Homeಮುಖಪುಟಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

- Advertisement -
- Advertisement -

ಮುಂಬೈ ಮೂಲದ ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಗುಜರಾತ್‌ನ ಜುನಾಗಢದಲ್ಲಿ ದ್ವೇಷ ಭಾಷಣ ಮಾಡಿದ ಆರೋಪವನ್ನು ಮಾಡಲಾಗಿದೆ. ಆದರೆ ಅವರು ದ್ವೇಷ ಭಾಷಣವನ್ನು ಮಾಡಿಲ್ಲ, ಆರೆಸ್ಸೆಸ್‌, ವಿಎಚ್‌ಪಿ ಒತ್ತಡದಿಂದ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲ್ಮಾನ್ ಅಝ್ಹರಿ ಪರ ವಕೀಲರು ಹೇಳಿದ್ದಾರೆ.

ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ಅಝ್ಹರಿಯನ್ನು ಇರಿಸಲಾಗಿದೆ ಮತ್ತು ಅವರ ನೂರಾರು ಬೆಂಬಲಿಗರು ಪೊಲೀಸ್‌ ಠಾಣೆಯ ಹೊರಗೆ ಜಮಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಆ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ಮುಫ್ತಿ ಸಲ್ಮಾನ್ ಅಝ್ಹರಿ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರ ವಕೀಲರು, ಮುಫ್ತಿ ಸಲ್ಮಾನ್‌ ತನಿಖೆಗೆ ಸಹಕರಿಸಲು ಸಿದ್ಧರಿದ್ದರೂ, ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಮುಫ್ತಿ ಸಲ್ಮಾನ್‌ ಬಂಧನಕ್ಕೆ ಮೊದಲು, ಅವರ ಎಕ್ಸ್  ಖಾತೆಯಿಂದ ಸರಣಿ ಪೋಸ್ಟ್‌ಗಳನ್ನು ಮಾಡಲಾಗಿದೆ. ಗುಜರಾತ್ ಎಟಿಎಸ್, ಮುಂಬೈ ಎಟಿಎಸ್ ಮತ್ತು ಚಿರಾಗ್ ನಗರ ಪೊಲೀಸ್ ಠಾಣೆಯ ಪೊಲೀಸರ ಜಂಟಿ ತಂಡ ಬೆಳಿಗ್ಗೆ 11:56ಕ್ಕೆ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ. 25-30 ಮಂದಿ ಪೊಲೀಸರು ಮಫ್ತಿ ಸಲ್ಮಾನ್ ಅವರ ಮನೆಯನ್ನು ಸತ್ತುವರಿದು ಅವರ ನಿವಾಸದಿಂದ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ದ್ವೇಷ ಭಾಷಣದ ಪ್ರಕರಣದಲ್ಲಿ ಬಂಧಿತರಾಗಿರುವ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಕೀಲರಾದ ವಾಹಿದ್ ಶೇಖ್ ಈ ಬಗ್ಗೆ ಮಾತನಾಡಿದ್ದು, 35-40 ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಮನೆಗೆ ಬಂದಿದ್ದಾರೆ. ನಾವು ಅವರು ಬಂಧನದ ಬಗ್ಗೆ ಕಾರಣವನ್ನು ಕೇಳಿದ್ದೇವೆ. ಆದರೆ ಏನನ್ನೂ ತಿಳಿಸಲಾಗಿಲ್ಲ, ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಿರುದ್ಧ ಗುಜರಾತ್‌ನಲ್ಲಿ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ನೀಡಿದ ಭಾಷಣದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ, ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ವಿಎಚ್‌ಪಿ ಮತ್ತು ಆರೆಸ್ಸೆಸ್‌ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ಕಾರಣ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
ಜನವರಿ 31ರ ರಾತ್ರಿ ಗುಜರಾತ್‌ನ ಜುನಾಗಢ್‌ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಫ್ತಿ ಸಲ್ಮಾನ್ ಅಝ್ಹರಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದ್ವೇಷ ಭಾಷಣದ ಆರೋಪದಲ್ಲಿ ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ವಿರುದ್ಧವೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಬಿ ಮತ್ತು 505(2)ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಬಂಧನದ ಬೆನ್ನಲ್ಲಿ ಅವರ ಬೆಂಬಲಿಗರು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಮುಫ್ತಿ ಸಲ್ಮಾನ್ ಅಝ್ಹರಿ, ನಾನೇನೂ ಕ್ರಿಮಿನಲ್ ಅಲ್ಲ ಅಥವಾ ಅಪರಾಧ ಎಸಗಿದ ಕಾರಣಕ್ಕೆ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಕೂಡ ಅವರಿಗೆ ಸಹಕಾರ ನೀಡುತ್ತಿದ್ದೇನೆ. ನೀವು ಯಾವುದೇ ಕಾರಣಕ್ಕೆ ಪ್ರತಿಭಟನೆ ನಡೆಸದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಮುಫ್ತಿ ಸಲ್ಮಾನ್ ಅಝ್ಹರಿ ಯಾರು?

ಮುಂಬೈನ ಸುನ್ನಿ ಇಸ್ಲಾಮಿಕ್ ವಿದ್ವಾಂಸರಾದ ಮುಫ್ತಿ ಸಲ್ಮಾನ್ ಅಝ್ಹರಿ ಅವರು ಜಾಮಿಯಾ ರಿಯಾಜುಲ್ ಜನ್ನಾ, ಅಲ್-ಅಮಾನ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್ ಮತ್ತು ದಾರುಲ್ ಅಮಾನ್ ಸ್ಥಾಪಕರು. ಮುಫ್ತಿ ಸಲ್ಮಾನ್ ಪ್ರಪಂಚದಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಅವರು ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...