Homeಮುಖಪುಟಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

- Advertisement -
- Advertisement -

ಮುಂಬೈ ಮೂಲದ ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಗುಜರಾತ್‌ನ ಜುನಾಗಢದಲ್ಲಿ ದ್ವೇಷ ಭಾಷಣ ಮಾಡಿದ ಆರೋಪವನ್ನು ಮಾಡಲಾಗಿದೆ. ಆದರೆ ಅವರು ದ್ವೇಷ ಭಾಷಣವನ್ನು ಮಾಡಿಲ್ಲ, ಆರೆಸ್ಸೆಸ್‌, ವಿಎಚ್‌ಪಿ ಒತ್ತಡದಿಂದ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲ್ಮಾನ್ ಅಝ್ಹರಿ ಪರ ವಕೀಲರು ಹೇಳಿದ್ದಾರೆ.

ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ಅಝ್ಹರಿಯನ್ನು ಇರಿಸಲಾಗಿದೆ ಮತ್ತು ಅವರ ನೂರಾರು ಬೆಂಬಲಿಗರು ಪೊಲೀಸ್‌ ಠಾಣೆಯ ಹೊರಗೆ ಜಮಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಆ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ಮುಫ್ತಿ ಸಲ್ಮಾನ್ ಅಝ್ಹರಿ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರ ವಕೀಲರು, ಮುಫ್ತಿ ಸಲ್ಮಾನ್‌ ತನಿಖೆಗೆ ಸಹಕರಿಸಲು ಸಿದ್ಧರಿದ್ದರೂ, ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಮುಫ್ತಿ ಸಲ್ಮಾನ್‌ ಬಂಧನಕ್ಕೆ ಮೊದಲು, ಅವರ ಎಕ್ಸ್  ಖಾತೆಯಿಂದ ಸರಣಿ ಪೋಸ್ಟ್‌ಗಳನ್ನು ಮಾಡಲಾಗಿದೆ. ಗುಜರಾತ್ ಎಟಿಎಸ್, ಮುಂಬೈ ಎಟಿಎಸ್ ಮತ್ತು ಚಿರಾಗ್ ನಗರ ಪೊಲೀಸ್ ಠಾಣೆಯ ಪೊಲೀಸರ ಜಂಟಿ ತಂಡ ಬೆಳಿಗ್ಗೆ 11:56ಕ್ಕೆ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ. 25-30 ಮಂದಿ ಪೊಲೀಸರು ಮಫ್ತಿ ಸಲ್ಮಾನ್ ಅವರ ಮನೆಯನ್ನು ಸತ್ತುವರಿದು ಅವರ ನಿವಾಸದಿಂದ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ದ್ವೇಷ ಭಾಷಣದ ಪ್ರಕರಣದಲ್ಲಿ ಬಂಧಿತರಾಗಿರುವ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಕೀಲರಾದ ವಾಹಿದ್ ಶೇಖ್ ಈ ಬಗ್ಗೆ ಮಾತನಾಡಿದ್ದು, 35-40 ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಮನೆಗೆ ಬಂದಿದ್ದಾರೆ. ನಾವು ಅವರು ಬಂಧನದ ಬಗ್ಗೆ ಕಾರಣವನ್ನು ಕೇಳಿದ್ದೇವೆ. ಆದರೆ ಏನನ್ನೂ ತಿಳಿಸಲಾಗಿಲ್ಲ, ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಿರುದ್ಧ ಗುಜರಾತ್‌ನಲ್ಲಿ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ನೀಡಿದ ಭಾಷಣದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ, ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ವಿಎಚ್‌ಪಿ ಮತ್ತು ಆರೆಸ್ಸೆಸ್‌ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ಕಾರಣ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
ಜನವರಿ 31ರ ರಾತ್ರಿ ಗುಜರಾತ್‌ನ ಜುನಾಗಢ್‌ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಫ್ತಿ ಸಲ್ಮಾನ್ ಅಝ್ಹರಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದ್ವೇಷ ಭಾಷಣದ ಆರೋಪದಲ್ಲಿ ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ವಿರುದ್ಧವೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಬಿ ಮತ್ತು 505(2)ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಬಂಧನದ ಬೆನ್ನಲ್ಲಿ ಅವರ ಬೆಂಬಲಿಗರು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಮುಫ್ತಿ ಸಲ್ಮಾನ್ ಅಝ್ಹರಿ, ನಾನೇನೂ ಕ್ರಿಮಿನಲ್ ಅಲ್ಲ ಅಥವಾ ಅಪರಾಧ ಎಸಗಿದ ಕಾರಣಕ್ಕೆ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಕೂಡ ಅವರಿಗೆ ಸಹಕಾರ ನೀಡುತ್ತಿದ್ದೇನೆ. ನೀವು ಯಾವುದೇ ಕಾರಣಕ್ಕೆ ಪ್ರತಿಭಟನೆ ನಡೆಸದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಮುಫ್ತಿ ಸಲ್ಮಾನ್ ಅಝ್ಹರಿ ಯಾರು?

ಮುಂಬೈನ ಸುನ್ನಿ ಇಸ್ಲಾಮಿಕ್ ವಿದ್ವಾಂಸರಾದ ಮುಫ್ತಿ ಸಲ್ಮಾನ್ ಅಝ್ಹರಿ ಅವರು ಜಾಮಿಯಾ ರಿಯಾಜುಲ್ ಜನ್ನಾ, ಅಲ್-ಅಮಾನ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್ ಮತ್ತು ದಾರುಲ್ ಅಮಾನ್ ಸ್ಥಾಪಕರು. ಮುಫ್ತಿ ಸಲ್ಮಾನ್ ಪ್ರಪಂಚದಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಅವರು ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...