ್ಧನ ಹಲವಾರು ಮಹಾಲಕ್ಷಣಗಳನ್ನು (ಶ್ರೇಷ್ಠ ಲಕ್ಷಣಗಳು) ಚಿತ್ರಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ” ಎಂದು ಮದ್ರಾಸ್‌ ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

“ಇದು ದೇವಾಲಯವಾಗಿದೆ ಎಂಬ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಊಹೆಯು ಇನ್ನು ಮುಂದೆ ಸಮರ್ಥನೀಯವಲ್ಲ. ಇದರ ನಿಯಂತ್ರಣವನ್ನು ಬೇರೆಯ ಅಧಿಕಾರಿಗಳ ಕೈಗೆ ಕಡ್ಡಾಯವಾಗಿ ನೀಡಬೇಕು” ಎಂದು ಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿರಿ: ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದಾರೆ. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

“ಸ್ಥಳಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಅನುಮತಿ ನೀಡಬಹುದು. ಆದರೆ ಬುದ್ಧನ ಶಿಲ್ಪಕ್ಕೆ ಯಾವುದೇ ಪೂಜೆ ಅಥವಾ ಇತರ ವಿಧಿವಿಧಾನ ನಡೆಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶವು ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸೇಲಂ ದೇವಾಲಯದಲ್ಲಿ ಹಿಂದೂದೇವರೆಂದೂ ಪೂಜೆ ಮಾಡುತ್ತಿರುವುದೂ ವಿಗ್ರಹ ಬುದ್ದನ ವಿಗ್ರಹವಲ್ಲ; ಹಿಂದೂ ವಿಗ್ರಹವಲ್ಲ; ಬುದ್ದನ ವಿಗ್ರಹವೆಂದೂ ನ್ಯಾಯಾಲಯಕ್ಕೆ ಬುದ್ದ ಟ್ರಸ್ಟ್ ನವರದು ತಪ್ಪು ಗ್ರಹಿಕೆ; ಪುರಾತನ ಇಲಾಖೆಯವರು ಮೂರ್ತಿ ಕಮಲ (ತಾವರೆ ) ಮೇಲೆ ಕುಳಿತಿದೆಂದೂ ಇಲಾಖೆ ಹೇಳಿದೆ. ತಾವರೆ ಮೇಲೆ ಕುಳಿತಿದೆಂದರೆ, ಬುದ್ದನ ಮೂರ್ತಿ ಹೇಳುವುದು ನ್ಯಾಯಾಲಯದ ತೀರ್ಪು ತಪ್ಪು. ಬುದ್ದನ ಅವತಾರದಲ್ಲಿ ಇದೊಂದು ಹೇಳುವುದು ತಪ್ಪು. ಜೈನ ಧರ್ಮದಲ್ಲಿ ಸಮವಸರಣವಿದೆ. ಜೈನ ತೀರ್ಥಂಕರ ಸಮವಸರಣದಲ್ಲಿ ಕಮಲದ ಮೇಲೆ ಕುಳಿತು ಧರ್ಮ ಭೋದನೆ ಮಾಡುವ ಸನ್ನಿವೇಶ. ಹಾಗಾಗಿ ಅದು ಜೈನ ತೀರ್ಥಂಕರ ಮೂರ್ತಿ. ಮದ್ರಾಸ್ ಹೈಕೋರ್ಟು ನಲ್ಲಿ ಜೈನಧರ್ಮದ ಪರವಾಗಿ ಯಾರೂ ವಾದಿಸುವವರು ಇಲ್ಲದಿರುವುದರಿಂದ ತೀರ್ಪು ಕೊಟ್ಟಿರಬೇಕು…!

  2. ಆದರೆ, ಹಿಂದೂ ದೇವರಂತೂ ಅಲ್ಲ .ಇದು ಮುಖ್ಯವಾದ ವಿಷಯವಾಗಿರುವುದು.ಪುರಾತತ್ವ ಇಲಾಖೆಯವರು ಪರಿಶೀಲಿಸಿ ನೀಡಿರುವ ಮಾಹಿತಿ ಆಗಿರುವುದರಿಂದ ಅದು ಬುದ್ಧನ ಮೂರ್ತಿ ಎಂಬುದು ಸತ್ಯ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...