Homeಕರ್ನಾಟಕಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ -...

ಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ – ಡಿವೈಎಫ್‌ಐ

- Advertisement -
- Advertisement -

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ದುಷ್ಕರ್ಮಿಗಳು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನೇರ ಹೊಣೆ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗುರುವಾರ ಆರೋಪಿಸಿದೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಸಂಘಟನೆ ಆರೋಪಿಸಿದೆ. ಸೆಲೂನ್ ಮೇಲೆ ರಾಮ ಸೇನಾ

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮತ್ತು ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, “ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್ ಗಳು ರಾಜಾರೋಷವಾಗಿ ನಡೆಯುತ್ತಲೆ ಇದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ.” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮೀಷನರ್ ಅನುಪಮ್ ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ನೈತಿಕ ಪೊಲೀಸ್ ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮೀಷನರ್ ಅಗ್ರವಾಲ್ ನೇರ ಹೊಣೆಯಾಗಿದ್ದು ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ” ಎಂದು ಡಿವೈಎಫ್‌ಐ ಹೇಳಿದೆ. ಸೆಲೂನ್ ಮೇಲೆ ರಾಮ ಸೇನಾ

“ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿದ್ದಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ” ಎಂದು ಸಂಘಟನೆ ಹೇಳಿದೆ.

ಈ ಎಲ್ಲಾ ಬೆಳವಣೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮಾರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣೆಗೆಗೂ ಕಾಂಗ್ರೇಸ್ ಸರಕಾರವೂ ನೇರ ಹೊಣೆ ಹೊರಬೇಕಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಡಿವೈಎಫ್‌ಐ,  ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಹಿಸಬೇಕು” ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...