Homeಕರ್ನಾಟಕಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ -...

ಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ – ಡಿವೈಎಫ್‌ಐ

- Advertisement -
- Advertisement -

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ದುಷ್ಕರ್ಮಿಗಳು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನೇರ ಹೊಣೆ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗುರುವಾರ ಆರೋಪಿಸಿದೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಸಂಘಟನೆ ಆರೋಪಿಸಿದೆ. ಸೆಲೂನ್ ಮೇಲೆ ರಾಮ ಸೇನಾ

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮತ್ತು ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, “ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್ ಗಳು ರಾಜಾರೋಷವಾಗಿ ನಡೆಯುತ್ತಲೆ ಇದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ.” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮೀಷನರ್ ಅನುಪಮ್ ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ನೈತಿಕ ಪೊಲೀಸ್ ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮೀಷನರ್ ಅಗ್ರವಾಲ್ ನೇರ ಹೊಣೆಯಾಗಿದ್ದು ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ” ಎಂದು ಡಿವೈಎಫ್‌ಐ ಹೇಳಿದೆ. ಸೆಲೂನ್ ಮೇಲೆ ರಾಮ ಸೇನಾ

“ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿದ್ದಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ” ಎಂದು ಸಂಘಟನೆ ಹೇಳಿದೆ.

ಈ ಎಲ್ಲಾ ಬೆಳವಣೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮಾರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣೆಗೆಗೂ ಕಾಂಗ್ರೇಸ್ ಸರಕಾರವೂ ನೇರ ಹೊಣೆ ಹೊರಬೇಕಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಡಿವೈಎಫ್‌ಐ,  ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಹಿಸಬೇಕು” ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...