Homeಮುಖಪುಟಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

- Advertisement -
- Advertisement -

ಮುಂಬೈ ಮೂಲದ ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಗುಜರಾತ್‌ನ ಜುನಾಗಢದಲ್ಲಿ ದ್ವೇಷ ಭಾಷಣ ಮಾಡಿದ ಆರೋಪವನ್ನು ಮಾಡಲಾಗಿದೆ. ಆದರೆ ಅವರು ದ್ವೇಷ ಭಾಷಣವನ್ನು ಮಾಡಿಲ್ಲ, ಆರೆಸ್ಸೆಸ್‌, ವಿಎಚ್‌ಪಿ ಒತ್ತಡದಿಂದ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲ್ಮಾನ್ ಅಝ್ಹರಿ ಪರ ವಕೀಲರು ಹೇಳಿದ್ದಾರೆ.

ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ಅಝ್ಹರಿಯನ್ನು ಇರಿಸಲಾಗಿದೆ ಮತ್ತು ಅವರ ನೂರಾರು ಬೆಂಬಲಿಗರು ಪೊಲೀಸ್‌ ಠಾಣೆಯ ಹೊರಗೆ ಜಮಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಆ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ಮುಫ್ತಿ ಸಲ್ಮಾನ್ ಅಝ್ಹರಿ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರ ವಕೀಲರು, ಮುಫ್ತಿ ಸಲ್ಮಾನ್‌ ತನಿಖೆಗೆ ಸಹಕರಿಸಲು ಸಿದ್ಧರಿದ್ದರೂ, ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಮುಫ್ತಿ ಸಲ್ಮಾನ್‌ ಬಂಧನಕ್ಕೆ ಮೊದಲು, ಅವರ ಎಕ್ಸ್  ಖಾತೆಯಿಂದ ಸರಣಿ ಪೋಸ್ಟ್‌ಗಳನ್ನು ಮಾಡಲಾಗಿದೆ. ಗುಜರಾತ್ ಎಟಿಎಸ್, ಮುಂಬೈ ಎಟಿಎಸ್ ಮತ್ತು ಚಿರಾಗ್ ನಗರ ಪೊಲೀಸ್ ಠಾಣೆಯ ಪೊಲೀಸರ ಜಂಟಿ ತಂಡ ಬೆಳಿಗ್ಗೆ 11:56ಕ್ಕೆ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ. 25-30 ಮಂದಿ ಪೊಲೀಸರು ಮಫ್ತಿ ಸಲ್ಮಾನ್ ಅವರ ಮನೆಯನ್ನು ಸತ್ತುವರಿದು ಅವರ ನಿವಾಸದಿಂದ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ದ್ವೇಷ ಭಾಷಣದ ಪ್ರಕರಣದಲ್ಲಿ ಬಂಧಿತರಾಗಿರುವ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಕೀಲರಾದ ವಾಹಿದ್ ಶೇಖ್ ಈ ಬಗ್ಗೆ ಮಾತನಾಡಿದ್ದು, 35-40 ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಮನೆಗೆ ಬಂದಿದ್ದಾರೆ. ನಾವು ಅವರು ಬಂಧನದ ಬಗ್ಗೆ ಕಾರಣವನ್ನು ಕೇಳಿದ್ದೇವೆ. ಆದರೆ ಏನನ್ನೂ ತಿಳಿಸಲಾಗಿಲ್ಲ, ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಿರುದ್ಧ ಗುಜರಾತ್‌ನಲ್ಲಿ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ನೀಡಿದ ಭಾಷಣದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ, ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ವಿಎಚ್‌ಪಿ ಮತ್ತು ಆರೆಸ್ಸೆಸ್‌ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ಕಾರಣ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
ಜನವರಿ 31ರ ರಾತ್ರಿ ಗುಜರಾತ್‌ನ ಜುನಾಗಢ್‌ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಫ್ತಿ ಸಲ್ಮಾನ್ ಅಝ್ಹರಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದ್ವೇಷ ಭಾಷಣದ ಆರೋಪದಲ್ಲಿ ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ವಿರುದ್ಧವೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಬಿ ಮತ್ತು 505(2)ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಬಂಧನದ ಬೆನ್ನಲ್ಲಿ ಅವರ ಬೆಂಬಲಿಗರು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಮುಫ್ತಿ ಸಲ್ಮಾನ್ ಅಝ್ಹರಿ, ನಾನೇನೂ ಕ್ರಿಮಿನಲ್ ಅಲ್ಲ ಅಥವಾ ಅಪರಾಧ ಎಸಗಿದ ಕಾರಣಕ್ಕೆ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಕೂಡ ಅವರಿಗೆ ಸಹಕಾರ ನೀಡುತ್ತಿದ್ದೇನೆ. ನೀವು ಯಾವುದೇ ಕಾರಣಕ್ಕೆ ಪ್ರತಿಭಟನೆ ನಡೆಸದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಮುಫ್ತಿ ಸಲ್ಮಾನ್ ಅಝ್ಹರಿ ಯಾರು?

ಮುಂಬೈನ ಸುನ್ನಿ ಇಸ್ಲಾಮಿಕ್ ವಿದ್ವಾಂಸರಾದ ಮುಫ್ತಿ ಸಲ್ಮಾನ್ ಅಝ್ಹರಿ ಅವರು ಜಾಮಿಯಾ ರಿಯಾಜುಲ್ ಜನ್ನಾ, ಅಲ್-ಅಮಾನ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್ ಮತ್ತು ದಾರುಲ್ ಅಮಾನ್ ಸ್ಥಾಪಕರು. ಮುಫ್ತಿ ಸಲ್ಮಾನ್ ಪ್ರಪಂಚದಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಅವರು ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...