Homeಮುಖಪುಟಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

- Advertisement -
- Advertisement -

ಮುಂಬೈ ಮೂಲದ ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಗುಜರಾತ್‌ನ ಜುನಾಗಢದಲ್ಲಿ ದ್ವೇಷ ಭಾಷಣ ಮಾಡಿದ ಆರೋಪವನ್ನು ಮಾಡಲಾಗಿದೆ. ಆದರೆ ಅವರು ದ್ವೇಷ ಭಾಷಣವನ್ನು ಮಾಡಿಲ್ಲ, ಆರೆಸ್ಸೆಸ್‌, ವಿಎಚ್‌ಪಿ ಒತ್ತಡದಿಂದ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲ್ಮಾನ್ ಅಝ್ಹರಿ ಪರ ವಕೀಲರು ಹೇಳಿದ್ದಾರೆ.

ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ಅಝ್ಹರಿಯನ್ನು ಇರಿಸಲಾಗಿದೆ ಮತ್ತು ಅವರ ನೂರಾರು ಬೆಂಬಲಿಗರು ಪೊಲೀಸ್‌ ಠಾಣೆಯ ಹೊರಗೆ ಜಮಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಆ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ಮುಫ್ತಿ ಸಲ್ಮಾನ್ ಅಝ್ಹರಿ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರ ವಕೀಲರು, ಮುಫ್ತಿ ಸಲ್ಮಾನ್‌ ತನಿಖೆಗೆ ಸಹಕರಿಸಲು ಸಿದ್ಧರಿದ್ದರೂ, ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಮುಫ್ತಿ ಸಲ್ಮಾನ್‌ ಬಂಧನಕ್ಕೆ ಮೊದಲು, ಅವರ ಎಕ್ಸ್  ಖಾತೆಯಿಂದ ಸರಣಿ ಪೋಸ್ಟ್‌ಗಳನ್ನು ಮಾಡಲಾಗಿದೆ. ಗುಜರಾತ್ ಎಟಿಎಸ್, ಮುಂಬೈ ಎಟಿಎಸ್ ಮತ್ತು ಚಿರಾಗ್ ನಗರ ಪೊಲೀಸ್ ಠಾಣೆಯ ಪೊಲೀಸರ ಜಂಟಿ ತಂಡ ಬೆಳಿಗ್ಗೆ 11:56ಕ್ಕೆ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ. 25-30 ಮಂದಿ ಪೊಲೀಸರು ಮಫ್ತಿ ಸಲ್ಮಾನ್ ಅವರ ಮನೆಯನ್ನು ಸತ್ತುವರಿದು ಅವರ ನಿವಾಸದಿಂದ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ದ್ವೇಷ ಭಾಷಣದ ಪ್ರಕರಣದಲ್ಲಿ ಬಂಧಿತರಾಗಿರುವ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಕೀಲರಾದ ವಾಹಿದ್ ಶೇಖ್ ಈ ಬಗ್ಗೆ ಮಾತನಾಡಿದ್ದು, 35-40 ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಮನೆಗೆ ಬಂದಿದ್ದಾರೆ. ನಾವು ಅವರು ಬಂಧನದ ಬಗ್ಗೆ ಕಾರಣವನ್ನು ಕೇಳಿದ್ದೇವೆ. ಆದರೆ ಏನನ್ನೂ ತಿಳಿಸಲಾಗಿಲ್ಲ, ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಿರುದ್ಧ ಗುಜರಾತ್‌ನಲ್ಲಿ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ನೀಡಿದ ಭಾಷಣದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ, ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ವಿಎಚ್‌ಪಿ ಮತ್ತು ಆರೆಸ್ಸೆಸ್‌ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ಕಾರಣ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
ಜನವರಿ 31ರ ರಾತ್ರಿ ಗುಜರಾತ್‌ನ ಜುನಾಗಢ್‌ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಫ್ತಿ ಸಲ್ಮಾನ್ ಅಝ್ಹರಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದ್ವೇಷ ಭಾಷಣದ ಆರೋಪದಲ್ಲಿ ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ವಿರುದ್ಧವೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಬಿ ಮತ್ತು 505(2)ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಬಂಧನದ ಬೆನ್ನಲ್ಲಿ ಅವರ ಬೆಂಬಲಿಗರು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಮುಫ್ತಿ ಸಲ್ಮಾನ್ ಅಝ್ಹರಿ, ನಾನೇನೂ ಕ್ರಿಮಿನಲ್ ಅಲ್ಲ ಅಥವಾ ಅಪರಾಧ ಎಸಗಿದ ಕಾರಣಕ್ಕೆ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಕೂಡ ಅವರಿಗೆ ಸಹಕಾರ ನೀಡುತ್ತಿದ್ದೇನೆ. ನೀವು ಯಾವುದೇ ಕಾರಣಕ್ಕೆ ಪ್ರತಿಭಟನೆ ನಡೆಸದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಮುಫ್ತಿ ಸಲ್ಮಾನ್ ಅಝ್ಹರಿ ಯಾರು?

ಮುಂಬೈನ ಸುನ್ನಿ ಇಸ್ಲಾಮಿಕ್ ವಿದ್ವಾಂಸರಾದ ಮುಫ್ತಿ ಸಲ್ಮಾನ್ ಅಝ್ಹರಿ ಅವರು ಜಾಮಿಯಾ ರಿಯಾಜುಲ್ ಜನ್ನಾ, ಅಲ್-ಅಮಾನ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್ ಮತ್ತು ದಾರುಲ್ ಅಮಾನ್ ಸ್ಥಾಪಕರು. ಮುಫ್ತಿ ಸಲ್ಮಾನ್ ಪ್ರಪಂಚದಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಅವರು ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...